<p><strong>ವಿಜಯಪುರ:</strong> ಪರಿಶಿಷ್ಟ ಜಾತಿ ಒಳ ಮಿಸಲಾತಿ ಸಂಬಂಧ ನಡೆಯುತ್ತಿರುವ ದತ್ತಾಂಶ ಸಂಗ್ರಹಣೆ ವೇಳೆ ಜಿಲ್ಲೆಯ ಪರಿಶಿಷ್ಟ ಜಾತಿಯ ಯಾವುದೇ ಕುಟುಂಬವು ಹೊರಗುಳಿಯದಂತೆ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ. </p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಡಿಯೋ ಸಂವಾದದ ಮೂಲಕ ನಡೆದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಅವಧಿಯನ್ನು ಮೇ 30 ರಿಂದ ಜೂನ್ 1 ರ ವರೆಗೆ ಮರು ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಜೂನ್ 1 ರ ವರೆಗೆ ವಿಸ್ತರಿಸಲಾಗಿದೆ ಎಂದರು.</p>.<p>ಮನೆ-ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಅವಧಿಯಲ್ಲಿ ಲಭ್ಯವಿಲ್ಲದ ಹಾಗೂ ಜಿಲ್ಲೆಯಿಂದ ಬೇರೆ ಬೇರೆ ಸ್ಥಳಗಳಿಗೆ ತೆರಳಿರುವ ಪರಿಶಿಷ್ಟ ಜಾತಿ ಕುಟುಂಬದವರ ಮಾಹಿತಿ ಪಡೆದುಕೊಂಡು, ಸಂಬಂಧಿಸಿದ ಅಧಿಕಾರಿಗಳು ಸಮೀಕ್ಷಾ ಮಾಹಿತಿ ನೀಡಬೇಕು ಎಂದು ಸೂಚಿಸಿದರು.</p>.<p>ಮೇ 30, 31 ಹಾಗೂ ಜೂನ್ 1 ರಂದು 3 ದಿನಗಳ ವಿಶೇಷ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಮೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ 3 ದಿನಗಳ ಕಾಲ ನಡೆಯುವ ವಿಶೇಷ ಶಿಬಿರದಲ್ಲಿ ಉಪಸ್ಥಿತರಿರಲಿದ್ದು, ಸಮೀಕ್ಷೆಯಿಂದ ಹೊರಗುಳಿದ ಪರಿಶಿಷ್ಟ ಜಾತಿಯ ಕುಟುಂಬದವರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. </p>.<p>ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಬೇಕು. ಸಮೀಕ್ಷಾ ಕಾರ್ಯದ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ವಿಡಿಯೋ ಸಂವಾದದ ಮೂಲಕ ಪ್ರತಿ ತಾಲ್ಲೂಕಿನಿಂದ ಸಮೀಕ್ಷೆಯ ಮಾಹಿತಿಯನ್ನು ಪಡೆದುಕೊಂಡರು.</p>.<p>ಜಿಲ್ಲೆಯ ಸಮೀಕ್ಷಾ ಪ್ರಗತಿ ಉತ್ತಮವಾಗಿದ್ದು, ಗ್ರಾಮ, ನಗರ ಸ್ಥಳಿಯ ಸಂಸ್ಥೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯದಿಂದ ಹೊರಗುಳಿಯಬಹುದಾದ ಪರಿಶಿಷ್ಟ ಜಾತಿ ಕುಟುಂಬಗಳ ವಿವರವನ್ನು ಪಡೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. </p>.<p>ವಿಡಿಯೋ ಸಂವಾದದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಬದ್ರುದ್ಧಿನ್ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಬಿ.