<p><strong>ವಿಜಯಪುರ</strong>: ರೈತ ವಿರೋಧಿ ಕಾಯ್ದೆಗಳ ವಿರುದ್ಧ ಅ.14ರಂದು ನಡೆಯಲಿರುವ ಅಖಿಲ ಭಾರತ ಪ್ರತಿರೋಧ ದಿನವನ್ನು ಯಶಸ್ವಿಗೊಳಿಸುವಂತೆ ಜಿಲ್ಲೆಯ ಎಲ್ಲ ರೈತರಿಗೆ ಹಾಗೂ ಕೃಷಿಕಾರ್ಮಿಕರಿಗೆ ರೈತ-ಕೃಷಿಕಾರ್ಮಿಕರ ಸಂಘಟನೆ(ಆರ್ಕೆಎಸ್) ರಾಜ್ಯ ಉಪಾಧ್ಯಕ್ಷ ಬಿ.ಭಗವಾನ್ ರೆಡ್ಡಿ ಮನವಿ ಮಾಡಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ರೈತರ ವಿರುದ್ಧವಾಗಿ ಮೂರು ಕರಾಳ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.</p>.<p>ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯು ರೈತ ವಿರೋಧಿಯಾಗಿದೆ. ವ್ಯಾಪಾರ ಕಂಪನಿಗಳು ಈ ಅಗತ್ಯ ವಸ್ತುಗಳನ್ನು ರೈತರಿಂದ ಅಗ್ಗದ ಬೆಲೆಗೆ ಖರೀದಿಸಿ, ಗೋದಾಮಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ಮಾರುಕಟ್ಟೆಯಲ್ಲಿ ಕೃತಕ ಅಭಾವವನ್ನು ಸೃಷ್ಠಿಸುವ ಮೂಲಕ ಅತಿ ದುಬಾರಿ ಬೆಲೆಗೆ ಮಾರಿ ಹೆಚ್ಚು ಲಾಭವನ್ನು ಗಳಿಸುತ್ತಾರೆ. ಇದರಿಂದಾಗಿ ರೈತರೊಂದಿಗೆ ಗ್ರಾಹಕರು ಗರಿಷ್ಠ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.</p>.<p>ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯು ಸರ್ಕಾರಿ ಕೃಷಿ ಮಾರುಕಟ್ಟೆ ಸಮಿತಿಗಳನ್ನು(ಎಪಿಎಂಸಿ) ನಾಶ ಮಾಡುತ್ತದೆ. ಉದ್ಯಮಿಗಳಿಗೆ ಖಾಸಗಿ ಕೃಷಿ ಮಾರುಕಟ್ಟೆ ಸಮಿತಿಗಳನ್ನು ತೆರೆಯಲು ಅವಕಾಶ ನೀಡುತ್ತದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯವು ಇಲ್ಲದಂತಾಗುತ್ತದೆ ಎಂದು ಹೇಳಿದರು.</p>.<p>ಗುತ್ತಿಗೆ ಕೃಷಿಯ ಹೆಸರಿನಲ್ಲಿ ರೈತರಿಂದ ಅವರ ಜೀವನೋಪಾಯದ ಏಕೈಕ ಸಾಧನವಾಗಿರುವ ಕೃಷಿ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಸಂಚಾಲಕ ಬಾಳು ಜೇವೂರ, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ರೈತ ವಿರೋಧಿ ಎಪಿಎಂಸಿ ಕಾಯ್ದೆ ಅನುರ್ಜಿತಗೊಳಿಸಲು ಕಾನೂನು ಮಾಡುತ್ತಿದೆ. ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುತ್ತಿದೆ, ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿದೆ ಮತ್ತು ಬೀಜ ಕಾಯ್ದೆಯನ್ನು ತರುತ್ತಿದೆ ಎಂದು ಹೇಳಿದರು.</p>.<p>ಈ ಎಲ್ಲ ಕಾಯ್ದೆಗಳ ಜಾರಿಯಿಂದ ರೈತರು ಸಂಪೂರ್ಣವಾಗಿ ದಿವಾಳಿಯಾಗುತ್ತಾರೆ. ತಮ್ಮ ಮನೆ, ಮಠ, ಸಾಗುವಳಿ ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಾರೆ. ಹೊಲ ಗದ್ದೆಗಳನ್ನು ಕಳೆದುಕೊಂಡು ತಮ್ಮ ಹೊಲಗದ್ದೆಗಳಲ್ಲಿ ತಾವೇ ಕೂಲಿಯವರಾಗಿ ಬದುಕಬೇಕಾಗುತ್ತದೆ ಎಂದು ಹೇಳಿದರು.