ಈ ಕುರಿತು ’ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ, ಸಾರ್ವಜನಿಕರಿಂದ ಥಳಿತಕ್ಕೆ ಒಳಗಾಗಿರುವ ವ್ಯಕ್ತಿ ಉತ್ತರ ಪ್ರದೇಶ ಮೂಲದವ. ಆತ ಮಾನಸಿಕ ಅಸ್ವಸ್ಥ ಇದ್ದಾನೆ. ಮಾತನಾಡಲು ಅವನಿಗೆ ಸರಿಯಾಗಿ ಬರುವುದಿಲ್ಲ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.