ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣದಲ್ಲಿ ಭಾನುವಾರ ನಡೆದ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ನಾಗೇಂದ್ರ ಶಿವಾಜಿ ಕಟಕಧೋಂಡ (38) ಚಿಕಿತ್ಸೆ ಫಲಿಸದೇ ಸೋಮವಾರ ಸಾವಿಗೀಡಾದರು.
ಲಚ್ಯಾಣದ ಸಿದ್ಧಲಿಂಗ ಮಹಾರಾಜರ ರಥೋತ್ಸವದ ಅಂಗವಾಗಿ ಭಾನುವಾರ ರಥವನ್ನು ಭಕ್ತರು ಎಳೆಯುವಾಗ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕಟಕಧೋಂಡ ಅವರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.