ಕೃಷ್ಣಾ ನದಿ ತಳಪಾತ್ರದಲ್ಲಿ ಬೆಳೆಯ ಜಲಾವೃತದ ಆತಂಕ ಎದುರಾಗಿದೆ. ಮಂಗಳವಾರ ತಡರಾತ್ರಿಯಿಂದಲೇ 3.5 ಲಕ್ಷ ಕ್ಯುಸೆಕ್ ಇದ್ದ ಹೊರಹರಿವು 3.80 ಲಕ್ಷ ಕ್ಯುಸೆಕ್ಗೆ ಹೆಚ್ಚಿಸಲಾಗಿತ್ತು. ಇದರಿಂದ ಅರಳದಿನ್ನಿ, ಯಲಗೂರ, ಯಲ್ಲಮ್ಮನ ಬೂದಿಹಾಳ, ಮಸೂತಿ, ಕಾಶೀನಕುಂಟಿ ಗ್ರಾಮದ ನೂರಾರು ಎಕರೆಯಲ್ಲಿ ಬೆಳೆದ ಬೆಳೆ ಸಂಪೂರ್ಣ ಜಲಾವೃತಗೊಂಡಿದೆ. ಬೆಳೆಹಾನಿ ಪ್ರಮಾಣ ಗುರುವಾರ ಇನ್ನಷ್ಟು ಹೆಚ್ಚಾಗಲಿದೆ.