ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ಪಾತ್ರದಗುಂಟ ಸುಮಾರು ಆರು ತಿಂಗಳ ಕಾಲ ಅಧ್ಯಯನ ನಡೆಸಿ ತಾಂತ್ರಿಕ ವರದಿ ತಯಾರಿಸಿರುವ ಸಮಿತಿ, ಕೊಲ್ಹಾಪುರ ಹಾಗೂ ಸಾಂಗ್ಲಿಯಲ್ಲಿ ಉಂಟಾದ ನೆರೆ ಹಾಗೂ ನೆರೆಯಿಂದಾದ ಹಾನಿಗೆ ನದಿಪಾತ್ರದಲ್ಲಿನ ಅತಿಕ್ರಮಣ, ಕಾನೂನು ಬಾಹಿರ ಕಟ್ಟಡಗಳ ನಿರ್ಮಾಣಗಳೇ ಮುಖ್ಯ ಕಾರಣ ಎಂದು ಅಭಿಪ್ರಾಯಪಟ್ಟಿದೆ.