<p>ವಿಜಯಪುರ: ತಂಬಾಕು ಮತ್ತು ಮಾದಕವಸ್ತು ಸೇವನೆ ತಡೆಯಲು ಎಲ್ಲರೂ ಜಂಟಿಯಾಗಿ ಹೋರಾಟ ನಡೆಸಬೇಕಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಎಸ್. ಮುಧೋಳ ಹೇಳಿದರು.</p>.<p>ನಗರದ ಬಿಎಲ್ಡಿಇ ವಿವಿಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ತಂಬಾಕು ವ್ಯಸನ ಮುಕ್ತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಂಬಾಕು ವ್ಯಸನ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಒಂದು ದೊಡ್ಡ ಜಾಲವಾಗಿ ಬೆಳೆದಿದೆ. ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆ ಈಗ ದೇಶದ ಪ್ರತಿಯೊಂದು ವೈದ್ಯಕೀಯ ಕಾಲೇಜುಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ತೆರೆಯಲು ನಿರ್ಧರಿಸಿವೆ ಎಂದರು.</p>.<p>ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಒಪಿಡಿ ಸಂಖ್ಯೆ19ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿ ಪರಿಣಿತ ಆಪ್ತ ಸಲಹಾಕಾರರು, ವೈದ್ಯರು ಲಭ್ಯರಿರುತ್ತಾರೆ. ವ್ಯಸನ ತಡೆಗಟ್ಟಲು ಅಗತ್ಯವಿರುವ ತಪಾಸಣೆ ಪರೀಕ್ಷೆಗಳು, ಔಷಧೋಪಚಾರಗಳು ದೊರಕುತ್ತವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.</p>.<p>ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಸಂತೋಷ ರಾಮದುರ್ಗ, ಡಾ.ಎಸ್.ಪಿ. ಚೌಕಿಮಠ, ಡಾ.ಕಳಸಗೋಂಡ, ಡಾ.ಗೌತಮಿ, ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೀರ್ತಿವರ್ಧನ ಕುಲಕರ್ಣಿ, ಡಾ.ಶ್ರೀಶೈಲ ಅಂಜುಟಗಿ, ಸಮುದಾಯ ಆರೋಗ್ಯ ವಿಭಾಗದ ಡಾ.ಸಂದೀಪ, ಡಾ.ಪೂಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ತಂಬಾಕು ಮತ್ತು ಮಾದಕವಸ್ತು ಸೇವನೆ ತಡೆಯಲು ಎಲ್ಲರೂ ಜಂಟಿಯಾಗಿ ಹೋರಾಟ ನಡೆಸಬೇಕಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಎಸ್. ಮುಧೋಳ ಹೇಳಿದರು.</p>.<p>ನಗರದ ಬಿಎಲ್ಡಿಇ ವಿವಿಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನಲ್ಲಿ ಮಂಗಳವಾರ ತಂಬಾಕು ವ್ಯಸನ ಮುಕ್ತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತಂಬಾಕು ವ್ಯಸನ ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಒಂದು ದೊಡ್ಡ ಜಾಲವಾಗಿ ಬೆಳೆದಿದೆ. ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಸಂಸ್ಥೆ ಈಗ ದೇಶದ ಪ್ರತಿಯೊಂದು ವೈದ್ಯಕೀಯ ಕಾಲೇಜುಗಳಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರ ತೆರೆಯಲು ನಿರ್ಧರಿಸಿವೆ ಎಂದರು.</p>.<p>ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಒಪಿಡಿ ಸಂಖ್ಯೆ19ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿ ಪರಿಣಿತ ಆಪ್ತ ಸಲಹಾಕಾರರು, ವೈದ್ಯರು ಲಭ್ಯರಿರುತ್ತಾರೆ. ವ್ಯಸನ ತಡೆಗಟ್ಟಲು ಅಗತ್ಯವಿರುವ ತಪಾಸಣೆ ಪರೀಕ್ಷೆಗಳು, ಔಷಧೋಪಚಾರಗಳು ದೊರಕುತ್ತವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದರು.</p>.<p>ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ ಹೊನ್ನುಟಗಿ, ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಸಂತೋಷ ರಾಮದುರ್ಗ, ಡಾ.ಎಸ್.ಪಿ. ಚೌಕಿಮಠ, ಡಾ.ಕಳಸಗೋಂಡ, ಡಾ.ಗೌತಮಿ, ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೀರ್ತಿವರ್ಧನ ಕುಲಕರ್ಣಿ, ಡಾ.ಶ್ರೀಶೈಲ ಅಂಜುಟಗಿ, ಸಮುದಾಯ ಆರೋಗ್ಯ ವಿಭಾಗದ ಡಾ.ಸಂದೀಪ, ಡಾ.ಪೂಜಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>