<p><strong>ವಿಜಯಪುರ</strong>: ‘ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಅಗತ್ಯಗಳಿಗಾಗಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.</p>.<p>ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಬೆಂಗಳೂರಿನ ಯಾವ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ಅನೇಕ ಸಮಾಲೋಚಕರ ಜತೆಗೆ ಚರ್ಚಿಸಲಾಗುತ್ತಿದೆ. 2033ರ ವೇಳೆಗೆ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸುವ ವಿಶ್ವಾಸ ಇದೆ’ ಎಂದರು.</p>.<p>‘ಬೆಂಗಳೂರಿನ ದಾಬಸ್ಪೇಟೆ- ದೊಡ್ಡಬಳ್ಳಾಪುರ ನಡುವಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ನಾಲೆಡ್ಜ್-ಹೆಲ್ತ್-ಇನ್ನೋವೇಶನ್- ರಿಸರ್ಚ್ (ಕೆ.ಎಚ್.ಐ.ಆರ್) ಸಿಟಿಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರ ಭಾಗವಾಗಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಮೊದಲ ಹಂತದ ಅಭಿವೃದ್ಧಿಗೆ ಆಗಸ್ಟ್ 23ರಂದು ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಈ ಯೋಜನೆಗೆ ಒಟ್ಟು ₹ 40 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುತ್ತಿದ್ದು, ನೇರವಾಗಿ 48 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ಹೇಳಿದರು.</p>.<p>‘ನಾಲೆಡ್ಜ್-ಹೆಲ್ತ್-ಇನ್ನೋವೇಶನ್- ರಿಸರ್ಚ್ ಸಿಟಿಯಲ್ಲಿ ಜಗತ್ತಿನ ಉತ್ಕೃಷ್ಟ ವಿಶ್ವವಿದ್ಯಾಲಯಗಳು, ವೈದ್ಯಕೀಯ ಸಂಸ್ಥೆಗಳು, ಸಂಶೋಧನಾಲಯಗಳು, ಉದ್ಯಮಗಳು, ನವೋದ್ಯಮಗಳು ನೆಲೆಯೂರಲಿವೆ. ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪ 407 ಎಕರೆ ವಿಸ್ತೀರ್ಣದಲ್ಲಿ ಒಟ್ಟು ಎರಡು ಹಂತಗಳಲ್ಲಿ ₹ 817 ಕೋಟಿ ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಜಿನೆಸ್ ಪಾರ್ಕ್ ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ಫಾಕ್ಸ್ ಕಾನ್, ವಿಸ್ಟ್ರಾನ್, ಟಾಟಾ ಗ್ರೂಪ್, ಏರ್ ಇಂಡಿಯಾ, ಟೊಯೋಟಾ ಮುಂತಾದ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದವನ್ನು ಮಾಡಿಕೊಂಡಿದೆ. ಈ ಕಂಪನಿಗಳು ಕ್ರಮವಾಗಿ ₹14 ಸಾವಿರ ಕೋಟಿ, ₹ 1,500 ಕೋಟಿ, ₹2,300 ಕೋಟಿ ಮತ್ತು ₹1,300 ಕೋಟಿಗಳನ್ನು ರಾಜ್ಯದಲ್ಲಿ ಹೂಡಿಕೆ ಮಾಡಲಿವೆ ಎಂದು ಹೇಳಿದರು.</p>.