<p><strong>ವಿಜಯಪುರ</strong>: ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು ಸಕಾರಾತ್ಮಕ ಆಲೋಚನೆಗಳಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿದ ಅವರು, ‘ಉಪನ್ಯಾಸಕರು ಅಪಾರ ಪರಿಶ್ರಮದೊಂದಿಗೆ ಆಧುನಿಕ ವಿಜ್ಞಾನ, ತಂತ್ರಜ್ಞಾನ ಹಾಗೂ ಅಂತರ್ಜಾಲವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮೌಲ್ಯಮಾಪನ ಕುಲಸಚಿವ ಬಿ.ಎಲ್. ಲಕ್ಕಣ್ಣವರ ಮಾತನಾಡಿ, ‘ಉಪನ್ಯಾಸಕರ ಜ್ಞಾನಾರ್ಜನೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕ. ಶಿಕ್ಷಕರು ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳ ವಿವಿಧ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪಿ.ಜಿ. ತಡಸದ, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಉದಯಕುಮಾರ ಕುಲಕರ್ಣಿ, ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಸಕ್ಪಾಲ್ ಹೂವಣ್ಣ ಮಾತನಾಡಿದರು.</p>.<p>ಸಂಯೋಜಕಿ ಮೆಹರಾಜಬೇಗಂ ಸೈಯ್ಯದ, ರೇಖಾ ಗಣಿಹಾರ, ಚಲುವರಾಜು, ಜಗದೀಶ್, ಸಾವಿತ್ರಿ, ಜಕ್ಕವ್ವ ವಠ್ಠಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು ಸಕಾರಾತ್ಮಕ ಆಲೋಚನೆಗಳಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.</p>.<p>ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಅತಿಥಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿದ ಅವರು, ‘ಉಪನ್ಯಾಸಕರು ಅಪಾರ ಪರಿಶ್ರಮದೊಂದಿಗೆ ಆಧುನಿಕ ವಿಜ್ಞಾನ, ತಂತ್ರಜ್ಞಾನ ಹಾಗೂ ಅಂತರ್ಜಾಲವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಮೌಲ್ಯಮಾಪನ ಕುಲಸಚಿವ ಬಿ.ಎಲ್. ಲಕ್ಕಣ್ಣವರ ಮಾತನಾಡಿ, ‘ಉಪನ್ಯಾಸಕರ ಜ್ಞಾನಾರ್ಜನೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅತ್ಯಂತ ಅವಶ್ಯಕ. ಶಿಕ್ಷಕರು ವಿದ್ಯಾರ್ಥಿಗಳ ಗಮನ ಕೇಂದ್ರೀಕರಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳ ವಿವಿಧ ಮಾದರಿಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪಿ.ಜಿ. ತಡಸದ, ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಉದಯಕುಮಾರ ಕುಲಕರ್ಣಿ, ಸ್ನಾತಕ ಅಧ್ಯಯನ ವಿಭಾಗದ ವಿಶೇಷಾಧಿಕಾರಿ ಸಕ್ಪಾಲ್ ಹೂವಣ್ಣ ಮಾತನಾಡಿದರು.</p>.<p>ಸಂಯೋಜಕಿ ಮೆಹರಾಜಬೇಗಂ ಸೈಯ್ಯದ, ರೇಖಾ ಗಣಿಹಾರ, ಚಲುವರಾಜು, ಜಗದೀಶ್, ಸಾವಿತ್ರಿ, ಜಕ್ಕವ್ವ ವಠ್ಠಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>