<p>ಬಸವನಬಾಗೆವಾಡಿ: ಕರ್ನಾಟಕ ಸಂಭ್ರಮ 50ರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಜ್ಯೋತಿ ರಥ ಯಾತ್ರೆಗೆ ಗುರುವಾರ ತಾಲ್ಲೂಕು ಆಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆ, ಸಂಘಟನೆಗಳ ಪದಾಧಿಕಾರಿಗಳು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭವ್ಯ ಸ್ವಾಗತ ಕೋರಿದರು.</p>.<p>ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಿಂದ ಆರಂಭವಾದ ಭುವನೇಶ್ವರಿದೇವಿ ಕನ್ನಡ ರಥದ ಮೆರವಣಿಗೆಯು ತೆಲಗಿ ರಸ್ತೆ, <a>ಡಾ.ಬಿ.ಆರ್.ಅಂಬೇಡ್ಕರ್</a> ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವ ಭವನ ಮಾರ್ಗದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತಕ್ಕೆ ತಲುಪಿತು. ನಂತರ ರಥಯಾತ್ರೆಯು ತಾಲ್ಲೂಕಿನ ಮಸಬಿನಾಳ, ಇಂಗಳೇಶ್ವರ, ದಿಂಡವಾರ, ಹೂವಿನಹಿಪ್ಪರಗಿ ಗ್ರಾಮಕ್ಕೆ ತೆರಳಿತು.</p>.<p>ಚೆನ್ನಮ್ಮ ವೃತ್ತದಲ್ಲಿ ಮಾತನಾಡಿದ ತಹಶೀಲ್ದಾರ್ <a>ವೈ.ಎಸ್.ಸೋಮನಕಟ್ಟಿ</a>, ‘ಕನ್ನಡ ಆಡಳಿತ ಭಾಷೆಯಾಗಿರುವುದರಿಂದ ಪರಿಣಾಮಕಾರಿಯಾಗಿ ನಾಡಿನ ಎಲ್ಲ ಜನತೆ ಮಾತನಾಡುವಂತಾಗಬೇಕು’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ‘ಕನ್ನಡ ಸಂಸ್ಕೃತಿ, ಸಾಹಿತ್ಯ ಈ ನಾಡನ್ನು ಶ್ರೀಮಂತಗೊಳಿಸಿದೆ. ನಾಡಿನ ಏಳು ಕೋಟಿ ಜನರು ಕನ್ನಡ ಬರೆಯುವ ಹಾಗೂ ಮಾತನಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ <a>ಎಂ.ಎನ್.ಚಿತ್ತರಗಿ</a>, <a>ತಾಲ್ಲೂಕು ಪಂಚಾಯ್ತಿ</a> ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಅಭಿಷೇಕ ಚಕ್ರವರ್ತಿ, ರಾಜೇಸಾಬ ಶಿವನಗುತ್ತಿ ಬಸವರಾಜ ಸೋಮಪೂರ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಶಿವು ಮಡಕೇಶ್ವರ, ಕೋಟ್ರೇಶ ಹಡಗಲಿ, ಬಸವರಾಜ ಮೇಟಿ, <a>ಬಿ.ಬಿ.ಚಕ್ರಮನಿ</a>, ಬಸವರಾಜ ಚಿಂಚೊಳಿ, ಮಹಾದೇವಿ ಬಿರಾದಾರ, ಶಾಂತಾ ಚೌರ ಇದ್ದರು.</p>.