<p><strong>ಸಿಂದಗಿ:</strong> ರಾಜ್ಯ ಸರ್ಕಾರದ 2024-25ನೇ ಸಾಲಿನ ‘ಹೈಟೆಕ್ ಹಾರ್ವೆಸ್ಟರ್ ಯೋಜನೆ’ಯಡಿ ₹ 96 ಲಕ್ಷ ಮೌಲ್ಯದ ಕಬ್ಬು ಕಟಾವು ಯಂತ್ರವನ್ನು ಸಾಮಾನ್ಯ ವರ್ಗದ ರೈತರಿಗೆ ₹ 40 ಲಕ್ಷ ರೂಪಾಯಿ ಸಹಾಯಧನ, ಪರಿಶಿಷ್ಟ ಜಾತಿ ರೈತರಿಗೆ ₹ 50 ಲಕ್ಷ ಸಹಾಯಧಾನದಲ್ಲಿ ನೀಡಲಾಗುವುದು. ರೈತರಿಗೆ ಎಸ್ಬಿಐನಿಂದ ಸಾಲದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ರೈತರು ಸದುಪಯೋಗ ಪಡೆಯಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದರು.</p>.<p>ಇಲ್ಲಿಯ ಕೃಷಿ ಇಲಾಖೆ ಆವರಣದಲ್ಲಿ ಮಂಗಳವಾರ ಕಬ್ಬು ಕಟಾವು ಯಂತ್ರದ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘2013-2018 ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗಾಗಿ ಅತ್ಯಂತ ಉಪಯುಕ್ತ ಕಬ್ಬು ಕಟಾವು ಯಂತ್ರ ಯೋಜನೆಯನ್ನು ಲೋಕಾರ್ಪಣೆ ಮಾಡಿತ್ತು. ನಂತರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಆರಂಭಿಸಿದೆ. ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಐದು ಸಕ್ಕರೆ ಕಾರ್ಖಾನೆಗಳಿವೆ. 14 ಲಕ್ಷ ಹೆಕ್ಟೆರ್ಗಳಷ್ಟು ಕಬ್ಬು ಬೆಳೆಯಲಾಗುತ್ತದೆ. ಕಬ್ಬು ಬೆಳೆಗಾರರು ಕಬ್ಬು ಕಟಾವು ವಿಷಯವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಮಾಡುವ ಕಾರ್ಮಿಕರನ್ನು ಕರೆ ತರಬೇಕಾಗಿತ್ತು. ಈ ಯಂತ್ರದಿಂದ ಕಬ್ಬು ಬೆಳೆಗಾರ ರೈತರಿಗೆ ತುಂಬಾ ಸಹಕಾರಿಯಾಗುತ್ತದೆ. ಆರ್ಥಿಕ ನಷ್ಟ ಕೂಡ ಇಲ್ಲವಾಗುತ್ತದೆ’ ಎಂದು ಅವರು ವಿವರಿಸಿದರು.</p>.<p>ಕೃಷಿ ಸಹಾಯಕ ನಿರ್ದೇಶಕ ಎಚ್.ವೈ. ಸಿಂಗೆಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಬ್ಬು ಬೆಳೆಗಾರರಾದ ಆಹೇರಿ ಗ್ರಾಮದ ಮಹಿಬೂಬಸಾಬ ದಾವಲಸಾಬ ರಂಜಣಗಿ ಹಾಗೂ ಚಟ್ಟರಕಿ ಗ್ರಾಮದ ಹಣಮಂತಪ್ಪ ಅಮರಪ್ಪಗೋಳ ಅವರಿಗೆ ಕಬ್ಬು ಕಟಾವು ಯಂತ್ರವನ್ನು ಶಾಸಕರು ಹಸ್ತಾಂತರಿಸಿದರು.</p>.<p>ಕೃಷಿ ಸಮಾಜ ತಾಲ್ಲೂಕು ಸಮಿತಿ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಉಪಾಧ್ಯಕ್ಷ ಬಸಯ್ಯ ಹಿರೇಮಠ ಬಂದಾಳ, ಆಹೇರಿ ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ, ವೈ.ಸಿ.