<p><strong>ವಿಜಯಪುರ:</strong> ಕೇಂದ್ರ ಸರ್ಕಾರಜಾರಿಗೆ ತಂದಿರುವಕರುಗಳ ಕಂದು ರೋಗ ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯ 37 ಸಾವಿರ ಹೆಣ್ಣು ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಇದರಿಂದರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.</p>.<p>ನಗರದ ಭೂತನಾಳ ಕೆರೆಯ ಹತ್ತಿರದ ಗೋಶಾಲೆಯಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಆಕಳು ಮತ್ತು ಎಮ್ಮೆಗಳ ಹೆಣ್ಣು ಕರುಗಳ ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಕರುವಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಕೃತಕ ಗರ್ಭಧಾರಣಾ ಕಾರ್ಯಕ್ರಮದಡಿ ರೈತರ ಮನೆಬಾಗಿಲಿಗೆ ತೆರಳಿ ದೇಶೀಯ ಹಾಗೂ ವಿದೇಶಿಯ ರಾಸುಗಳ ವೀರ್ಯದೊಂದಿಗೆ ದೇಶಿಯ ರಾಸುಗಳನ್ನು ಉಚಿತವಾಗಿ ಉನ್ನತೀಕರಿಸುವ ಯೋಜನೆ ದೇಶದ 604 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ ಎಂದರು.</p>.<p>ಕಾಲು ಮತ್ತು ಬಾಯಿ ಬೇನೆ ರೋಗದ ವಿರುದ್ಧ ಜಿಲ್ಲೆಯಲ್ಲಿ ಸುಮಾರು 3.75 ಲಕ್ಷ ದನಕರುಗಳಿಗೆ ವರ್ಷಕ್ಕೆ ಎರಡು ಬಾರಿ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ ಎಂದರು.</p>.<p>ದೇಶದಲ್ಲಿಯ ಎಲ್ಲ ರಾಸುಗಳಿಗೆ ಗುರುತಿನ ಕಿವಿಯೋಲೆ ಹಾಕುವಲ್ಲಿ ಪಶುಪಾಲನಾ ಇಲಾಖೆ ಯಶಸ್ವಿ ಹಾದಿಯಲ್ಲಿದೆ. ಕಿವಿಯೋಲೆ ಅಳವಡಿಸಿದಕ್ಕೆ ಕೇಂದ್ರ ಸರ್ಕಾರದ ವತಿಯಿಂದ ಗೌರವಧನವನ್ನು ಕೂಡಾ ನೀಡುತ್ತಾ ಬಂದಿದೆ ಎಂದು ಹೇಳಿದರು.</p>.<p>ಪಶುಪಾಲನಾ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಪ್ರಾಣೇಶ.ಜಾಗೀರದಾರ ಮಾತನಾಡಿ ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ ಕಂದು ರೋಗ ನಿಯಂತ್ರಣ ಯೋಜನೆಯಡಿಯಲ್ಲಿ ಸಂಪೂರ್ಣ ರೋಗ ಮುಕ್ತ ಮಾಡಲು ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಎಂ.ಸಿ.ಅರಕೇರಿ, ಸೆಪ್ಟಂಬರ್ 6 ರಿಂದ ಕಂದು ರೋಗ ನಿಯಂತ್ರಣ ಕಾರ್ಯಕ್ರಮ ವಿಜಯಪುರ ಜಿಲ್ಲೆಯಲ್ಲೂ 15 ದಿನ ನಡೆಯಲಿದೆ ಎಂದು ಅವರು ಹೇಳಿದರು.</p>.<p>ಪಾಲಿಕ್ಲಿನಿಕ್ ಉಪ ನಿರ್ದೇಶಕ ಡಾ.ಎಸ್.ಪಿ.ಕುಂಬಾರ, ಹಿರಿಯ ಪಶು ವೈದ್ಯಾಧಿಕಾರಿ ಕಾರಜೊಳ, ಡಾ.ಮುತ್ತಣ್ಣಗೌಡ ಬಿರಾದಾರ, ಹಿರಿಯ ಪಶು ವೈದ್ಯಾಧಿಕಾರಿ ತಿಡಗುಂದಿ, ಡಾ.ರಮೇಶ ರಾಠೋಡ, ಡಾ.ಪಂಚಾಕ್ಷರಿ, ಎ.ಆರ್.ಸೂರ್ಯವಂಶಿ, ನಮ್ರತಾ ರಾಠೋಡ, ಭಾಗ್ಯಶ್ರೀ, ಆನಂದ ಬುರುಡ, ಜೀವನ್, ವಿನಾಯಕ ಗುಡದಿನ್ನಿ ಉಪಸ್ಥಿತರಿದ್ದರು.</p>.<p>***</p>.<p>ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಲಸಿಕಾದಾರರು ಜಾನುವಾರುಗಳಿಗೆ ಕಿವಿಯೋಲೆ ಹಾಕಿದ ಬಳಿಕವೇ ಲಸಿಕೆ ಕೈಗೊಳ್ಳಬೇಕು</p>.