<p><strong>ವಿಜಯಪುರ:</strong> ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗುವಂತೆ ರಸ್ತೆಗಳ ನಿರ್ಮಾಣ ಹಾಗೂ ಸುಸಜ್ಜಿತ ಹೋಟೆಲ್ಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಹೇಳಿದರು.</p>.<p>ಐತಿಹಾಸಿಕ ಕುಮಟಗಿ ವಾಟರ್ ಪೆವಿಲಿಯನ್ ಪ್ರವಾಸಿ ತಾಣದಲ್ಲಿ ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಹೆರಿಟೇಜ್ ವಾಕ್ ಕಾರ್ಯಕ್ರಮ ಕೈಗೊಂಡು ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿ, ಸ್ಮಾರಕದ ಸ್ವಚ್ಛತೆ, ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿಜಯಪುರದ ಹಲವಾರು ಕಡೆ ಸುರಂಗ ಮಾರ್ಗಗಳಿದ್ದು, ಕನಿಷ್ಠ 100 ಮೀಟರ್ ಸುರಂಗ ಮಾರ್ಗಗಳನ್ನು ಸ್ವಚ್ಛಗೊಳಿಸಿ ಪ್ರವಾಸಿಗರು ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.</p>.<p>ಪ್ರವಾಸಿಗರ ಆಕರ್ಷಣೆಗಾಗಿ ನಗರದ ಮುಖ್ಯ ರಸ್ತೆಗಳ ಪಕ್ಕದಲ್ಲಿರುವ ಅಂಗಡಿ, ಮಳಿಗೆಗಳಿಗೆ ಹಾಗೂ ಪಾದಚಾರಿ ಮಾರ್ಗಗಿಗೆ, ಕಂಪೌಂಡ್ ಗೋಡೆಗಳಿಗೆ ಬಣ್ಣ ಹಾಗೂ ಕಲಾಕೃತಿಗಳ ಚಿತ್ರಗಳನ್ನು ಮುಂದಿನ ದಿನಗಳಲ್ಲಿ ಚಿತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p>ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ‘ಅತ್ಯುತ್ತಮ ಪ್ರವಾಸಿ ಮಿತ್ರ’ ಮತ್ತು ‘ಅತ್ಯುತ್ತಮ ಪ್ರವಾಸಿ ಮಾರ್ಗದರ್ಶಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ವಿಜಯಪುರ ತಹಶೀಲ್ದಾರ್ ಸಿದ್ದರಾಯ ಬೋಸಗಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಪೀಟರ್ ಅಲೆಕ್ಸಾಂಡರ್, ಇಗ್ನೋ ಪ್ರಾದೇಶಿಕ ನಿರ್ದೇಕ ವರದರಾಜನ್, ಅಮೀನ್ ಹುಲ್ಲೂರು, ಅಂಬಾದಾಸ ಜೋಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಲು ಅನುಕೂಲವಾಗುವಂತೆ ರಸ್ತೆಗಳ ನಿರ್ಮಾಣ ಹಾಗೂ ಸುಸಜ್ಜಿತ ಹೋಟೆಲ್ಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಹೇಳಿದರು.</p>.<p>ಐತಿಹಾಸಿಕ ಕುಮಟಗಿ ವಾಟರ್ ಪೆವಿಲಿಯನ್ ಪ್ರವಾಸಿ ತಾಣದಲ್ಲಿ ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ನಗರದಲ್ಲಿ ಹೆರಿಟೇಜ್ ವಾಕ್ ಕಾರ್ಯಕ್ರಮ ಕೈಗೊಂಡು ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿ, ಸ್ಮಾರಕದ ಸ್ವಚ್ಛತೆ, ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿಜಯಪುರದ ಹಲವಾರು ಕಡೆ ಸುರಂಗ ಮಾರ್ಗಗಳಿದ್ದು, ಕನಿಷ್ಠ 100 ಮೀಟರ್ ಸುರಂಗ ಮಾರ್ಗಗಳನ್ನು ಸ್ವಚ್ಛಗೊಳಿಸಿ ಪ್ರವಾಸಿಗರು ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.</p>.<p>ಪ್ರವಾಸಿಗರ ಆಕರ್ಷಣೆಗಾಗಿ ನಗರದ ಮುಖ್ಯ ರಸ್ತೆಗಳ ಪಕ್ಕದಲ್ಲಿರುವ ಅಂಗಡಿ, ಮಳಿಗೆಗಳಿಗೆ ಹಾಗೂ ಪಾದಚಾರಿ ಮಾರ್ಗಗಿಗೆ, ಕಂಪೌಂಡ್ ಗೋಡೆಗಳಿಗೆ ಬಣ್ಣ ಹಾಗೂ ಕಲಾಕೃತಿಗಳ ಚಿತ್ರಗಳನ್ನು ಮುಂದಿನ ದಿನಗಳಲ್ಲಿ ಚಿತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.</p>.<p>ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲೆಯ ‘ಅತ್ಯುತ್ತಮ ಪ್ರವಾಸಿ ಮಿತ್ರ’ ಮತ್ತು ‘ಅತ್ಯುತ್ತಮ ಪ್ರವಾಸಿ ಮಾರ್ಗದರ್ಶಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ವಿಜಯಪುರ ತಹಶೀಲ್ದಾರ್ ಸಿದ್ದರಾಯ ಬೋಸಗಿ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಪೀಟರ್ ಅಲೆಕ್ಸಾಂಡರ್, ಇಗ್ನೋ ಪ್ರಾದೇಶಿಕ ನಿರ್ದೇಕ ವರದರಾಜನ್, ಅಮೀನ್ ಹುಲ್ಲೂರು, ಅಂಬಾದಾಸ ಜೋಶಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>