ಒಂದೇ ವೇದಿಕೆಯಲ್ಲಿ ಹಾಲಿ–ಮಾಜಿ ಶಾಸಕರ ಸಮ್ಮಿಲನ
ವಿಧಾನಸಭಾ ಚುನಾವಣೆಯ ಬಳಿಕ ಹಾಲಿ ಮತ್ತು ಮಾಜಿ ಶಾಸಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಬುಧವಾರ ನಡೆದ ಜೋಡೆತ್ತಿನ ಕೃಷಿ ಪುನಶ್ಚೇತನ ಸಂಕಲ್ಪ ಸಮ್ಮೇಳನದಲ್ಲಿ ಕಾಣಿಸಿಕೊಂಡರು. ಕಾರ್ಯಕ್ರಮ ಉದ್ಘಾಟನೆಯನ್ನು ಮಾಜಿ ಶಾಸಕ ನಡಹಳ್ಳಿಯವರು ಮಾಡಿದರೆ ಶಾಸಕರು ನಾಡಗೌಡರು ಮೊದಲಿಗರಾಗಿ ಮಾತನಾಡಿ ಮಾಜಿ ಶಾಸಕರ ಹೆಸರನ್ನು ಕೂಡ ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ವೇದಿಕೆಯಿಂದ ನಿರ್ಗಮಿಸಿದರು. ಬಳಿಕ ನಡಹಳ್ಳಿಯವರು ಶಾಸಕರ ಹೆಸರನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು. ಚುನಾವಣೆ ಬಳಿಕ ಒಂದೇ ವೇದಿಕೆಯಲ್ಲಿ ಉಭಯ ನಾಯಕರು ಕಾಣಿಸಿಕೊಂಡಿದ್ದು ಹಲವು ಚರ್ಚೆಗಳಿಗೆ ನಾಂದಿ ಹಾಡಿದೆ.