<p><strong>ವಿಜಯಪುರ</strong>: ಬೆಳಗಾವಿ, ಜಮಖಂಡಿ ಹಾಗೂ ಮಹಾರಾಷ್ಟದ ಕೃಷ್ಣಾ ತೀರದಲ್ಲಿ ಮಹಾಪುರ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹವನ್ನು ಕಡಿಮೆ ಮಾಡುವ ಉದ್ದೇಶದಿಂದ ಬುಧವಾರ ರಾತ್ರಿ 7 ಗಂಟೆಯಿಂದ ಹೊರಹರಿವನ್ನು 2.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.</p><p>ಜಲಾಶಯದ ಎಲ್ಲಾ 26 ಗೇಟ್ಗಳ ಮೂಲಕ ನೀರು ಬಿಡಲಾಗುತ್ತಿದೆ. ಸಂಜೆ 6ಕ್ಕೆ ಜಲಾಶಯಕ್ಕೆ 1,78,528 ಕ್ಯುಸೆಕ್ ಒಳಹರಿವು ಇತ್ತು. ಒಳಹರಿವಿಗಿಂತ ಹೊರಹರಿವು ಹೆಚ್ಚಿದ್ದರಿಂದ ಜಲಾಶಯದ ಮಟ್ಟ 517.53 ಮೀಟರ್ಗೆ ಕಡಿಮೆಯಾಗಿದೆ. ಇಷ್ಟೇ ಪ್ರಮಾಣದ ನೀರನ್ನು ನಾರಾಯಣಪುರ ಜಲಾಶಯದಿಂದಲೂ ಬಿಡಲಾಗುತ್ತಿದೆ. </p><p>ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಅರಳದಿನ್ನಿ, ಯಲಗೂರು, ಕಾಶಿನಕುಂಟಿ, ಯಲ್ಲಮ್ಮನಬೂದಿಹಾಳ, ಮಸೂತಿ ಗ್ರಾಮಗಳ ವ್ಯಾಪ್ತಿಯ ಜಮೀನಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.</p><p>ಈಗಾಗಲೇ ಮುಂಜಾಗೃತೆಗಾಗಿ ನಿತ್ಯವೂ ಕೃಷ್ಣಾ ತೀರ ಗ್ರಾಮಗಳಲ್ಲಿ ಡಂಗುರ ಸಾರಲಾಗುತ್ತಿದೆ. ಅಲ್ಲಿನ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ನಿಡಗುಂದಿ ತಹಶೀಲ್ದಾರ್ ಎ.ಡಿ. ಅಮರವಾಡಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಬೆಳಗಾವಿ, ಜಮಖಂಡಿ ಹಾಗೂ ಮಹಾರಾಷ್ಟದ ಕೃಷ್ಣಾ ತೀರದಲ್ಲಿ ಮಹಾಪುರ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹವನ್ನು ಕಡಿಮೆ ಮಾಡುವ ಉದ್ದೇಶದಿಂದ ಬುಧವಾರ ರಾತ್ರಿ 7 ಗಂಟೆಯಿಂದ ಹೊರಹರಿವನ್ನು 2.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ.</p><p>ಜಲಾಶಯದ ಎಲ್ಲಾ 26 ಗೇಟ್ಗಳ ಮೂಲಕ ನೀರು ಬಿಡಲಾಗುತ್ತಿದೆ. ಸಂಜೆ 6ಕ್ಕೆ ಜಲಾಶಯಕ್ಕೆ 1,78,528 ಕ್ಯುಸೆಕ್ ಒಳಹರಿವು ಇತ್ತು. ಒಳಹರಿವಿಗಿಂತ ಹೊರಹರಿವು ಹೆಚ್ಚಿದ್ದರಿಂದ ಜಲಾಶಯದ ಮಟ್ಟ 517.53 ಮೀಟರ್ಗೆ ಕಡಿಮೆಯಾಗಿದೆ. ಇಷ್ಟೇ ಪ್ರಮಾಣದ ನೀರನ್ನು ನಾರಾಯಣಪುರ ಜಲಾಶಯದಿಂದಲೂ ಬಿಡಲಾಗುತ್ತಿದೆ. </p><p>ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರದ ಅರಳದಿನ್ನಿ, ಯಲಗೂರು, ಕಾಶಿನಕುಂಟಿ, ಯಲ್ಲಮ್ಮನಬೂದಿಹಾಳ, ಮಸೂತಿ ಗ್ರಾಮಗಳ ವ್ಯಾಪ್ತಿಯ ಜಮೀನಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.</p><p>ಈಗಾಗಲೇ ಮುಂಜಾಗೃತೆಗಾಗಿ ನಿತ್ಯವೂ ಕೃಷ್ಣಾ ತೀರ ಗ್ರಾಮಗಳಲ್ಲಿ ಡಂಗುರ ಸಾರಲಾಗುತ್ತಿದೆ. ಅಲ್ಲಿನ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ನಿಡಗುಂದಿ ತಹಶೀಲ್ದಾರ್ ಎ.ಡಿ. ಅಮರವಾಡಗಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>