<p>‘ರಾಜ್ಯದ ವಿದ್ಯುತ್ ಚಾಲಿತ ವಾಹನಗಳ ವಲಯದಲ್ಲಿ ₹50 ಸಾವಿರ ಕೋಟಿ ಹೂಡಿಕೆಯ ಖಾತ್ರಿ ನಮಗೆ ಸಿಕ್ಕಿದ್ದು, ಇದರಿಂದ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದನ್ನು ಪರಿಗಣಿಸಿ, 2024-29ರ ಅವಧಿಗೆ ಚಾಲೂ ಆಗುವಂತೆ ಕ್ಲೀನ್ ಮೊಬಿಲಿಟಿ ಪಾಲಿಸಿಯನ್ನು ರೂಪಿಸಲಾಗಿದೆ’ ಎಂದರು.</p>.<p>‘ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂ.ಎಸ್.ಐ.ಎಲ್) ಹಲವು ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಕೇವಲ ₹410 ಕೋಟಿ ಇದ್ದ ಚಿಟ್ ಫಂಡ್ ವ್ಯವಹಾರವನ್ನು ₹ 5,000 ಕೋಟಿಗೆ ವಿಸ್ತರಿಸುವ ಉದ್ದೇಶ ಇದ್ದು, ಇನ್ನು ಕೆಲವೇ ದಿನಗಳಲ್ಲಿ ಅದಕ್ಕೆ ಚಾಲನೆ ಸಿಗಲಿದೆ. ಸದ್ಯ 23 ಶಾಖೆಗಳಿರುವ ಚಿಟ್ ಫಂಡ್ ಶಾಖೆಗಳನ್ನು 100ಕ್ಕೆ ಹೆಚ್ಚಿಸಲಾಗುವುದು. ಮೊದಲ ಹಂತದಲ್ಲಿ ವಿಜಯಪುರದಲ್ಲೂ ಒಂದು ಚಿಟ್ ಫಂಡ್ ಕಚೇರಿ ತೆರೆಯಲಾಗುವುದು’ ಎಂದು ಹೇಳಿದರು.</p>.<p>‘10 ಮೆಗಾ ಔಷಧ ಮಳಿಗೆಗಳನ್ನು ರಾಜ್ಯದಲ್ಲಿ ಆರಂಭಿಸುತ್ತಿದ್ದು, ಅದರಲ್ಲಿ ಒಂದನ್ನು ವಿಜಯಪುರದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಇವೆರಡಕ್ಕೂ ಚಾಲನೆ ನೀಡಲಾಗುವುದು. ರಾಜ್ಯದಲ್ಲಿನ 83 ಜನೌಷಧ ಕೇಂದ್ರಗಳನ್ನು ಆಧುನೀಕರಿಸುವ ಕೆಲಸ ಕೂಡ ಕೈಗೆತ್ತಿಕೊಳ್ಳಲಾಗುವುದು’ ಎಂದರು.</p>.<p>‘ಎಂಎಸ್ಐಎಲ್ ತನ್ನ ಸೇವೆಗಳನ್ನು ವಿಸ್ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಎರಡು ತಿಂಗಳಲ್ಲಿ 73 ಮಂದಿ ಅಧಿಕಾರಿಗಳನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು. ₹3,759 ಕೋಟಿ ವಹಿವಾಟು ನಡೆಸಿರುವ ಎಂಎಸ್ಐಎಲ್ ₹ 103 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷಕ್ಕಿಂತ ₹ 62 ಕೋಟಿ ಹೆಚ್ಚು ಲಾಭ ಗಳಿಸಿದೆ’ ಎಂದು ತಿಳಿಸಿದರು.</p>.<p>‘ಮೈಸೂರು ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಲಾಭದಾಯಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ ಅದರ ಲಾಭ ಬಹುತೇಕ ದ್ವಿಗುಣ ಆಗಿದೆ. 2022-23ರಲ್ಲಿ ₹182 ಕೋಟಿ ಲಾಭ ಪಡೆದಿದ್ದ ಸಂಸ್ಥೆ 2023-24ರಲ್ಲಿ ₹352 ಕೋಟಿ ಲಾಭ ಮಾಡಿದೆ. 2024-25ರಲ್ಲಿ ₹500 ಕೋಟಿ ಲಾಭ ಮಾಡುವ ಉದ್ದೇಶ ಇದೆ’ ಎಂದರು.</p>.<p>‘ಸರ್ಕಾರಿ ಸ್ವಾಮ್ಯದ ಮೈಸೂರು ಪೇಂಟ್ಸ್ ಇದುವರೆಗೆ ಕೇವಲ ಇಂಕ್ ತಯಾರಿಕೆಗೆ ಸೀಮಿತವಾಗಿತ್ತು. ಇದನ್ನು ಪುನಶ್ಚೇತನಗೊಳಿಸಿ, ಆಲಂಕಾರಿಕ ಬಣ್ಣಗಳನ್ನು ಉತ್ಪಾದಿಸುವುದು ಹಾಗೂ ಎಲ್ಲ ಸರ್ಕಾರಿ ಕಟ್ಟಡಗಳಿಗೆ ಇದೇ ಬಣ್ಣವನ್ನು ಬಳಸುವ ಉದ್ದೇಶ ಹೊಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಅಗತ್ಯಗಳಿಗಾಗಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.