ವಿಜಯಪುರ: ಎಎಪಿಆರಂಭವಾಗಿ ಒಂದು ದಶಕವಾಗಿದೆ. ಈಗಾಗಲೇ ಎರಡು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ದೇಶದಲ್ಲಿ ಬಲಾಡ್ಯ ಪಕ್ಷವಾಗಿ ಹೊರಹೊಮ್ಮಿದೆ. ಭವಿಷ್ಯದಲ್ಲಿ ಇನ್ನಷ್ಟು ಬಲಿಷ್ಠವಾಗಲಿದೆ ಎಂದುಪಕ್ಷದ ಜಿಲ್ಲಾ ವಕ್ತಾರಡಾ.ಬಿ.ಎಂ.ಬಿರಾದಾರ ಹೇಳಿದರು.
ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನ ಅಂಗವಾಗಿ ನಗರದ ದೇವಸ್ಥಾನ ಹಾಗೂ ಮಸೀದಿ, ಮಂದಿರಗಳ ಎದುರುಬಡವರಿಗೆ, ನಿರ್ಗತಿಕರಿಗೆ ಹಾಗೂ ಬಿಕ್ಷುಕರಿಗೆ ಆಹಾರ ವಿತರಣೆ ಮಾಡಿ ಅವರು ಮಾತನಾಡಿದರು.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ. ಈ ಸಂಬಂಧ ಈಗಾಗಲೇ ಸಿದ್ಧತೆಗಳು ನಡೆದಿವೆ ಎಂದರು.
ಬೇರೆ ಪಕ್ಷಗಳಿಂದ ಅನೇಕ ಮುಖಂಡರು, ಕಾರ್ಯಕರ್ತರು ಎಎಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದೆ. ವಿಜಯಪುರ ಕ್ಷೇತ್ರದಲ್ಲಿ ಪಕ್ಷದ ಗೆಲುವು ನಿಶ್ಚಿತ ಎಂದು ಅವರು ಅಭಿಪ್ರಾಯಪಟ್ಟರು.
ಆಮ್ ಆದ್ಮಿ ಪಕ್ಷ ಸ್ಥಾಪನೆಯಾಗಿ ಒಂದು ದಶಕ ಪೂರೈಸಿದರಿಂದಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ರಕ್ತದಾನ ಶಿಬಿರವನ್ನು ಕೂಡ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಡಾ.ಸಾಬೀರ್ ಮೊಮಿನ್ ರಕ್ತದಾನ ಶಿಬಿರ ನಡೆಸಿಕೊಟ್ಟರು.