<p><strong>ನಿಡಗುಂದಿ: </strong>ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, ಸರ್ಕಾರ ರಚಿಸಿದ ಆರಂಭದಲ್ಲಿ ದೂರದೃಷ್ಟಿಯುಳ್ಳ ಯೋಜನೆ ರೂಪಿಸುವಲ್ಲಿ ವಿಫಲವಾಯಿತು, ಸದ್ಯ ಚುನಾವಣೆ ಸಮೀಪಿಸುತ್ತಿದ್ದು, ಜನಪ್ರಿಯ ಯೋಜನೆ ಘೋಷಿಸುವತ್ತ ಸರ್ಕಾರ ಸಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಸೋಮವಾರ ಸಮೀಪದ ಯಲಗೂರದಲ್ಲಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರ ಜನರ ಹೃದಯದಲ್ಲಿಲ್ಲ, ಅದಕ್ಕಾಗಿ ಬೊಕ್ಕಸದ ಕೋಟ್ಯಂತರ ಹಣವನ್ನು ಜಾಹೀರಾತು ರೂಪದಲ್ಲಿ ಖರ್ಚು ಮಾಡಿ, ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ಆರಂಭಿಸಿದೆ ಎಂದು ಟೀಕಿಸಿದರು.</p>.<p>ಜೆಡಿಎಸ್ ಇಡೀ ರಾಜ್ಯದಾದ್ಯಂತ ಬಲಿಷ್ಠವಾಗಿದ್ದು, ಯಾವುದೇ ಪಕ್ಷದ ಸಹಾಯವಿಲ್ಲದೇ ಸರ್ಕಾರ ರಚಿಸಲಿದ್ದು, ಜಿಲ್ಲೆಯಲ್ಲಿ ಮುದ್ದೇಬಿಹಾಳ, ಸಿಂದಗಿ, ನಾಗಠಾಣ, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಜೆಡಿಎಸ್ ಎಲ್ಲ ಪಕ್ಷಕ್ಕಿಂತಲೂ ಮುಂದಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿಯೂ ಪಕ್ಷ ಮುಂಚೂಣಿ ಬರುವಂತೆ ಸಿದ್ಧತೆ ನಡೆದಿದೆ ಎಂದರು.</p>.<p>ಜೆಡಿಎಸ್ ಹೊರತುಪಡಿಸಿದರೆ, ಬಿಜೆಪಿ, ಕಾಂಗ್ರೆಸ್ ಪಕ್ಷದ ಯಾವೊಬ್ಬ ನಾಯಕರು ರೈತ ಪರ ಚಿಂತನೆ ಮಾಡುವುದಿಲ್ಲ, ರೈತರ ಸಮಸ್ಯೆ ನಿವಾರಣೆಯ ಬಗ್ಗೆ ಮಾತನಾಡದೇ, ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುವುದರಲ್ಲಿ ನಿಸ್ಸಿಮರಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಪರೋಕ್ಷ ಟೀಕಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ ‘ಎ’ ಸ್ಕಿಂನ ಹಲವು ಕಾಮಗಾರಿಗಳನ್ನು ನಾನು ಮುಖ್ಯಮಂತ್ರಿಯಾದ ಮೇಲೆ ಮುಗಿಸಿದೆ, ಸದ್ಯ ನ್ಯಾಯಾಧೀಕರಣದಿಂದ ಲಭ್ಯವಾಗಿರುವ 130 ಟಿಎಂಸಿ ನೀರು ಬಳಕೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ), ಸಿ.