ಮಯೂರ, ಗಂಗಾಧರ ಚಿಂಚೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ರಾಜ್ಯ ಸರ್ಕಾರದ 2024-25ನೇ ಸಾಲಿನ ‘ಹೈಟೆಕ್ ಹಾರ್ವೆಸ್ಟರ್ ಯೋಜನೆ’ಯಡಿ ₹ 96 ಲಕ್ಷ ಮೌಲ್ಯದ ಕಬ್ಬು ಕಟಾವು ಯಂತ್ರವನ್ನು ಸಾಮಾನ್ಯ ವರ್ಗದ ರೈತರಿಗೆ ₹ 40 ಲಕ್ಷ ರೂಪಾಯಿ ಸಹಾಯಧನ, ಪರಿಶಿಷ್ಟ ಜಾತಿ ರೈತರಿಗೆ ₹ 50 ಲಕ್ಷ ಸಹಾಯಧಾನದಲ್ಲಿ ನೀಡಲಾಗುವುದು. ರೈತರಿಗೆ ಎಸ್ಬಿಐನಿಂದ ಸಾಲದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ರೈತರು ಸದುಪಯೋಗ ಪಡೆಯಬೇಕು ಎಂದು ಶಾಸಕ ಅಶೋಕ ಮನಗೂಳಿ ತಿಳಿಸಿದರು.</p>.<p>ಇಲ್ಲಿಯ ಕೃಷಿ ಇಲಾಖೆ ಆವರಣದಲ್ಲಿ ಮಂಗಳವಾರ ಕಬ್ಬು ಕಟಾವು ಯಂತ್ರದ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘2013-2018 ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗಾಗಿ ಅತ್ಯಂತ ಉಪಯುಕ್ತ ಕಬ್ಬು ಕಟಾವು ಯಂತ್ರ ಯೋಜನೆಯನ್ನು ಲೋಕಾರ್ಪಣೆ ಮಾಡಿತ್ತು. ನಂತರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಈಗ ಮತ್ತೆ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಆರಂಭಿಸಿದೆ. ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಐದು ಸಕ್ಕರೆ ಕಾರ್ಖಾನೆಗಳಿವೆ. 14 ಲಕ್ಷ ಹೆಕ್ಟೆರ್ಗಳಷ್ಟು ಕಬ್ಬು ಬೆಳೆಯಲಾಗುತ್ತದೆ. ಕಬ್ಬು ಬೆಳೆಗಾರರು ಕಬ್ಬು ಕಟಾವು ವಿಷಯವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಮಾಡುವ ಕಾರ್ಮಿಕರನ್ನು ಕರೆ ತರಬೇಕಾಗಿತ್ತು. ಈ ಯಂತ್ರದಿಂದ ಕಬ್ಬು ಬೆಳೆಗಾರ ರೈತರಿಗೆ ತುಂಬಾ ಸಹಕಾರಿಯಾಗುತ್ತದೆ. ಆರ್ಥಿಕ ನಷ್ಟ ಕೂಡ ಇಲ್ಲವಾಗುತ್ತದೆ’ ಎಂದು ಅವರು ವಿವರಿಸಿದರು.</p>.<p>ಕೃಷಿ ಸಹಾಯಕ ನಿರ್ದೇಶಕ ಎಚ್.ವೈ. ಸಿಂಗೆಗೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಬ್ಬು ಬೆಳೆಗಾರರಾದ ಆಹೇರಿ ಗ್ರಾಮದ ಮಹಿಬೂಬಸಾಬ ದಾವಲಸಾಬ ರಂಜಣಗಿ ಹಾಗೂ ಚಟ್ಟರಕಿ ಗ್ರಾಮದ ಹಣಮಂತಪ್ಪ ಅಮರಪ್ಪಗೋಳ ಅವರಿಗೆ ಕಬ್ಬು ಕಟಾವು ಯಂತ್ರವನ್ನು ಶಾಸಕರು ಹಸ್ತಾಂತರಿಸಿದರು.</p>.<p>ಕೃಷಿ ಸಮಾಜ ತಾಲ್ಲೂಕು ಸಮಿತಿ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಉಪಾಧ್ಯಕ್ಷ ಬಸಯ್ಯ ಹಿರೇಮಠ ಬಂದಾಳ, ಆಹೇರಿ ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ, ವೈ.ಸಿ.ಮಯೂರ, ಗಂಗಾಧರ ಚಿಂಚೋಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>