<p><strong>ವಿಜಯಪುರ:</strong> ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ 35 ಸದಸ್ಯರು ತಮ್ಮ ಸ್ಥಿರಾಸ್ಥಿ ಮತ್ತು ಚರಾಸ್ಥಿ ವಿವರವನ್ನು ಮೇಯರ್ ಅವರಿಗೆ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಅವರನ್ನು ಅನರ್ಹಗೊಳಿಸಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.</p>.<p>ಬಿಜೆಪಿಯ 17, ಕಾಂಗ್ರೆಸ್ನ 10, ಎಐಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸದಸ್ಯರು ಸೇರಿ ಎಲ್ಲ ಸದಸ್ಯರು ಅನರ್ಹರಾಗಿದ್ದಾರೆ. 2022ರ ಅಕ್ಟೋಬರ್ 28ರಂದು ಮಹಾನಗರ ಪಾಲಿಕೆಗೆ ಚುನಾವಣೆ ನಡೆದಿತ್ತು. ಬಳಿಕ 2024ರ ಜನವರಿ 9ರಂದು ಮೇಯರ್, ಉಪ ಮೇಯರ್ ಆಯ್ಕೆ ನಡೆದು, ಚುನಾಯಿತ ಸದಸ್ಯರು ಅಧಿಕಾರ ಸ್ವೀಕರಿಸಿದ್ದರು.</p>.<p>ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 1976 ಕಲಂ 19ರ ಉಪ ಕಲಂ(1)ರಂತೆ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಸದಸ್ಯರು, ಮೇಯರ್ಗೆ ತಮ್ಮ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆದರೆ, ಮೇಯರ್, ಉಪಮೇಯರ್ ಸೇರಿ ಯಾರೂ ಆಸ್ತಿ ವಿವರ ಸಲ್ಲಿಸಿಲ್ಲ.</p>.<p>ಪಾಲಿಕೆ ಸದಸ್ಯರು ಆಸ್ತಿ ವಿವರ ನೀಡದಿರುವುದನ್ನು ಪ್ರಶ್ನಿಸಿ ಮತ್ತು ಅವರ ಸದಸ್ಯತ್ವ ರದ್ದುಗೊಳಿಸಲು ಕೋರಿ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿಯ ಪ್ರಕಾಶ ಮಿರ್ಜಿ ಮತ್ತು ಕಾಂಗ್ರೆಸ್ನ ಮೈನುದ್ದೀನ್ ಬೀಳಗಿ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ 35 ಸದಸ್ಯರು ತಮ್ಮ ಸ್ಥಿರಾಸ್ಥಿ ಮತ್ತು ಚರಾಸ್ಥಿ ವಿವರವನ್ನು ಮೇಯರ್ ಅವರಿಗೆ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಅವರನ್ನು ಅನರ್ಹಗೊಳಿಸಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.</p>.<p>ಬಿಜೆಪಿಯ 17, ಕಾಂಗ್ರೆಸ್ನ 10, ಎಐಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸದಸ್ಯರು ಸೇರಿ ಎಲ್ಲ ಸದಸ್ಯರು ಅನರ್ಹರಾಗಿದ್ದಾರೆ. 2022ರ ಅಕ್ಟೋಬರ್ 28ರಂದು ಮಹಾನಗರ ಪಾಲಿಕೆಗೆ ಚುನಾವಣೆ ನಡೆದಿತ್ತು. ಬಳಿಕ 2024ರ ಜನವರಿ 9ರಂದು ಮೇಯರ್, ಉಪ ಮೇಯರ್ ಆಯ್ಕೆ ನಡೆದು, ಚುನಾಯಿತ ಸದಸ್ಯರು ಅಧಿಕಾರ ಸ್ವೀಕರಿಸಿದ್ದರು.</p>.<p>ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 1976 ಕಲಂ 19ರ ಉಪ ಕಲಂ(1)ರಂತೆ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಸದಸ್ಯರು, ಮೇಯರ್ಗೆ ತಮ್ಮ ಆಸ್ತಿ ವಿವರ ಸಲ್ಲಿಸಬೇಕಿತ್ತು. ಆದರೆ, ಮೇಯರ್, ಉಪಮೇಯರ್ ಸೇರಿ ಯಾರೂ ಆಸ್ತಿ ವಿವರ ಸಲ್ಲಿಸಿಲ್ಲ.</p>.<p>ಪಾಲಿಕೆ ಸದಸ್ಯರು ಆಸ್ತಿ ವಿವರ ನೀಡದಿರುವುದನ್ನು ಪ್ರಶ್ನಿಸಿ ಮತ್ತು ಅವರ ಸದಸ್ಯತ್ವ ರದ್ದುಗೊಳಿಸಲು ಕೋರಿ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿಯ ಪ್ರಕಾಶ ಮಿರ್ಜಿ ಮತ್ತು ಕಾಂಗ್ರೆಸ್ನ ಮೈನುದ್ದೀನ್ ಬೀಳಗಿ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>