<p><strong>ವಿಜಯಪುರ</strong>: ಬಾಸಿಂಗ ಬಿಡಲು ನದಿಗೆ ಇಳಿದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲಾದ ಘಟನೆ ನಿಡಗುಂದಿ ತಾಲ್ಲೂಕಿನ ಯಲಗೂರು ಗ್ರಾಮದ ಬಳಿ ಕೃಷ್ಣಾ ನದಿತೀರದಲ್ಲಿ ಸೋಮವಾರ ನಡೆದಿದೆ.</p><p>ಬಸವನಬಾಗೇವಾಡಿ ತಾಲ್ಲೂಕಿನ ಹಂಗರಗಿ ಗ್ರಾಮದ ವೆಂಕಟೇಶ ಶರಣಪ್ಪ ಚಲವಾದಿ(15) ಮೃತ ದುರ್ದೈವಿ.</p><p>ಮೃತ ಬಾಲಕನ ಚಿಕ್ಕಪ್ಪ ರವಿ ಅವರ ಮದುವೆ ಶುಕ್ರವಾರ ನಡೆದಿದ್ದು, ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಬಂಧುಗಳೊಂದಿಗೆ ನದಿತೀರಕ್ಕೆ ಬಂದಿದ್ದ.</p><p>ಬಸವನಬಾಗೇವಾಡಿಯ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಶವದ ಹುಡುಕಾಟ ನಡೆಸಿದ್ದಾರೆ. ಸೋಮವಾರ ಆಲಮಟ್ಟಿ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಹರಿಸಿದ್ದರಿಂದ ನೀರು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಸಂಜೆಯಾದರೂ ಶವ ಸಿಗಲಿಲ್ಲ.</p><p>ಹೀಗಾಗಿ ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ನಡೆಯಲಿದೆ. ಸ್ಥಳಕ್ಕೆ ಪಿಎಸ್ಐ ಶಿವರಾಜ ಧರಿಗೋಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನದಿ ತೀರದಲ್ಲಿ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಬಾಸಿಂಗ ಬಿಡಲು ನದಿಗೆ ಇಳಿದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲಾದ ಘಟನೆ ನಿಡಗುಂದಿ ತಾಲ್ಲೂಕಿನ ಯಲಗೂರು ಗ್ರಾಮದ ಬಳಿ ಕೃಷ್ಣಾ ನದಿತೀರದಲ್ಲಿ ಸೋಮವಾರ ನಡೆದಿದೆ.</p><p>ಬಸವನಬಾಗೇವಾಡಿ ತಾಲ್ಲೂಕಿನ ಹಂಗರಗಿ ಗ್ರಾಮದ ವೆಂಕಟೇಶ ಶರಣಪ್ಪ ಚಲವಾದಿ(15) ಮೃತ ದುರ್ದೈವಿ.</p><p>ಮೃತ ಬಾಲಕನ ಚಿಕ್ಕಪ್ಪ ರವಿ ಅವರ ಮದುವೆ ಶುಕ್ರವಾರ ನಡೆದಿದ್ದು, ಸಂಪ್ರದಾಯದಂತೆ ನದಿಗೆ ಬಾಸಿಂಗ ಬಿಡಲು ಬಂಧುಗಳೊಂದಿಗೆ ನದಿತೀರಕ್ಕೆ ಬಂದಿದ್ದ.</p><p>ಬಸವನಬಾಗೇವಾಡಿಯ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಶವದ ಹುಡುಕಾಟ ನಡೆಸಿದ್ದಾರೆ. ಸೋಮವಾರ ಆಲಮಟ್ಟಿ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಹರಿಸಿದ್ದರಿಂದ ನೀರು ಹೆಚ್ಚಿನ ಪ್ರಮಾಣದಲ್ಲಿರುವ ಕಾರಣ ಸಂಜೆಯಾದರೂ ಶವ ಸಿಗಲಿಲ್ಲ.</p><p>ಹೀಗಾಗಿ ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ನಡೆಯಲಿದೆ. ಸ್ಥಳಕ್ಕೆ ಪಿಎಸ್ಐ ಶಿವರಾಜ ಧರಿಗೋಣ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನದಿ ತೀರದಲ್ಲಿ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>