<p>ಕರಡಿ ಮಜಲು, ಕೋಲಾಟ, ಶಾಲಾ ಮಕ್ಕಳ ಲೇಜಿಮ್ ವಿವಿಧ ವಾದ್ಯಗಳು ಸೇರಿದಂತೆ ಮಕ್ಕಳ ವೇಷ ಭೂಷಣಗಳು ಮರವಣಿಗೆಯ ಮೆರುಗನ್ನು ಹೆಚ್ಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಬಾಗೆವಾಡಿ: ಕರ್ನಾಟಕ ಸಂಭ್ರಮ 50ರ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಜ್ಯೋತಿ ರಥ ಯಾತ್ರೆಗೆ ಗುರುವಾರ ತಾಲ್ಲೂಕು ಆಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆ, ಸಂಘಟನೆಗಳ ಪದಾಧಿಕಾರಿಗಳು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಭವ್ಯ ಸ್ವಾಗತ ಕೋರಿದರು.</p>.<p>ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಿಂದ ಆರಂಭವಾದ ಭುವನೇಶ್ವರಿದೇವಿ ಕನ್ನಡ ರಥದ ಮೆರವಣಿಗೆಯು ತೆಲಗಿ ರಸ್ತೆ, <a>ಡಾ.ಬಿ.ಆರ್.ಅಂಬೇಡ್ಕರ್</a> ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವ ಭವನ ಮಾರ್ಗದಿಂದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತಕ್ಕೆ ತಲುಪಿತು. ನಂತರ ರಥಯಾತ್ರೆಯು ತಾಲ್ಲೂಕಿನ ಮಸಬಿನಾಳ, ಇಂಗಳೇಶ್ವರ, ದಿಂಡವಾರ, ಹೂವಿನಹಿಪ್ಪರಗಿ ಗ್ರಾಮಕ್ಕೆ ತೆರಳಿತು.</p>.<p>ಚೆನ್ನಮ್ಮ ವೃತ್ತದಲ್ಲಿ ಮಾತನಾಡಿದ ತಹಶೀಲ್ದಾರ್ <a>ವೈ.ಎಸ್.ಸೋಮನಕಟ್ಟಿ</a>, ‘ಕನ್ನಡ ಆಡಳಿತ ಭಾಷೆಯಾಗಿರುವುದರಿಂದ ಪರಿಣಾಮಕಾರಿಯಾಗಿ ನಾಡಿನ ಎಲ್ಲ ಜನತೆ ಮಾತನಾಡುವಂತಾಗಬೇಕು’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ‘ಕನ್ನಡ ಸಂಸ್ಕೃತಿ, ಸಾಹಿತ್ಯ ಈ ನಾಡನ್ನು ಶ್ರೀಮಂತಗೊಳಿಸಿದೆ. ನಾಡಿನ ಏಳು ಕೋಟಿ ಜನರು ಕನ್ನಡ ಬರೆಯುವ ಹಾಗೂ ಮಾತನಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಬೇಕು’ ಎಂದು ಹೇಳಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ <a>ಎಂ.ಎನ್.ಚಿತ್ತರಗಿ</a>, <a>ತಾಲ್ಲೂಕು ಪಂಚಾಯ್ತಿ</a> ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಅಭಿಷೇಕ ಚಕ್ರವರ್ತಿ, ರಾಜೇಸಾಬ ಶಿವನಗುತ್ತಿ ಬಸವರಾಜ ಸೋಮಪೂರ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಶಿವು ಮಡಕೇಶ್ವರ, ಕೋಟ್ರೇಶ ಹಡಗಲಿ, ಬಸವರಾಜ ಮೇಟಿ, <a>ಬಿ.ಬಿ.ಚಕ್ರಮನಿ</a>, ಬಸವರಾಜ ಚಿಂಚೊಳಿ, ಮಹಾದೇವಿ ಬಿರಾದಾರ, ಶಾಂತಾ ಚೌರ ಇದ್ದರು.</p>.<p>ಕರಡಿ ಮಜಲು, ಕೋಲಾಟ, ಶಾಲಾ ಮಕ್ಕಳ ಲೇಜಿಮ್ ವಿವಿಧ ವಾದ್ಯಗಳು ಸೇರಿದಂತೆ ಮಕ್ಕಳ ವೇಷ ಭೂಷಣಗಳು ಮರವಣಿಗೆಯ ಮೆರುಗನ್ನು ಹೆಚ್ಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>