<p><strong>ವಿಜಯಪುರ: </strong>ಜಿಲ್ಲೆಯ 2.4 ಲಕ್ಷ ರೈತರಿಗೆ ಡಿ.ಸಿ.ಸಿ. ಬ್ಯಾಂಕ್ ಈಗಾಗಲೇ ₹1043 ಕೋಟಿ ಬೆಳೆ ಸಾಲವನ್ನು ಸರ್ಕಾರದ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ.</p>.<p>ಕೋವಿಡ್ನಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿರುವುದನ್ನು ಮತ್ತು ಸಕಾಲಿಕವಾಗಿ ಮುಂಗಾರು ಮಳೆ ಆಗಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದನ್ನು ಪರಿಗಣಿಸಿ ಈ ವರ್ಷ ಡಿ.ಸಿ.ಸಿ. ಬ್ಯಾಂಕ್ ₹200 ಕೋಟಿ ಬೆಳೆ ಸಾಲವನ್ನು ಹೆಚ್ಚುವರಿಯಾಗಿ ವಿತರಿಸಲು ಕ್ರಮಕೈಗೊಂಡಿದೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲ ₹50 ಸಾವಿರಕ್ಕಿಂತ ಕಡಿಮೆ ಇದ್ದಲ್ಲಿ ಅವರಿಗೆ ಮಂಜೂರಾದ ತಾತ್ವಿಕ ಮಿತಿಗೆ ಒಳಪಟ್ಟು ಗರಿಷ್ಠ ₹ 55 ಸಾವಿರದ ವರೆಗೆ ಮತ್ತು ₹50 ಸಾವಿರಕ್ಕಿಂತ ಹೆಚ್ಚಿನ ಸಾಲ ಹೊಂದಿದ ರೈತರಿಗೆ ಸಾಲದ ಬಾಕಿ ಮೇಲೆ ಶೇ10 ರಷ್ಟು ಹೆಚ್ಚುವರಿ ಸಾಲ ನೀಡಲಾಗುತ್ತಿದೆ ಎಂದರು.</p>.<p>ರೈತರಿಗೆ ಹೆಚ್ಚುವರಿ ಸಾಲವನ್ನು ಅರ್ಹತೆ ಆಧರಿಸಿ ಕೂಡಲೇ ನೀಡಲಾಗುತ್ತಿದ್ದು, ಹೆಚ್ಚುವರಿ ಸಾಲವನ್ನು ಈ ಹಿಂದೆ ಪಡೆದ ಸಾಲದ ಗಡುವಿನ ದಿನಾಂಕಕ್ಕೆ ಮರುಪಾವತಿಗೆ ನಿಗದಿಪಡಿಸಿದೆ. ಇದರೊಂದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಪಡೆಯದೇ ಇರುವ ಮತ್ತು ಹೊಸದಾಗಿ ಸದಸ್ಯರಾಗುವ ರೈತರಿಗೆ ಮೊದಲ ಹಂತದಲ್ಲಿ ಅರ್ಹತೆ ಆಧರಿಸಿ ಗರಿಷ್ಠ ₹ 55 ಸಾವಿರ ಬೆಳೆ ಸಾಲ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಜಿಲ್ಲೆಯ 2.4 ಲಕ್ಷ ರೈತರಿಗೆ ಡಿ.ಸಿ.ಸಿ. ಬ್ಯಾಂಕ್ ಈಗಾಗಲೇ ₹1043 ಕೋಟಿ ಬೆಳೆ ಸಾಲವನ್ನು ಸರ್ಕಾರದ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶಿವಾನಂದ ಎಸ್.ಪಾಟೀಲ ತಿಳಿಸಿದ್ದಾರೆ.</p>.<p>ಕೋವಿಡ್ನಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿರುವುದನ್ನು ಮತ್ತು ಸಕಾಲಿಕವಾಗಿ ಮುಂಗಾರು ಮಳೆ ಆಗಿರುವುದರಿಂದ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದನ್ನು ಪರಿಗಣಿಸಿ ಈ ವರ್ಷ ಡಿ.ಸಿ.ಸಿ. ಬ್ಯಾಂಕ್ ₹200 ಕೋಟಿ ಬೆಳೆ ಸಾಲವನ್ನು ಹೆಚ್ಚುವರಿಯಾಗಿ ವಿತರಿಸಲು ಕ್ರಮಕೈಗೊಂಡಿದೆ ಎಂದು ಹೇಳಿದ್ದಾರೆ.</p>.<p>ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲ ₹50 ಸಾವಿರಕ್ಕಿಂತ ಕಡಿಮೆ ಇದ್ದಲ್ಲಿ ಅವರಿಗೆ ಮಂಜೂರಾದ ತಾತ್ವಿಕ ಮಿತಿಗೆ ಒಳಪಟ್ಟು ಗರಿಷ್ಠ ₹ 55 ಸಾವಿರದ ವರೆಗೆ ಮತ್ತು ₹50 ಸಾವಿರಕ್ಕಿಂತ ಹೆಚ್ಚಿನ ಸಾಲ ಹೊಂದಿದ ರೈತರಿಗೆ ಸಾಲದ ಬಾಕಿ ಮೇಲೆ ಶೇ10 ರಷ್ಟು ಹೆಚ್ಚುವರಿ ಸಾಲ ನೀಡಲಾಗುತ್ತಿದೆ ಎಂದರು.</p>.<p>ರೈತರಿಗೆ ಹೆಚ್ಚುವರಿ ಸಾಲವನ್ನು ಅರ್ಹತೆ ಆಧರಿಸಿ ಕೂಡಲೇ ನೀಡಲಾಗುತ್ತಿದ್ದು, ಹೆಚ್ಚುವರಿ ಸಾಲವನ್ನು ಈ ಹಿಂದೆ ಪಡೆದ ಸಾಲದ ಗಡುವಿನ ದಿನಾಂಕಕ್ಕೆ ಮರುಪಾವತಿಗೆ ನಿಗದಿಪಡಿಸಿದೆ. ಇದರೊಂದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಪಡೆಯದೇ ಇರುವ ಮತ್ತು ಹೊಸದಾಗಿ ಸದಸ್ಯರಾಗುವ ರೈತರಿಗೆ ಮೊದಲ ಹಂತದಲ್ಲಿ ಅರ್ಹತೆ ಆಧರಿಸಿ ಗರಿಷ್ಠ ₹ 55 ಸಾವಿರ ಬೆಳೆ ಸಾಲ ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>