<p><strong>ವಿಜಯಪುರ:</strong> ‘ಕೃತಕ ಬುದ್ಧಿಮತ್ತೆಯು ಮಾಧ್ಯಮ ಕ್ಷೇತ್ರದ ಪ್ರತಿಯೊಂದು ಹಂತದ ಮೇಲೆಯೂ ಪರಿಣಾಮ ಬೀರುತ್ತಿದ್ದು, ಈ ಕುರಿತು ಪತ್ರಕರ್ತರು ಉಪಯುಕ್ತ ಮಾಹಿತಿ ಪಡೆಯುವುದು ಅತ್ಯವಶ್ಯ’ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.</p>.<p>ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ನವದೆಹಲಿಯ ಡಿಎಸ್ಟಿ ಕ್ಯೂರಿ-ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸಹಯೋಗದಲ್ಲಿ ‘ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮ’ ಎಂಬ ವಿಷಯದ ಕುರಿತುಆಯೋಜಿಸಿರುವ ರಾಷ್ಟ್ರೀಯ ಕಾರ್ಯಾಗಾರವನ್ನು (ಆನ್ಲೈನ್) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸೃಜನಶಿಲತೆ ಮತ್ತು ವಿಷಯದ ಕುರಿತು ಅವರಿಗಿರುವ ಕುತೂಹಲತೆಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಐಸಿಎಸ್ಎಸ್ಆರ್ ಸಿನಿಯರ್ ಫೆಲೋ ಪ್ರೊ.ಎ.ಎಸ್.ಬಾಲಸುಬ್ರಮಣ್ಯ ಮಾತನಾಡಿ, ‘ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾದವು. ಪ್ರಸ್ತುತ ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಕೆಲಸವನ್ನು ಸುಲಭಗೊಳಿಸಿದ್ದು, ಜೊತೆಗೆ ಅವರ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.</p>.<p>ಕೋಲ್ಕತ್ತಾ ಸುರೇಂದ್ರನಾಥ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡಾ.ಉಮಾ ಶಂಕರ ಪಾಂಡೆ ಮಾತನಾಡಿದರು.</p>.<p>ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಮಾತನಾಡಿ, ‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸಮಯ ಮತ್ತು ಕಾರ್ಯವನ್ನು ಸರಳಗೊಳಿಸಲು ಉಪಯುಕ್ತವಾಗಿದೆ’ ಎಂದರು.</p>.<p>‘ಆದರೆ, ಈ ಕೃತಕ ಬುದ್ಧಿಮತ್ತೆಯನ್ನು ಸರಿಯಾದ ರೀತಿ ಬಳಸುವಲ್ಲಿ ಪತ್ರಕರ್ತರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅವುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಒದುಗರಿಗೆ ಉಪಯುಕ್ತ ಮಾಹಿತಿ ನೀಡಲು ಸಾಧ್ಯ’ ಎಂದು ಅವರು ಹೇಳಿದರು.</p>.<p>ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರಗೌಡ ಕಾಕಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.</p>.<p>ಡಿಎಸ್ಟಿ ಕ್ಯೂರಿ-ಎಐನ ಸಂಯೋಜಕ ಪ್ರೊ.ಅಜೀಜ್ ಮಕಾನದಾರ್, ತಾಂತ್ರಿಕ ಸಂಯೋಜಕ ಸಂದೀಪ್ ನಾಯಕ್, ಕಾರ್ಯಕ್ರಮ ಸಂಯೋಜಕಿ ಡಾ. ತಹಮೀನಾ ಕೋಲಾರ ಉಪಸ್ಥಿತರಿದ್ದರು.</p>.<p>ದೇಶದ ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಆನ್ಲೈನ್ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>****</p>.