<p><strong>ವಿಜಯಪುರ:</strong>ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದ ಬಳಿ ಸೋಮವಾರ ಸಾರ್ವಜನಿಕರು ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಹಿಡಿದು, ಮರಕ್ಕೆ ಕಟ್ಟಿ ಥಳಿಸಿದ್ದಾರೆ.</p>.<p>ಇಟ್ಟಂಗಿಹಾಳ ಗ್ರಾಮದ ಪೂಜಾರ ವಸತಿ ಬಳಿ ಅಪರಿಚಿತ ಯುವಕನನ್ನು ಹಿಡಿದು ಥಳಿಸಿದ ಬಳಿಕ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಈ ಕುರಿತು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ, ಸಾರ್ವಜನಿಕರಿಂದ ಥಳಿತಕ್ಕೆ ಒಳಗಾಗಿರುವ ವ್ಯಕ್ತಿ ಉತ್ತರ ಪ್ರದೇಶ ಮೂಲದವ. ಆತ ಮಾನಸಿಕ ಅಸ್ವಸ್ಥ ಇದ್ದಾನೆ. ಮಾತನಾಡಲು ಅವನಿಗೆ ಸರಿಯಾಗಿ ಬರುವುದಿಲ್ಲ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ಮಕ್ಕಳ ಮಕ್ಕಳು ಬಂದಿದ್ದಾರೆ ಎಂಬುದು ಕೇವಲ ವದಂತಿ. ಇಂಥ ಸುಳ್ಳು ಸುದ್ದಿಗಳಿಗೆ ಒಳಗಾಗಿ ಮುಗ್ಧರು, ಅಮಾಯಕರನ್ನು ಥಳಿಸುವುದು ಸರಿಯಲ್ಲ. ಈ ರೀತಿ ಥಳಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಥಳಿಸಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ತಿಕೋಟಾ ತಾಲ್ಲೂಕಿನ ಇಟ್ಟಂಗಿಹಾಳ ಗ್ರಾಮದ ಬಳಿ ಸೋಮವಾರ ಸಾರ್ವಜನಿಕರು ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯೊಬ್ಬನನ್ನು ಹಿಡಿದು, ಮರಕ್ಕೆ ಕಟ್ಟಿ ಥಳಿಸಿದ್ದಾರೆ.</p>.<p>ಇಟ್ಟಂಗಿಹಾಳ ಗ್ರಾಮದ ಪೂಜಾರ ವಸತಿ ಬಳಿ ಅಪರಿಚಿತ ಯುವಕನನ್ನು ಹಿಡಿದು ಥಳಿಸಿದ ಬಳಿಕ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಈ ಕುರಿತು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ, ಸಾರ್ವಜನಿಕರಿಂದ ಥಳಿತಕ್ಕೆ ಒಳಗಾಗಿರುವ ವ್ಯಕ್ತಿ ಉತ್ತರ ಪ್ರದೇಶ ಮೂಲದವ. ಆತ ಮಾನಸಿಕ ಅಸ್ವಸ್ಥ ಇದ್ದಾನೆ. ಮಾತನಾಡಲು ಅವನಿಗೆ ಸರಿಯಾಗಿ ಬರುವುದಿಲ್ಲ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ಮಕ್ಕಳ ಮಕ್ಕಳು ಬಂದಿದ್ದಾರೆ ಎಂಬುದು ಕೇವಲ ವದಂತಿ. ಇಂಥ ಸುಳ್ಳು ಸುದ್ದಿಗಳಿಗೆ ಒಳಗಾಗಿ ಮುಗ್ಧರು, ಅಮಾಯಕರನ್ನು ಥಳಿಸುವುದು ಸರಿಯಲ್ಲ. ಈ ರೀತಿ ಥಳಿಸಿದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಥಳಿಸಬಾರದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>