<p><strong>ವಿಜಯಪುರ</strong>: ತಾಲ್ಲೂಕಿನ ಬುರಣಾಪುರ ಗ್ರಾಮದ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಉಪ ಮುಖ್ಯಮಂತ್ರಿಗೋವಿಂದ ಕಾರಜೋಳಶುಕ್ರವಾರ ವೀಕ್ಷಣೆಮಾಡಿದರು.</p>.<p>ವಿಮಾನ ನಿಲ್ದಾಣದ ಎರಡನೇ ಹಂತದ ಕಾಮಗಾರಿ ಟೆಂಡರ್ ಕರೆಯಲು ನಿರ್ಣಯ ಮಾಡಲಾಗಿದೆ. ರೂ.125 ಕೋಟಿ ವೆಚ್ಚದಲ್ಲಿ ಟರ್ಮಿನಲ್ ಬಿಲ್ಡಿಂಗ್ ಸೇರಿದಂತೆ ಹಲವು ಕಾಮಗಾರಿ ಎರಡನೇ ಹಂತದಲ್ಲಿ ನಡೆಯುತ್ತವೆ ಎಂದು ಕಾರಜೋಳ ಹೇಳಿದರು.</p>.<p>ಎರಡನೇ ಹಂತದ ಕಾಮಗಾರಿಗೆ ಈ ವಾರದಲ್ಲಿ ಟೆಂಡರ್ ಕರೆಯಲಾಗುವುದು. ಈಗಾಗಲೇ ಮೊದಲ ಹಂತದ ರೂ.100 ಕೋಟಿ ವೆಚ್ಚದ ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಗೆದಾರರು ನಿಗದಿತ ಅವಧಿಗೂ ಮುಂಚೆಯೇ ಕಾಮಗಾರಿ ಪೂರ್ಣ ಮಾಡಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.</p>.<p>ಇನ್ನೂಳಿದ ರೂ.125 ಕೋಟಿ ವೆಚ್ಚದ ಕಾಮಗಾರಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.</p>.<p>ಕೊರೊನಾ ಹೆಚ್ಚುತ್ತಿರೋ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೆನ್ನುವ ತಜ್ಞರಸಲಹೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ತಜ್ಞರೊಂದಿಗೆ ಚರ್ಚಿಸಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ ಮುಖ್ಯಮಂತ್ರಿ ನಿರ್ಣಯ ಮಾಡುತ್ತಾರೆ. ಈ ಕುರಿತು ಈಗಲೇ ಹೇಳಲಾಗದುಎಂದರು.</p>.<p>ಎಸ್.ಎಫ್. ಪಾಟೀಲ, ಬಿ.ವೈ.ಪವಾರ, ಕೃಷ್ಣಮೂರ್ತಿ ಜಂಗಮಶೆಟ್ಟಿ, ಪಿ.ಬಿ.ಆಲೂರ, ರಾಜು ಮುಜುಂದಾರಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ತಾಲ್ಲೂಕಿನ ಬುರಣಾಪುರ ಗ್ರಾಮದ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಉಪ ಮುಖ್ಯಮಂತ್ರಿಗೋವಿಂದ ಕಾರಜೋಳಶುಕ್ರವಾರ ವೀಕ್ಷಣೆಮಾಡಿದರು.</p>.<p>ವಿಮಾನ ನಿಲ್ದಾಣದ ಎರಡನೇ ಹಂತದ ಕಾಮಗಾರಿ ಟೆಂಡರ್ ಕರೆಯಲು ನಿರ್ಣಯ ಮಾಡಲಾಗಿದೆ. ರೂ.125 ಕೋಟಿ ವೆಚ್ಚದಲ್ಲಿ ಟರ್ಮಿನಲ್ ಬಿಲ್ಡಿಂಗ್ ಸೇರಿದಂತೆ ಹಲವು ಕಾಮಗಾರಿ ಎರಡನೇ ಹಂತದಲ್ಲಿ ನಡೆಯುತ್ತವೆ ಎಂದು ಕಾರಜೋಳ ಹೇಳಿದರು.</p>.<p>ಎರಡನೇ ಹಂತದ ಕಾಮಗಾರಿಗೆ ಈ ವಾರದಲ್ಲಿ ಟೆಂಡರ್ ಕರೆಯಲಾಗುವುದು. ಈಗಾಗಲೇ ಮೊದಲ ಹಂತದ ರೂ.100 ಕೋಟಿ ವೆಚ್ಚದ ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಗೆದಾರರು ನಿಗದಿತ ಅವಧಿಗೂ ಮುಂಚೆಯೇ ಕಾಮಗಾರಿ ಪೂರ್ಣ ಮಾಡಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.</p>.<p>ಇನ್ನೂಳಿದ ರೂ.125 ಕೋಟಿ ವೆಚ್ಚದ ಕಾಮಗಾರಿ ಟೆಂಡರ್ ಕರೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.</p>.<p>ಕೊರೊನಾ ಹೆಚ್ಚುತ್ತಿರೋ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಬೇಕೆನ್ನುವ ತಜ್ಞರಸಲಹೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ತಜ್ಞರೊಂದಿಗೆ ಚರ್ಚಿಸಿ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ ಮುಖ್ಯಮಂತ್ರಿ ನಿರ್ಣಯ ಮಾಡುತ್ತಾರೆ. ಈ ಕುರಿತು ಈಗಲೇ ಹೇಳಲಾಗದುಎಂದರು.</p>.<p>ಎಸ್.ಎಫ್. ಪಾಟೀಲ, ಬಿ.ವೈ.ಪವಾರ, ಕೃಷ್ಣಮೂರ್ತಿ ಜಂಗಮಶೆಟ್ಟಿ, ಪಿ.ಬಿ.ಆಲೂರ, ರಾಜು ಮುಜುಂದಾರಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>