<p>ಮುಂಬರುವ ಯುವ ಪೀಳಿಗೆ ಕೃತಕ ಬುದ್ಧಿಮತ್ತೆಯ ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು<br /><strong>-ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಕೃತಕ ಬುದ್ಧಿಮತ್ತೆಯು ಮಾಧ್ಯಮ ಕ್ಷೇತ್ರದ ಪ್ರತಿಯೊಂದು ಹಂತದ ಮೇಲೆಯೂ ಪರಿಣಾಮ ಬೀರುತ್ತಿದ್ದು, ಈ ಕುರಿತು ಪತ್ರಕರ್ತರು ಉಪಯುಕ್ತ ಮಾಹಿತಿ ಪಡೆಯುವುದು ಅತ್ಯವಶ್ಯ’ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.</p>.<p>ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ನವದೆಹಲಿಯ ಡಿಎಸ್ಟಿ ಕ್ಯೂರಿ-ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸಹಯೋಗದಲ್ಲಿ ‘ಕೃತಕ ಬುದ್ಧಿಮತ್ತೆ ಮತ್ತು ಮಾಧ್ಯಮ’ ಎಂಬ ವಿಷಯದ ಕುರಿತುಆಯೋಜಿಸಿರುವ ರಾಷ್ಟ್ರೀಯ ಕಾರ್ಯಾಗಾರವನ್ನು (ಆನ್ಲೈನ್) ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸೃಜನಶಿಲತೆ ಮತ್ತು ವಿಷಯದ ಕುರಿತು ಅವರಿಗಿರುವ ಕುತೂಹಲತೆಯನ್ನು ಹೆಚ್ಚಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಐಸಿಎಸ್ಎಸ್ಆರ್ ಸಿನಿಯರ್ ಫೆಲೋ ಪ್ರೊ.ಎ.ಎಸ್.ಬಾಲಸುಬ್ರಮಣ್ಯ ಮಾತನಾಡಿ, ‘ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾದವು. ಪ್ರಸ್ತುತ ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಕೆಲಸವನ್ನು ಸುಲಭಗೊಳಿಸಿದ್ದು, ಜೊತೆಗೆ ಅವರ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.</p>.<p>ಕೋಲ್ಕತ್ತಾ ಸುರೇಂದ್ರನಾಥ ಮಹಿಳಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಡಾ.ಉಮಾ ಶಂಕರ ಪಾಂಡೆ ಮಾತನಾಡಿದರು.</p>.<p>ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಮಾತನಾಡಿ, ‘ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಸಮಯ ಮತ್ತು ಕಾರ್ಯವನ್ನು ಸರಳಗೊಳಿಸಲು ಉಪಯುಕ್ತವಾಗಿದೆ’ ಎಂದರು.</p>.<p>‘ಆದರೆ, ಈ ಕೃತಕ ಬುದ್ಧಿಮತ್ತೆಯನ್ನು ಸರಿಯಾದ ರೀತಿ ಬಳಸುವಲ್ಲಿ ಪತ್ರಕರ್ತರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅವುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಒದುಗರಿಗೆ ಉಪಯುಕ್ತ ಮಾಹಿತಿ ನೀಡಲು ಸಾಧ್ಯ’ ಎಂದು ಅವರು ಹೇಳಿದರು.</p>.<p>ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರಗೌಡ ಕಾಕಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.</p>.<p>ಡಿಎಸ್ಟಿ ಕ್ಯೂರಿ-ಎಐನ ಸಂಯೋಜಕ ಪ್ರೊ.ಅಜೀಜ್ ಮಕಾನದಾರ್, ತಾಂತ್ರಿಕ ಸಂಯೋಜಕ ಸಂದೀಪ್ ನಾಯಕ್, ಕಾರ್ಯಕ್ರಮ ಸಂಯೋಜಕಿ ಡಾ. ತಹಮೀನಾ ಕೋಲಾರ ಉಪಸ್ಥಿತರಿದ್ದರು.</p>.<p>ದೇಶದ ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಆನ್ಲೈನ್ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<p>****</p>.<p>ಮುಂಬರುವ ಯುವ ಪೀಳಿಗೆ ಕೃತಕ ಬುದ್ಧಿಮತ್ತೆಯ ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು<br /><strong>-ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>