<p><strong>ವಿಜಯಪುರ: </strong>ಮೀನುಗಾರಿಕೆ ಆದಾಯ ಗಳಿಕೆಯ ಮಾರ್ಗವಾಗಿದ್ದು, ರೈತರು ಕೃಷಿಹೊಂಡದಲ್ಲಿ ಮೀನುಗಾರಿಕೆ ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಅರಬಾವಿ ತೋಟಗಾರಿಕೆ ಮಾಹಾವಿದ್ಯಾಲಯದ ವಿಶ್ರಾಂತ ಡೀನ್ ಡಾ.ಎಸ್.ಐ.ಹನಮಶೆಟ್ಟಿ ಹೇಳಿದರು.</p>.<p>ಇಲ್ಲಿನ ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಒಳನಾಡು ಮೀನುಗಾರಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲೆ ಕೆರೆ ತುಂಬುವ ಯೋಜನೆಯಡಿ ಸಾಕಷ್ಟು ಕೆರೆಗಳು ಭರ್ತಿಯಾಗಿದ್ದು, ಮೀನುಗಾರಿಕೆಗೆ ವಿಪುಲ ಅವಕಾಶಗಳು ದೊರೆತಂತಾಗಿದೆ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಶೈಲ ಗಂಗನಳ್ಳಿ, ಮೀನು ಮಾರಾಟಕ್ಕೆ ಐಸ್ಬಾಕ್ಸ್, ಮೀನು ಮಾರಾಟಕ್ಕೆ ವಾಹನ, ಹರಿಗೋಲು ಸೇರಿದಂತೆ ಅನೇಕ ಸೌಲಭ್ಯಗಳಿದ್ದು, ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ.ವಿಜಯಕುಮಾರ, ಜಿಲ್ಲೆಯಲ್ಲಿ 20 ಸಾವಿರಕ್ಕೂ ಹೆಚ್ಚಿನ ಕೃಷಿಹೊಂಡಗಳಿದ್ದು, ಎಲ್ಲ ರೈತರು ಕೃಷಿಹೊಂಡದಲ್ಲಿ ಪರ್ಯಾಯವಾಗಿ ಮೀನುಗಾರಿಕೆಗೂ ಬಳಸಿಕೊಂಡಲ್ಲಿ, ಜಿಲ್ಲೆಯೂ 5 ಲಕ್ಷ ಟನ್ ಮೀನು ಉತ್ಪಾದನೆ ಮಾಡಬಹುದಾಗಿದೆ ಎಂದರು.</p>.<p>ನಾರಾಯಣಪುರ ಮೀನುಗಾರಿಕಾ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ, ಇಂಡಿ ಕೃಷಿ ವಿಜ್ಞಾನಕೇಂದ್ರದ ಪಶುವೈದ್ಯ ತಜ್ಞ ಸಂತೋಷ ಶಿಂದೆ, ವಿಜಯಪುರ ಕೃಷಿ ವಿಜ್ಞಾನ ಕೇಂದ್ರದ ಪಶುವೈದ್ಯ ತಜ್ಞರಾದ ಡಾ.ಸಂಗೀತಾ ಜಾಧವ, ಸಹಾಯಕ ಪ್ರಾಧ್ಯಾಪಕ ವಿಜಯ ಆತನೂರ, ಮುತ್ತಪ್ಪ ಬಾವಿ, ಶಿವಾನಂದ ವಾಲಿಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮೀನುಗಾರಿಕೆ ಆದಾಯ ಗಳಿಕೆಯ ಮಾರ್ಗವಾಗಿದ್ದು, ರೈತರು ಕೃಷಿಹೊಂಡದಲ್ಲಿ ಮೀನುಗಾರಿಕೆ ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಅರಬಾವಿ ತೋಟಗಾರಿಕೆ ಮಾಹಾವಿದ್ಯಾಲಯದ ವಿಶ್ರಾಂತ ಡೀನ್ ಡಾ.ಎಸ್.ಐ.ಹನಮಶೆಟ್ಟಿ ಹೇಳಿದರು.</p>.<p>ಇಲ್ಲಿನ ಭೂತನಾಳದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಒಳನಾಡು ಮೀನುಗಾರಿಕೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲೆ ಕೆರೆ ತುಂಬುವ ಯೋಜನೆಯಡಿ ಸಾಕಷ್ಟು ಕೆರೆಗಳು ಭರ್ತಿಯಾಗಿದ್ದು, ಮೀನುಗಾರಿಕೆಗೆ ವಿಪುಲ ಅವಕಾಶಗಳು ದೊರೆತಂತಾಗಿದೆ ಎಂದು ಹೇಳಿದರು.</p>.<p>ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀಶೈಲ ಗಂಗನಳ್ಳಿ, ಮೀನು ಮಾರಾಟಕ್ಕೆ ಐಸ್ಬಾಕ್ಸ್, ಮೀನು ಮಾರಾಟಕ್ಕೆ ವಾಹನ, ಹರಿಗೋಲು ಸೇರಿದಂತೆ ಅನೇಕ ಸೌಲಭ್ಯಗಳಿದ್ದು, ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ.ವಿಜಯಕುಮಾರ, ಜಿಲ್ಲೆಯಲ್ಲಿ 20 ಸಾವಿರಕ್ಕೂ ಹೆಚ್ಚಿನ ಕೃಷಿಹೊಂಡಗಳಿದ್ದು, ಎಲ್ಲ ರೈತರು ಕೃಷಿಹೊಂಡದಲ್ಲಿ ಪರ್ಯಾಯವಾಗಿ ಮೀನುಗಾರಿಕೆಗೂ ಬಳಸಿಕೊಂಡಲ್ಲಿ, ಜಿಲ್ಲೆಯೂ 5 ಲಕ್ಷ ಟನ್ ಮೀನು ಉತ್ಪಾದನೆ ಮಾಡಬಹುದಾಗಿದೆ ಎಂದರು.</p>.<p>ನಾರಾಯಣಪುರ ಮೀನುಗಾರಿಕಾ ಸಹಾಯಕ ನಿರ್ದೇಶಕ ಶರಣಗೌಡ ಬಿರಾದಾರ, ಇಂಡಿ ಕೃಷಿ ವಿಜ್ಞಾನಕೇಂದ್ರದ ಪಶುವೈದ್ಯ ತಜ್ಞ ಸಂತೋಷ ಶಿಂದೆ, ವಿಜಯಪುರ ಕೃಷಿ ವಿಜ್ಞಾನ ಕೇಂದ್ರದ ಪಶುವೈದ್ಯ ತಜ್ಞರಾದ ಡಾ.ಸಂಗೀತಾ ಜಾಧವ, ಸಹಾಯಕ ಪ್ರಾಧ್ಯಾಪಕ ವಿಜಯ ಆತನೂರ, ಮುತ್ತಪ್ಪ ಬಾವಿ, ಶಿವಾನಂದ ವಾಲಿಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>