ಕಾಲುವೆಗೆ ನೀರು ಹರಿಸಬೇಕೆಂಬ ರೈತರ ಬೇಡಿಕೆ ಹೆಚ್ಚಿದ್ದರಿಂದ ಶನಿವಾರ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಕೃಷ್ಣಾ ಅಚ್ಚುಕಟ್ಟ ಪ್ರದೇಶದ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧಿಕಾರಿಗಳು, ಕೆಬಿಜೆಎನ್ಎಲ್ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಿ ನೀರು ಹರಿಸಲು ಆದೇಶ ನೀಡಿದರು.