<p><strong>ಸಿಂದಗಿ:</strong> ವಿಜಯಪುರ ನಗರದ ವಕೀಲ ಮೈಬೂಬ ಇಂಡೀಕರ ಇವರ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದ ವಕೀಲರು ಬುಧವಾರ ಕೋರ್ಟ್ ಕಲಾಪದಿಂದ ದೂರ ಉಳಿದರು.</p>.<p>ವಕೀಲರ ಸಂಘದ ಕಾರ್ಯಾಲಯದಲ್ಲಿ ನಡೆದ ಖಂಡನಾ ಸಭೆಯಲ್ಲಿ ಸಂಘದ ಅಧ್ಯಕ್ಷ ಎಸ್.ಬಿ. ಪಾಟೀಲ ಮಾತನಾಡಿ, ‘ವಕೀಲರ ಮೇಲೆ ನಡೆದ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲರ ಸಂಘದ ಸದಸ್ಯರು ತಹಶೀಲ್ದಾರ್ ಗ್ರೇಡ್-2 ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ಸೂರ್ಯವಂಶಿ, ಹಿರಿಯ ವಕೀಲರಾದ ಆರ್.ಐ.ಮೊಗಲಾಯಿ, ಆರ್.ಡಿ.ಕುಲಕರ್ಣಿ, ಆರ್.ಎಂ.ಚೌರ, ಎಸ್.ಬಿ.ಖಾನಾಪೂರ, ಐ.ಎಸ್.ಹಿರೇಮಠ, ಬಿ.ಸಿ.ಪಾಟೀಲ, ಎಸ್.ಕೆ.ಪೂಜಾರಿ, ಎ.ಆರ್.ಕನ್ನೂರ, ವಕೀಲರ ಸಂಘದ ಮಹಿಳಾ ಪ್ರತಿನಿಧಿ ಎಸ್.ಎಂ.ಕಾಚೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ವಿಜಯಪುರ ನಗರದ ವಕೀಲ ಮೈಬೂಬ ಇಂಡೀಕರ ಇವರ ಮೇಲೆ ದುಷ್ಕರ್ಮಿಗಳು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದ ವಕೀಲರು ಬುಧವಾರ ಕೋರ್ಟ್ ಕಲಾಪದಿಂದ ದೂರ ಉಳಿದರು.</p>.<p>ವಕೀಲರ ಸಂಘದ ಕಾರ್ಯಾಲಯದಲ್ಲಿ ನಡೆದ ಖಂಡನಾ ಸಭೆಯಲ್ಲಿ ಸಂಘದ ಅಧ್ಯಕ್ಷ ಎಸ್.ಬಿ. ಪಾಟೀಲ ಮಾತನಾಡಿ, ‘ವಕೀಲರ ಮೇಲೆ ನಡೆದ ಹಲ್ಲೆಯನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ವಕೀಲರ ಸಂಘದ ಸದಸ್ಯರು ತಹಶೀಲ್ದಾರ್ ಗ್ರೇಡ್-2 ಇಂದಿರಾಬಾಯಿ ಬಳಗಾನೂರ ಅವರಿಗೆ ಮನವಿ ಸಲ್ಲಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ಸೂರ್ಯವಂಶಿ, ಹಿರಿಯ ವಕೀಲರಾದ ಆರ್.ಐ.ಮೊಗಲಾಯಿ, ಆರ್.ಡಿ.ಕುಲಕರ್ಣಿ, ಆರ್.ಎಂ.ಚೌರ, ಎಸ್.ಬಿ.ಖಾನಾಪೂರ, ಐ.ಎಸ್.ಹಿರೇಮಠ, ಬಿ.ಸಿ.ಪಾಟೀಲ, ಎಸ್.ಕೆ.ಪೂಜಾರಿ, ಎ.ಆರ್.ಕನ್ನೂರ, ವಕೀಲರ ಸಂಘದ ಮಹಿಳಾ ಪ್ರತಿನಿಧಿ ಎಸ್.ಎಂ.ಕಾಚೂರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>