<p><strong>ವಿಜಯಪುರ: ಕ</strong>ನ್ನಡ ನಾಡು ನುಡಿ ರಕ್ಷಣೆಗಾಗಿ ಪ್ರತಿಯೊಬ್ಬರು ಪಣ ತೊಡಗಬೇಕು. ಕನ್ನಡವೇ ನಮ್ಮ ಉಸಿರು, ಕನ್ನಡವೇ ನಮ್ಮ ಪ್ರಾಣ ಎಂದು ತಿಳಿದು ಕನ್ನಡ ಪ್ರೀತಿಸಬೇಕು ಎಂದು ನಾಗಠಾಣ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದರು.</p>.<p>ನಗರದ ಕೆಎಚ್ಬಿ ಕಾೊನಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 66 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು.</p>.<p>ಇಡೀ ದೇಶದ ಭಾಷೆಗಳಲ್ಲಿ ಕನ್ನಡ ಅತ್ಯಂತ ಶ್ರೇಷ್ಠ ಭಾಷೆಯಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ನಮ್ಮ ಕನ್ನಡ ಭಾಷೆ ಸುಲಿದ ಬಾಳೆ ಹಣ್ಣಿನಷ್ಟೇ ಸುಲಭವಾಗಿದೆ. ಕನ್ನಡಕ್ಕಾಗಿ ನಾವೆಲ್ಲ ಕೈ ಎತ್ತೋಣ ಕನ್ನಡ ತಾಯಿಯ ಸೇವೆ ಮಾಡಲು ಮುಂದಾಗೋಣ ಎಂದರು.</p>.<p>ಕೇವಲ ಒಂದು ದಿನ ಮಾತ್ರ ಕನ್ನಡದ ಬಗ್ಗೆ ಕಾಳಜಿ ತೋರಿಸದೆ ಪ್ರತಿದಿನ ಕನ್ನಡತನ ಮೆರೆಯಲು ಮುಂದಾಗೋಣ, ಕನ್ನಡ ರಕ್ಷಿಸುವುದರ ಜೊತೆಗೆ ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎನ್ನೊಣ ಎಂದರು.</p>.<p>ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಕನ್ನಡ ಸಂಘಟನೆಗಳ ಪ್ರಮುಖರಾದ ಬಿ.ಬಿ.ಲಮಾಣಿ, ಪಾಂಡು ರಾಠೋಡ, ಸಂದೀಪ, ವಿನೋದ, ಅಭಿನವ ದೇವಾನಂದ ಚವ್ಹಾಣ, ರವಿ ಚವ್ಹಾಣ, ಕರಿಬಸಪ್ಪ ಬೂದಿಹಾಳ, ಚಿದಾನಂದ ಗುಡ್ಡದ, ಎಸ್.ಪಿ.ಲೋಗಾವಿ, ಕಿರಣಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು, ಸಾರ್ವಜನಿಕರುಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: ಕ</strong>ನ್ನಡ ನಾಡು ನುಡಿ ರಕ್ಷಣೆಗಾಗಿ ಪ್ರತಿಯೊಬ್ಬರು ಪಣ ತೊಡಗಬೇಕು. ಕನ್ನಡವೇ ನಮ್ಮ ಉಸಿರು, ಕನ್ನಡವೇ ನಮ್ಮ ಪ್ರಾಣ ಎಂದು ತಿಳಿದು ಕನ್ನಡ ಪ್ರೀತಿಸಬೇಕು ಎಂದು ನಾಗಠಾಣ ಶಾಸಕ ಡಾ. ದೇವಾನಂದ ಚವ್ಹಾಣ ಹೇಳಿದರು.</p>.<p>ನಗರದ ಕೆಎಚ್ಬಿ ಕಾೊನಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 66 ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರುಮಾತನಾಡಿದರು.</p>.<p>ಇಡೀ ದೇಶದ ಭಾಷೆಗಳಲ್ಲಿ ಕನ್ನಡ ಅತ್ಯಂತ ಶ್ರೇಷ್ಠ ಭಾಷೆಯಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ ನಮ್ಮ ಕನ್ನಡ ಭಾಷೆ ಸುಲಿದ ಬಾಳೆ ಹಣ್ಣಿನಷ್ಟೇ ಸುಲಭವಾಗಿದೆ. ಕನ್ನಡಕ್ಕಾಗಿ ನಾವೆಲ್ಲ ಕೈ ಎತ್ತೋಣ ಕನ್ನಡ ತಾಯಿಯ ಸೇವೆ ಮಾಡಲು ಮುಂದಾಗೋಣ ಎಂದರು.</p>.<p>ಕೇವಲ ಒಂದು ದಿನ ಮಾತ್ರ ಕನ್ನಡದ ಬಗ್ಗೆ ಕಾಳಜಿ ತೋರಿಸದೆ ಪ್ರತಿದಿನ ಕನ್ನಡತನ ಮೆರೆಯಲು ಮುಂದಾಗೋಣ, ಕನ್ನಡ ರಕ್ಷಿಸುವುದರ ಜೊತೆಗೆ ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎನ್ನೊಣ ಎಂದರು.</p>.<p>ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಕನ್ನಡ ಸಂಘಟನೆಗಳ ಪ್ರಮುಖರಾದ ಬಿ.ಬಿ.ಲಮಾಣಿ, ಪಾಂಡು ರಾಠೋಡ, ಸಂದೀಪ, ವಿನೋದ, ಅಭಿನವ ದೇವಾನಂದ ಚವ್ಹಾಣ, ರವಿ ಚವ್ಹಾಣ, ಕರಿಬಸಪ್ಪ ಬೂದಿಹಾಳ, ಚಿದಾನಂದ ಗುಡ್ಡದ, ಎಸ್.ಪಿ.ಲೋಗಾವಿ, ಕಿರಣಕುಮಾರ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು, ಸಾರ್ವಜನಿಕರುಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>