ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಎಚ್. ಎಚ್. ಸಂಗಾಪೂರ ಕ್ರಾಸ್ ಬಳಿ ಗುರುವಾರ ಕಬ್ಬು ಸಾಗಿಸುವ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಸಾವಿಗೀಡಾದ ಬೈಕ್ ಸವಾರರು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಸಮೀರ್ ಬಸ್ತಿ(17) ಮತ್ತು ರಾಹುಲ್ ಬೆನ್ನೂರು (17) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ್ ಭೇಟಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.