ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದ ಐಸಿಎಸ್ಎಸ್ಆರ್ ಸಿನಿಯರ್ ಫೆಲೋ ಪ್ರೊ.ಎ.ಎಸ್.ಬಾಲಸುಬ್ರಮಣ್ಯ ಮಾತನಾಡಿ, ‘ತಂತ್ರಜ್ಞಾನದ ಆವಿಷ್ಕಾರದಿಂದಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾದವು. ಪ್ರಸ್ತುತ ಕೃತಕ ಬುದ್ಧಿಮತ್ತೆಯು ಪತ್ರಕರ್ತರ ಕೆಲಸವನ್ನು ಸುಲಭಗೊಳಿಸಿದ್ದು, ಜೊತೆಗೆ ಅವರ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸುವಲ್ಲಿ ಸಹಾಯಕಾರಿಯಾಗಿದೆ’ ಎಂದರು.