</p>.<p>ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಬೆಂಗಳೂರಿನ ಯಾವ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಿದರೆ ಒಳ್ಳೆಯದು ಎಂಬುದರ ಬಗ್ಗೆ ಅನೇಕ ಸಮಾಲೋಚಕರ ಜತೆಗೆ ಚರ್ಚಿಸಲಾಗುತ್ತಿದೆ. 2033ರ ವೇಳೆಗೆ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸುವ ವಿಶ್ವಾಸ ಇದೆ’ ಎಂದರು.</p>.<p>‘ಬೆಂಗಳೂರಿನ ದಾಬಸ್ಪೇಟೆ- ದೊಡ್ಡಬಳ್ಳಾಪುರ ನಡುವಿನ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ನಾಲೆಡ್ಜ್-ಹೆಲ್ತ್-ಇನ್ನೋವೇಶನ್- ರಿಸರ್ಚ್ (ಕೆ.ಎಚ್.ಐ.ಆರ್) ಸಿಟಿಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರ ಭಾಗವಾಗಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಮೊದಲ ಹಂತದ ಅಭಿವೃದ್ಧಿಗೆ ಆಗಸ್ಟ್ 23ರಂದು ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಈ ಯೋಜನೆಗೆ ಒಟ್ಟು ₹ 40 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುತ್ತಿದ್ದು, ನೇರವಾಗಿ 48 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ಹೇಳಿದರು.</p>.<p>‘ನಾಲೆಡ್ಜ್-ಹೆಲ್ತ್-ಇನ್ನೋವೇಶನ್- ರಿಸರ್ಚ್ ಸಿಟಿಯಲ್ಲಿ ಜಗತ್ತಿನ ಉತ್ಕೃಷ್ಟ ವಿಶ್ವವಿದ್ಯಾಲಯಗಳು, ವೈದ್ಯಕೀಯ ಸಂಸ್ಥೆಗಳು, ಸಂಶೋಧನಾಲಯಗಳು, ಉದ್ಯಮಗಳು, ನವೋದ್ಯಮಗಳು ನೆಲೆಯೂರಲಿವೆ. ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪ 407 ಎಕರೆ ವಿಸ್ತೀರ್ಣದಲ್ಲಿ ಒಟ್ಟು ಎರಡು ಹಂತಗಳಲ್ಲಿ ₹ 817 ಕೋಟಿ ವೆಚ್ಚದಲ್ಲಿ ಬೆಂಗಳೂರು ಸಿಗ್ನೇಚರ್ ಬಿಜಿನೆಸ್ ಪಾರ್ಕ್ ನಿರ್ಮಿಸಲಾಗುವುದು’ ಎಂದು ಹೇಳಿದರು.</p>.<p>ರಾಜ್ಯ ಸರ್ಕಾರವು ಫಾಕ್ಸ್ ಕಾನ್, ವಿಸ್ಟ್ರಾನ್, ಟಾಟಾ ಗ್ರೂಪ್, ಏರ್ ಇಂಡಿಯಾ, ಟೊಯೋಟಾ ಮುಂತಾದ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದವನ್ನು ಮಾಡಿಕೊಂಡಿದೆ. ಈ ಕಂಪನಿಗಳು ಕ್ರಮವಾಗಿ ₹14 ಸಾವಿರ ಕೋಟಿ, ₹ 1,500 ಕೋಟಿ, ₹2,300 ಕೋಟಿ ಮತ್ತು ₹1,300 ಕೋಟಿಗಳನ್ನು ರಾಜ್ಯದಲ್ಲಿ ಹೂಡಿಕೆ ಮಾಡಲಿವೆ ಎಂದು ಹೇಳಿದರು.</p>.