ಅಭಿವೃದ್ಧಿ ನಿಂತ ನೀರಲ್ಲ, ಹರಿಯುವ ನೀರು. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಇನ್ನೂ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿವೆ. ಇಂಡಿ ಜಿಲ್ಲೆಯನ್ನಾಗಿ ಮಾಡುವುದು, ತಾಲ್ಲೂಕಿನ ರೇವಣ ಸಿದ್ದೇಶ್ವರ ಏತ ನೀರಾವರಿಯಿಂದ ರೈತರ ಹೊಲಗಳಿಗೆ ನೀರು ಹರಿಸಬೇಕಾಗಿದೆ. ಇನ್ನು ಹಲವು ಕೆಲಸಗಳು ಆಗಬೇಕಿದ್ದು, ಮುಂದೆ ನಮ್ಮದೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಮಾಡುವ ಭರವಸೆ ನೀಡಿದರು.