ಬಿ. ಅಸ್ಕಿ ಸೇರಿದಂತೆ ಇತರರು ಇದ್ದರು. ದೇವಸ್ಥಾನ ಸಮಿತಿ ವತಿಯಿಂದ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಡಗುಂದಿ: </strong>ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, ಸರ್ಕಾರ ರಚಿಸಿದ ಆರಂಭದಲ್ಲಿ ದೂರದೃಷ್ಟಿಯುಳ್ಳ ಯೋಜನೆ ರೂಪಿಸುವಲ್ಲಿ ವಿಫಲವಾಯಿತು, ಸದ್ಯ ಚುನಾವಣೆ ಸಮೀಪಿಸುತ್ತಿದ್ದು, ಜನಪ್ರಿಯ ಯೋಜನೆ ಘೋಷಿಸುವತ್ತ ಸರ್ಕಾರ ಸಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಸೋಮವಾರ ಸಮೀಪದ ಯಲಗೂರದಲ್ಲಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರ ಜನರ ಹೃದಯದಲ್ಲಿಲ್ಲ, ಅದಕ್ಕಾಗಿ ಬೊಕ್ಕಸದ ಕೋಟ್ಯಂತರ ಹಣವನ್ನು ಜಾಹೀರಾತು ರೂಪದಲ್ಲಿ ಖರ್ಚು ಮಾಡಿ, ಚುನಾವಣಾ ಪ್ರಚಾರವನ್ನು ಕಾಂಗ್ರೆಸ್ ಆರಂಭಿಸಿದೆ ಎಂದು ಟೀಕಿಸಿದರು.</p>.<p>ಜೆಡಿಎಸ್ ಇಡೀ ರಾಜ್ಯದಾದ್ಯಂತ ಬಲಿಷ್ಠವಾಗಿದ್ದು, ಯಾವುದೇ ಪಕ್ಷದ ಸಹಾಯವಿಲ್ಲದೇ ಸರ್ಕಾರ ರಚಿಸಲಿದ್ದು, ಜಿಲ್ಲೆಯಲ್ಲಿ ಮುದ್ದೇಬಿಹಾಳ, ಸಿಂದಗಿ, ನಾಗಠಾಣ, ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಜೆಡಿಎಸ್ ಎಲ್ಲ ಪಕ್ಷಕ್ಕಿಂತಲೂ ಮುಂದಿದೆ. ಇನ್ನುಳಿದ ನಾಲ್ಕು ಕ್ಷೇತ್ರಗಳಲ್ಲಿಯೂ ಪಕ್ಷ ಮುಂಚೂಣಿ ಬರುವಂತೆ ಸಿದ್ಧತೆ ನಡೆದಿದೆ ಎಂದರು.</p>.<p>ಜೆಡಿಎಸ್ ಹೊರತುಪಡಿಸಿದರೆ, ಬಿಜೆಪಿ, ಕಾಂಗ್ರೆಸ್ ಪಕ್ಷದ ಯಾವೊಬ್ಬ ನಾಯಕರು ರೈತ ಪರ ಚಿಂತನೆ ಮಾಡುವುದಿಲ್ಲ, ರೈತರ ಸಮಸ್ಯೆ ನಿವಾರಣೆಯ ಬಗ್ಗೆ ಮಾತನಾಡದೇ, ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುವುದರಲ್ಲಿ ನಿಸ್ಸಿಮರಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಪರೋಕ್ಷ ಟೀಕಿಸಿದರು.</p>.<p>ಕೃಷ್ಣಾ ಮೇಲ್ದಂಡೆ ಯೋಜನೆ ‘ಎ’ ಸ್ಕಿಂನ ಹಲವು ಕಾಮಗಾರಿಗಳನ್ನು ನಾನು ಮುಖ್ಯಮಂತ್ರಿಯಾದ ಮೇಲೆ ಮುಗಿಸಿದೆ, ಸದ್ಯ ನ್ಯಾಯಾಧೀಕರಣದಿಂದ ಲಭ್ಯವಾಗಿರುವ 130 ಟಿಎಂಸಿ ನೀರು ಬಳಕೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.</p>.<p>ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ), ಸಿ.ಬಿ. ಅಸ್ಕಿ ಸೇರಿದಂತೆ ಇತರರು ಇದ್ದರು. ದೇವಸ್ಥಾನ ಸಮಿತಿ ವತಿಯಿಂದ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>