<p>ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿದ್ದ ಶತಮಾನದ ಅಂಚಿನ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ನಿರ್ಮಾಣಕ್ಕೆ ₹50 ಲಕ್ಷ ಅನುದಾನವನ್ನು ಮಂಜೂರಿಸಿ, ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಲಾಗಿತ್ತು. ಶತಮಾನದ ಅಂಚಿನ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ಪುನರ್ ನಿರ್ಮಾಣಕ್ಕೆ ಒತ್ತಾಯಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<p>ನಾಡಿನ ಅನೇಕ ಚಲನಚಿತ್ರ ನಟ, ನಟಿಯರು, ಹವ್ಯಾಸಿ ಕಲಾವಿದರಿಗೆ ಅತ್ಯುತ್ತಮ ವೇದಿಕೆ ಆಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ನೆಲಸಮಗೊಂಡು 8 ವರ್ಷಗಳು ಗತಿಸಿದರೂ ಈವರೆಗೆ ಪುನರ್ ನಿರ್ಮಾಣ ಆಗಿರುವುದಿಲ್ಲ. ಅನುದಾನ ಮಂಜೂರಾತಿಗಾಗಿ ಸರ್ಕಾರಕ್ಕೆ ಅನೇಕ ಬಾರಿ ಪ್ರಸ್ತಾವನೆ ಸಲ್ಲಿಸಿದರೂ ಬಿಡುಗಡೆಗೊಳ್ಳದೆ, ಈ ನಾಟ್ಯ ಮಂದಿರ ಪುನರುಜ್ಜೀವನ ಕಾರ್ಯ ನೆನಗೂದಿಗೆ ಬಿದ್ದಿದ್ದರಿಂದ ನಾಟಕಗಳ ಪ್ರದರ್ಶನಕ್ಕೆ ಸಮಸ್ಯೆ ಆಗುತ್ತಿರುವ ಬಗ್ಗೆ ಹಿಂದಿನ ಬಜೆಟ್ ಅಧಿವೇಶನದಲ್ಲಿಯೂ ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕವೂ ಸರ್ಕಾರದ ಗಮನಸೆಳೆಯಲಾಗಿತ್ತು ಎಂದು ತಿಳಿಸಿದ್ದಾರೆ.</p>.<p>ಪ್ರಸಕ್ತ ಚಳಿಗಾಲ ಅಧಿವೇಶನದಲ್ಲಿ ಮತ್ತೆ ನಾಟಕ ಪ್ರೋತ್ಸಾಹಿಸಲು ಹಾಗೂ ಹಲವು ದಶಕಗಳ ಕಾಲ ಸಾವಿರಾರು ಕಲಾವಿದರ ಕಲೆ ಪ್ರದರ್ಶನಕ್ಕೆ ವೇದಿಕೆ ಆಗಿದ್ದ ಈ ನಾಟ್ಯ ಮಂದಿರ ಪುನರುಜ್ಜೀವನಗೊಳಿಸಲು ಅಗತ್ಯ ಅನುದಾನ ಮಂಜೂರಿಸಿ, ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರದ ಗಮನಸೆಳೆದಿದ್ದರಿಂದ ಸರ್ಕಾರ ₹ 50 ಲಕ್ಷ ಮಂಜೂರಿಸಿ, ಬಿಡುಗಡೆಗೊಳಿಸಿರುವುದಾಗಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ ಎಂದು ಯತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿದ್ದ ಶತಮಾನದ ಅಂಚಿನ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ನಿರ್ಮಾಣಕ್ಕೆ ₹50 ಲಕ್ಷ ಅನುದಾನವನ್ನು ಮಂಜೂರಿಸಿ, ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.</p>.<p>ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಲಾಗಿತ್ತು. ಶತಮಾನದ ಅಂಚಿನ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ಪುನರ್ ನಿರ್ಮಾಣಕ್ಕೆ ಒತ್ತಾಯಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<p>ನಾಡಿನ ಅನೇಕ ಚಲನಚಿತ್ರ ನಟ, ನಟಿಯರು, ಹವ್ಯಾಸಿ ಕಲಾವಿದರಿಗೆ ಅತ್ಯುತ್ತಮ ವೇದಿಕೆ ಆಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ನಾಟ್ಯ ಮಂದಿರ ನೆಲಸಮಗೊಂಡು 8 ವರ್ಷಗಳು ಗತಿಸಿದರೂ ಈವರೆಗೆ ಪುನರ್ ನಿರ್ಮಾಣ ಆಗಿರುವುದಿಲ್ಲ. ಅನುದಾನ ಮಂಜೂರಾತಿಗಾಗಿ ಸರ್ಕಾರಕ್ಕೆ ಅನೇಕ ಬಾರಿ ಪ್ರಸ್ತಾವನೆ ಸಲ್ಲಿಸಿದರೂ ಬಿಡುಗಡೆಗೊಳ್ಳದೆ, ಈ ನಾಟ್ಯ ಮಂದಿರ ಪುನರುಜ್ಜೀವನ ಕಾರ್ಯ ನೆನಗೂದಿಗೆ ಬಿದ್ದಿದ್ದರಿಂದ ನಾಟಕಗಳ ಪ್ರದರ್ಶನಕ್ಕೆ ಸಮಸ್ಯೆ ಆಗುತ್ತಿರುವ ಬಗ್ಗೆ ಹಿಂದಿನ ಬಜೆಟ್ ಅಧಿವೇಶನದಲ್ಲಿಯೂ ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕವೂ ಸರ್ಕಾರದ ಗಮನಸೆಳೆಯಲಾಗಿತ್ತು ಎಂದು ತಿಳಿಸಿದ್ದಾರೆ.</p>.<p>ಪ್ರಸಕ್ತ ಚಳಿಗಾಲ ಅಧಿವೇಶನದಲ್ಲಿ ಮತ್ತೆ ನಾಟಕ ಪ್ರೋತ್ಸಾಹಿಸಲು ಹಾಗೂ ಹಲವು ದಶಕಗಳ ಕಾಲ ಸಾವಿರಾರು ಕಲಾವಿದರ ಕಲೆ ಪ್ರದರ್ಶನಕ್ಕೆ ವೇದಿಕೆ ಆಗಿದ್ದ ಈ ನಾಟ್ಯ ಮಂದಿರ ಪುನರುಜ್ಜೀವನಗೊಳಿಸಲು ಅಗತ್ಯ ಅನುದಾನ ಮಂಜೂರಿಸಿ, ಅನುಷ್ಠಾನಗೊಳಿಸುವ ಬಗ್ಗೆ ಸರ್ಕಾರದ ಗಮನಸೆಳೆದಿದ್ದರಿಂದ ಸರ್ಕಾರ ₹ 50 ಲಕ್ಷ ಮಂಜೂರಿಸಿ, ಬಿಡುಗಡೆಗೊಳಿಸಿರುವುದಾಗಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ ಎಂದು ಯತ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>