ಪರಮೇಶ್ವರಪ್ಪನವರ ಹಗರಿಬೊಮ್ಮನಹಳ್ಳಿಯ ಹೌಸಿಂಗ್ ಬೋರ್ಡ್ ಕಾಲೊನಿಯ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಬೆಂಗಳೂರಿನ ನೆಲಮಂಗಲದಲ್ಲಿರುವ ನಿವೇಶನ, ಚಿತ್ರದುರ್ಗದಲ್ಲಿ ಮೂರು ಮಹಡಿಯ ಮನೆ, ಕೂಡ್ಲಿಗಿಯಲ್ಲಿ ಮನೆ ಹಾಗೂ ನಿವೇಶನ ಹೊಂದಿರುವ ದಾಖಲೆಗಳು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಆದರೆ, ಚಿನ್ನಾಭರಣಗಳ ನಿಖರ ಮಾಹಿತಿ ಲಭ್ಯವಾಗಿಲ್ಲ.