<p>‘ರಾಜ್ಯದ ವಿದ್ಯುತ್ ಚಾಲಿತ ವಾಹನಗಳ ವಲಯದಲ್ಲಿ ₹50 ಸಾವಿರ ಕೋಟಿ ಹೂಡಿಕೆಯ ಖಾತ್ರಿ ನಮಗೆ ಸಿಕ್ಕಿದ್ದು, ಇದರಿಂದ 1 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದನ್ನು ಪರಿಗಣಿಸಿ, 2024-29ರ ಅವಧಿಗೆ ಚಾಲೂ ಆಗುವಂತೆ ಕ್ಲೀನ್ ಮೊಬಿಲಿಟಿ ಪಾಲಿಸಿಯನ್ನು ರೂಪಿಸಲಾಗಿದೆ’ ಎಂದರು.</p>.<p>‘ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂ.ಎಸ್.ಐ.ಎಲ್) ಹಲವು ಜನಪರ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಕೇವಲ ₹410 ಕೋಟಿ ಇದ್ದ ಚಿಟ್ ಫಂಡ್ ವ್ಯವಹಾರವನ್ನು ₹ 5,000 ಕೋಟಿಗೆ ವಿಸ್ತರಿಸುವ ಉದ್ದೇಶ ಇದ್ದು, ಇನ್ನು ಕೆಲವೇ ದಿನಗಳಲ್ಲಿ ಅದಕ್ಕೆ ಚಾಲನೆ ಸಿಗಲಿದೆ. ಸದ್ಯ 23 ಶಾಖೆಗಳಿರುವ ಚಿಟ್ ಫಂಡ್ ಶಾಖೆಗಳನ್ನು 100ಕ್ಕೆ ಹೆಚ್ಚಿಸಲಾಗುವುದು. ಮೊದಲ ಹಂತದಲ್ಲಿ ವಿಜಯಪುರದಲ್ಲೂ ಒಂದು ಚಿಟ್ ಫಂಡ್ ಕಚೇರಿ ತೆರೆಯಲಾಗುವುದು’ ಎಂದು ಹೇಳಿದರು.</p>.<p>‘10 ಮೆಗಾ ಔಷಧ ಮಳಿಗೆಗಳನ್ನು ರಾಜ್ಯದಲ್ಲಿ ಆರಂಭಿಸುತ್ತಿದ್ದು, ಅದರಲ್ಲಿ ಒಂದನ್ನು ವಿಜಯಪುರದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದೆ. ಸದ್ಯದಲ್ಲೇ ಇವೆರಡಕ್ಕೂ ಚಾಲನೆ ನೀಡಲಾಗುವುದು. ರಾಜ್ಯದಲ್ಲಿನ 83 ಜನೌಷಧ ಕೇಂದ್ರಗಳನ್ನು ಆಧುನೀಕರಿಸುವ ಕೆಲಸ ಕೂಡ ಕೈಗೆತ್ತಿಕೊಳ್ಳಲಾಗುವುದು’ ಎಂದರು.</p>.<p>‘ಎಂಎಸ್ಐಎಲ್ ತನ್ನ ಸೇವೆಗಳನ್ನು ವಿಸ್ತರಿಸಿಕೊಳ್ಳುತ್ತಿರುವ ಕಾರಣಕ್ಕೆ ಎರಡು ತಿಂಗಳಲ್ಲಿ 73 ಮಂದಿ ಅಧಿಕಾರಿಗಳನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು. ₹3,759 ಕೋಟಿ ವಹಿವಾಟು ನಡೆಸಿರುವ ಎಂಎಸ್ಐಎಲ್ ₹ 103 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷಕ್ಕಿಂತ ₹ 62 ಕೋಟಿ ಹೆಚ್ಚು ಲಾಭ ಗಳಿಸಿದೆ’ ಎಂದು ತಿಳಿಸಿದರು.</p>.<p>‘ಮೈಸೂರು ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಲಾಭದಾಯಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ ಅದರ ಲಾಭ ಬಹುತೇಕ ದ್ವಿಗುಣ ಆಗಿದೆ. 2022-23ರಲ್ಲಿ ₹182 ಕೋಟಿ ಲಾಭ ಪಡೆದಿದ್ದ ಸಂಸ್ಥೆ 2023-24ರಲ್ಲಿ ₹352 ಕೋಟಿ ಲಾಭ ಮಾಡಿದೆ. 2024-25ರಲ್ಲಿ ₹500 ಕೋಟಿ ಲಾಭ ಮಾಡುವ ಉದ್ದೇಶ ಇದೆ’ ಎಂದರು.</p>.<p>‘ಸರ್ಕಾರಿ ಸ್ವಾಮ್ಯದ ಮೈಸೂರು ಪೇಂಟ್ಸ್ ಇದುವರೆಗೆ ಕೇವಲ ಇಂಕ್ ತಯಾರಿಕೆಗೆ ಸೀಮಿತವಾಗಿತ್ತು. ಇದನ್ನು ಪುನಶ್ಚೇತನಗೊಳಿಸಿ, ಆಲಂಕಾರಿಕ ಬಣ್ಣಗಳನ್ನು ಉತ್ಪಾದಿಸುವುದು ಹಾಗೂ ಎಲ್ಲ ಸರ್ಕಾರಿ ಕಟ್ಟಡಗಳಿಗೆ ಇದೇ ಬಣ್ಣವನ್ನು ಬಳಸುವ ಉದ್ದೇಶ ಹೊಂದಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>