<p>ವಿಜಯಪುರ: ರೈತರು ಬೆಳೆದ ಕಬ್ಬಿಗೆ ಸರ್ಕಾರ ನ್ಯಾಯ ಸಮ್ಮತ ಹಾಗೂ ಲಾಭದಾಯಕ ಬೆಲೆ ನೀಡುವಂತೆಸಕ್ಕರೆ ಕಾರ್ಖಾನೆ ಮಾಲೀಕರಿಗೆ ಕಟ್ಟು ನಿಟ್ಟಿನ ಆದೇಶ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ<br />ಡಾ. ಬಿ.ಎಂ.ಬಿರಾದಾರ ಒತ್ತಾಯಿಸಿದರು.</p>.<p>ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿ ಸಕ್ಕರೆ ಕಾರ್ಖಾನೆ ಮಾಲೀಕರ ಬೆಂಬಲಕ್ಕೆನಿಂತು ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ. ಈ ದೇಶಕ್ಕೆ ಸಕ್ಕರೆ ಕಾರ್ಖಾನೆಯವರು ಮುಖ್ಯವಲ್ಲ, ದೇಶಕ್ಕೆ ಅನ್ನಕೊಟ್ಟು ಬದುಕಿಸುವ ರೈತನೇ ಮುಖ್ಯ ಎಂದರು.</p>.<p>ಉದ್ದಿಮೆದಾರರಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಾ ರೈತರಿಗೆ ಅನ್ಯಾಯ ಮಾಡುತ್ತಿವೆ. ರೈತರು ಕೇಳುವ ಬೆಂಬಲ ಬೆಲೆಯನ್ನುಘೋಷಣೆ ಮಾಡಬೇಕು. ಇಲ್ಲದಿದ್ದರೆ ಆಮ್ ಆದ್ಮಿ ಪಕ್ಷ ಕೂಡ ರೈತರ ಬೆನ್ನಿಗೆ ನಿಂತು ಬೀದಿಗಿಳಿದು ಉಗ್ರ<br />ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದಕುಲಕರ್ಣಿ, ಎಎಪಿ ಮುಖಂಡರಾದ ಮಲ್ಲಿಕಾರ್ಜುನ ಕೆಂಗನಾಳ, ಅನ್ನಪೂರ್ಣ ಬೆಳ್ಳೆಣ್ಣವರ, ಬೋಗೇಶ ಸೋಲಾಪುರ, ನಾರಾಯಣಸಂಸ್ಥಾನಿಕ ಮಾತನಾಡಿದರು.</p>.<p>ಸದಾಶಿವ ಬರಟಗಿ, ಬಾಲಪ್ಪಗೌಡ ಲಿಂಗದಳ್ಳಿ, ಯಲ್ಲನಗೌಡ ಬಿರಾದಾರ, ಗೌಡಪ್ಪಗೌಡಬನ್ನೆಟ್ಟಿ, ಶರಣಗೌಡ ಬಿರಾದಾರ, ಸಂಗನಗೌಡ ಕೋಳೂರ, ಈರನಗೌಡ ಬಿರಾದಾರ, ಪ್ರಭುಗೌಡ ಬಿರಾದಾರ,ಯಲ್ಲಾಲಿಂಗ ನಾಗಾರ, ಚನ್ನನಗೌಡ ಬಿರಾದಾರ, ಸೋಮನಗೌಡ ಕೂಳೂರ, ನಂದುಗೌಡ ಬಿರಾದಾರ,ಚನಬಸಪ್ಪ ಸಿಂಧೂರ, ಯಲ್ಲಣ್ಣ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ರೈತರು ಬೆಳೆದ ಕಬ್ಬಿಗೆ ಸರ್ಕಾರ ನ್ಯಾಯ ಸಮ್ಮತ ಹಾಗೂ ಲಾಭದಾಯಕ ಬೆಲೆ ನೀಡುವಂತೆಸಕ್ಕರೆ ಕಾರ್ಖಾನೆ ಮಾಲೀಕರಿಗೆ ಕಟ್ಟು ನಿಟ್ಟಿನ ಆದೇಶ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ<br />ಡಾ. ಬಿ.ಎಂ.ಬಿರಾದಾರ ಒತ್ತಾಯಿಸಿದರು.</p>.<p>ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.</p>.<p>ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿ ಸಕ್ಕರೆ ಕಾರ್ಖಾನೆ ಮಾಲೀಕರ ಬೆಂಬಲಕ್ಕೆನಿಂತು ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ. ಈ ದೇಶಕ್ಕೆ ಸಕ್ಕರೆ ಕಾರ್ಖಾನೆಯವರು ಮುಖ್ಯವಲ್ಲ, ದೇಶಕ್ಕೆ ಅನ್ನಕೊಟ್ಟು ಬದುಕಿಸುವ ರೈತನೇ ಮುಖ್ಯ ಎಂದರು.</p>.<p>ಉದ್ದಿಮೆದಾರರಪರವಾಗಿ ಸರ್ಕಾರಗಳು ಕೆಲಸ ಮಾಡುತ್ತಾ ರೈತರಿಗೆ ಅನ್ಯಾಯ ಮಾಡುತ್ತಿವೆ. ರೈತರು ಕೇಳುವ ಬೆಂಬಲ ಬೆಲೆಯನ್ನುಘೋಷಣೆ ಮಾಡಬೇಕು. ಇಲ್ಲದಿದ್ದರೆ ಆಮ್ ಆದ್ಮಿ ಪಕ್ಷ ಕೂಡ ರೈತರ ಬೆನ್ನಿಗೆ ನಿಂತು ಬೀದಿಗಿಳಿದು ಉಗ್ರ<br />ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದಕುಲಕರ್ಣಿ, ಎಎಪಿ ಮುಖಂಡರಾದ ಮಲ್ಲಿಕಾರ್ಜುನ ಕೆಂಗನಾಳ, ಅನ್ನಪೂರ್ಣ ಬೆಳ್ಳೆಣ್ಣವರ, ಬೋಗೇಶ ಸೋಲಾಪುರ, ನಾರಾಯಣಸಂಸ್ಥಾನಿಕ ಮಾತನಾಡಿದರು.</p>.<p>ಸದಾಶಿವ ಬರಟಗಿ, ಬಾಲಪ್ಪಗೌಡ ಲಿಂಗದಳ್ಳಿ, ಯಲ್ಲನಗೌಡ ಬಿರಾದಾರ, ಗೌಡಪ್ಪಗೌಡಬನ್ನೆಟ್ಟಿ, ಶರಣಗೌಡ ಬಿರಾದಾರ, ಸಂಗನಗೌಡ ಕೋಳೂರ, ಈರನಗೌಡ ಬಿರಾದಾರ, ಪ್ರಭುಗೌಡ ಬಿರಾದಾರ,ಯಲ್ಲಾಲಿಂಗ ನಾಗಾರ, ಚನ್ನನಗೌಡ ಬಿರಾದಾರ, ಸೋಮನಗೌಡ ಕೂಳೂರ, ನಂದುಗೌಡ ಬಿರಾದಾರ,ಚನಬಸಪ್ಪ ಸಿಂಧೂರ, ಯಲ್ಲಣ್ಣ ಬಿರಾದಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>