<p><strong>ರಮೇಶ ಜಿಗಜಿಣಗಿ,ಸಂಸದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೇಂದ್ರ ಸರ್ಕಾರಜಾರಿಗೆ ತಂದಿರುವಕರುಗಳ ಕಂದು ರೋಗ ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯ 37 ಸಾವಿರ ಹೆಣ್ಣು ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಇದರಿಂದರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.</p>.<p>ನಗರದ ಭೂತನಾಳ ಕೆರೆಯ ಹತ್ತಿರದ ಗೋಶಾಲೆಯಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಆಕಳು ಮತ್ತು ಎಮ್ಮೆಗಳ ಹೆಣ್ಣು ಕರುಗಳ ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಕರುವಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಕೃತಕ ಗರ್ಭಧಾರಣಾ ಕಾರ್ಯಕ್ರಮದಡಿ ರೈತರ ಮನೆಬಾಗಿಲಿಗೆ ತೆರಳಿ ದೇಶೀಯ ಹಾಗೂ ವಿದೇಶಿಯ ರಾಸುಗಳ ವೀರ್ಯದೊಂದಿಗೆ ದೇಶಿಯ ರಾಸುಗಳನ್ನು ಉಚಿತವಾಗಿ ಉನ್ನತೀಕರಿಸುವ ಯೋಜನೆ ದೇಶದ 604 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ ಎಂದರು.</p>.<p>ಕಾಲು ಮತ್ತು ಬಾಯಿ ಬೇನೆ ರೋಗದ ವಿರುದ್ಧ ಜಿಲ್ಲೆಯಲ್ಲಿ ಸುಮಾರು 3.75 ಲಕ್ಷ ದನಕರುಗಳಿಗೆ ವರ್ಷಕ್ಕೆ ಎರಡು ಬಾರಿ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ ಎಂದರು.</p>.<p>ದೇಶದಲ್ಲಿಯ ಎಲ್ಲ ರಾಸುಗಳಿಗೆ ಗುರುತಿನ ಕಿವಿಯೋಲೆ ಹಾಕುವಲ್ಲಿ ಪಶುಪಾಲನಾ ಇಲಾಖೆ ಯಶಸ್ವಿ ಹಾದಿಯಲ್ಲಿದೆ. ಕಿವಿಯೋಲೆ ಅಳವಡಿಸಿದಕ್ಕೆ ಕೇಂದ್ರ ಸರ್ಕಾರದ ವತಿಯಿಂದ ಗೌರವಧನವನ್ನು ಕೂಡಾ ನೀಡುತ್ತಾ ಬಂದಿದೆ ಎಂದು ಹೇಳಿದರು.</p>.<p>ಪಶುಪಾಲನಾ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಪ್ರಾಣೇಶ.ಜಾಗೀರದಾರ ಮಾತನಾಡಿ ರಾಜ್ಯದಲ್ಲಿ 2021-22 ನೇ ಸಾಲಿನಲ್ಲಿ ಕಂದು ರೋಗ ನಿಯಂತ್ರಣ ಯೋಜನೆಯಡಿಯಲ್ಲಿ ಸಂಪೂರ್ಣ ರೋಗ ಮುಕ್ತ ಮಾಡಲು ರೈತರು ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಎಂ.ಸಿ.ಅರಕೇರಿ, ಸೆಪ್ಟಂಬರ್ 6 ರಿಂದ ಕಂದು ರೋಗ ನಿಯಂತ್ರಣ ಕಾರ್ಯಕ್ರಮ ವಿಜಯಪುರ ಜಿಲ್ಲೆಯಲ್ಲೂ 15 ದಿನ ನಡೆಯಲಿದೆ ಎಂದು ಅವರು ಹೇಳಿದರು.</p>.<p>ಪಾಲಿಕ್ಲಿನಿಕ್ ಉಪ ನಿರ್ದೇಶಕ ಡಾ.ಎಸ್.ಪಿ.ಕುಂಬಾರ, ಹಿರಿಯ ಪಶು ವೈದ್ಯಾಧಿಕಾರಿ ಕಾರಜೊಳ, ಡಾ.ಮುತ್ತಣ್ಣಗೌಡ ಬಿರಾದಾರ, ಹಿರಿಯ ಪಶು ವೈದ್ಯಾಧಿಕಾರಿ ತಿಡಗುಂದಿ, ಡಾ.ರಮೇಶ ರಾಠೋಡ, ಡಾ.ಪಂಚಾಕ್ಷರಿ, ಎ.ಆರ್.ಸೂರ್ಯವಂಶಿ, ನಮ್ರತಾ ರಾಠೋಡ, ಭಾಗ್ಯಶ್ರೀ, ಆನಂದ ಬುರುಡ, ಜೀವನ್, ವಿನಾಯಕ ಗುಡದಿನ್ನಿ ಉಪಸ್ಥಿತರಿದ್ದರು.</p>.<p>***</p>.<p>ಕೃತಕ ಗರ್ಭಧಾರಣಾ ಕಾರ್ಯಕರ್ತರು ಹಾಗೂ ಲಸಿಕಾದಾರರು ಜಾನುವಾರುಗಳಿಗೆ ಕಿವಿಯೋಲೆ ಹಾಕಿದ ಬಳಿಕವೇ ಲಸಿಕೆ ಕೈಗೊಳ್ಳಬೇಕು</p>.<p><strong>ರಮೇಶ ಜಿಗಜಿಣಗಿ,ಸಂಸದ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>