ಜೆ. ಇಂಡಿ, ಜಿಲ್ಲಾ ವ್ಯವಸ್ಥಾಪಕ ಮಂಟೂರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಪರಿಶಿಷ್ಟ ಜಾತಿ ಒಳ ಮಿಸಲಾತಿ ಸಂಬಂಧ ನಡೆಯುತ್ತಿರುವ ದತ್ತಾಂಶ ಸಂಗ್ರಹಣೆ ವೇಳೆ ಜಿಲ್ಲೆಯ ಪರಿಶಿಷ್ಟ ಜಾತಿಯ ಯಾವುದೇ ಕುಟುಂಬವು ಹೊರಗುಳಿಯದಂತೆ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದ್ದಾರೆ. </p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿಡಿಯೋ ಸಂವಾದದ ಮೂಲಕ ನಡೆದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. </p>.<p>ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರ ಅವಧಿಯನ್ನು ಮೇ 30 ರಿಂದ ಜೂನ್ 1 ರ ವರೆಗೆ ಮರು ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಜೂನ್ 1 ರ ವರೆಗೆ ವಿಸ್ತರಿಸಲಾಗಿದೆ ಎಂದರು.</p>.<p>ಮನೆ-ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಸಮೀಕ್ಷಾ ಅವಧಿಯಲ್ಲಿ ಲಭ್ಯವಿಲ್ಲದ ಹಾಗೂ ಜಿಲ್ಲೆಯಿಂದ ಬೇರೆ ಬೇರೆ ಸ್ಥಳಗಳಿಗೆ ತೆರಳಿರುವ ಪರಿಶಿಷ್ಟ ಜಾತಿ ಕುಟುಂಬದವರ ಮಾಹಿತಿ ಪಡೆದುಕೊಂಡು, ಸಂಬಂಧಿಸಿದ ಅಧಿಕಾರಿಗಳು ಸಮೀಕ್ಷಾ ಮಾಹಿತಿ ನೀಡಬೇಕು ಎಂದು ಸೂಚಿಸಿದರು.</p>.<p>ಮೇ 30, 31 ಹಾಗೂ ಜೂನ್ 1 ರಂದು 3 ದಿನಗಳ ವಿಶೇಷ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಮೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ 3 ದಿನಗಳ ಕಾಲ ನಡೆಯುವ ವಿಶೇಷ ಶಿಬಿರದಲ್ಲಿ ಉಪಸ್ಥಿತರಿರಲಿದ್ದು, ಸಮೀಕ್ಷೆಯಿಂದ ಹೊರಗುಳಿದ ಪರಿಶಿಷ್ಟ ಜಾತಿಯ ಕುಟುಂಬದವರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. </p>.<p>ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಬೇಕು. ಸಮೀಕ್ಷಾ ಕಾರ್ಯದ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.</p>.<p>ವಿಡಿಯೋ ಸಂವಾದದ ಮೂಲಕ ಪ್ರತಿ ತಾಲ್ಲೂಕಿನಿಂದ ಸಮೀಕ್ಷೆಯ ಮಾಹಿತಿಯನ್ನು ಪಡೆದುಕೊಂಡರು.</p>.<p>ಜಿಲ್ಲೆಯ ಸಮೀಕ್ಷಾ ಪ್ರಗತಿ ಉತ್ತಮವಾಗಿದ್ದು, ಗ್ರಾಮ, ನಗರ ಸ್ಥಳಿಯ ಸಂಸ್ಥೆಗಳಲ್ಲಿ ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮೀಕ್ಷಾ ಕಾರ್ಯದಿಂದ ಹೊರಗುಳಿಯಬಹುದಾದ ಪರಿಶಿಷ್ಟ ಜಾತಿ ಕುಟುಂಬಗಳ ವಿವರವನ್ನು ಪಡೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. </p>.<p>ವಿಡಿಯೋ ಸಂವಾದದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಬದ್ರುದ್ಧಿನ್ ಸೌದಾಗರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಸಹಾಯ ನಿರ್ದೇಶಕ ಬಿ.ಜೆ. ಇಂಡಿ, ಜಿಲ್ಲಾ ವ್ಯವಸ್ಥಾಪಕ ಮಂಟೂರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>