</p>.<p>ರೈತ ವಿರೋಧಿ, ಜನದ್ರೋಹಿ ಕಾನೂನುಗಳನ್ನು ಕೈಬಿಡುವಂತೆ ಆಗ್ರಹಿಸಿ ಎಐಕೆಎಸ್ಸಿಸಿಯು ನವೆಂಬರ್ 26ರಂದು ದೆಹಲಿಯ ಜಂತರ್–ಮಂತರ್ ಮುತ್ತಿಗೆ ಹಾಕಲು ದೇಶದ ಎಲ್ಲ ರೈತರಿಗೆ, ಕೃಷಿಕಾರ್ಮಿಕರಿಗೆ ಕರೆ ನೀಡಿದೆ. ಜಿಲ್ಲೆಯ ರೈತರು, ಕೃಷಿಕಾರ್ಮಿಕರು ದೆಹಲಿಗೆ ಹೊರಡಲು ಸಜ್ಜಾಗಬೇಕು ಎಂದು ಹೇಳಿದರು.</p>.<p>ಸದಸ್ಯರಾದ ತಿಪರಾಯ ಹತ್ತರಕಿ, ಪ್ರಕಾಶ್ ಕಿಲಾರೆ, ವಿಶ್ವನಾಥ ನರಳೆ, ಮಾದಪ್ಪ ಕಠಾರೆ, ಬೀರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ರೈತ ವಿರೋಧಿ ಕಾಯ್ದೆಗಳ ವಿರುದ್ಧ ಅ.14ರಂದು ನಡೆಯಲಿರುವ ಅಖಿಲ ಭಾರತ ಪ್ರತಿರೋಧ ದಿನವನ್ನು ಯಶಸ್ವಿಗೊಳಿಸುವಂತೆ ಜಿಲ್ಲೆಯ ಎಲ್ಲ ರೈತರಿಗೆ ಹಾಗೂ ಕೃಷಿಕಾರ್ಮಿಕರಿಗೆ ರೈತ-ಕೃಷಿಕಾರ್ಮಿಕರ ಸಂಘಟನೆ(ಆರ್ಕೆಎಸ್) ರಾಜ್ಯ ಉಪಾಧ್ಯಕ್ಷ ಬಿ.ಭಗವಾನ್ ರೆಡ್ಡಿ ಮನವಿ ಮಾಡಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ರೈತರ ವಿರುದ್ಧವಾಗಿ ಮೂರು ಕರಾಳ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.</p>.<p>ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯು ರೈತ ವಿರೋಧಿಯಾಗಿದೆ. ವ್ಯಾಪಾರ ಕಂಪನಿಗಳು ಈ ಅಗತ್ಯ ವಸ್ತುಗಳನ್ನು ರೈತರಿಂದ ಅಗ್ಗದ ಬೆಲೆಗೆ ಖರೀದಿಸಿ, ಗೋದಾಮಿನಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ಮಾರುಕಟ್ಟೆಯಲ್ಲಿ ಕೃತಕ ಅಭಾವವನ್ನು ಸೃಷ್ಠಿಸುವ ಮೂಲಕ ಅತಿ ದುಬಾರಿ ಬೆಲೆಗೆ ಮಾರಿ ಹೆಚ್ಚು ಲಾಭವನ್ನು ಗಳಿಸುತ್ತಾರೆ. ಇದರಿಂದಾಗಿ ರೈತರೊಂದಿಗೆ ಗ್ರಾಹಕರು ಗರಿಷ್ಠ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.</p>.<p>ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯು ಸರ್ಕಾರಿ ಕೃಷಿ ಮಾರುಕಟ್ಟೆ ಸಮಿತಿಗಳನ್ನು(ಎಪಿಎಂಸಿ) ನಾಶ ಮಾಡುತ್ತದೆ. ಉದ್ಯಮಿಗಳಿಗೆ ಖಾಸಗಿ ಕೃಷಿ ಮಾರುಕಟ್ಟೆ ಸಮಿತಿಗಳನ್ನು ತೆರೆಯಲು ಅವಕಾಶ ನೀಡುತ್ತದೆ. ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಸೌಲಭ್ಯವು ಇಲ್ಲದಂತಾಗುತ್ತದೆ ಎಂದು ಹೇಳಿದರು.</p>.<p>ಗುತ್ತಿಗೆ ಕೃಷಿಯ ಹೆಸರಿನಲ್ಲಿ ರೈತರಿಂದ ಅವರ ಜೀವನೋಪಾಯದ ಏಕೈಕ ಸಾಧನವಾಗಿರುವ ಕೃಷಿ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಸಂಚಾಲಕ ಬಾಳು ಜೇವೂರ, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ರೈತ ವಿರೋಧಿ ಎಪಿಎಂಸಿ ಕಾಯ್ದೆ ಅನುರ್ಜಿತಗೊಳಿಸಲು ಕಾನೂನು ಮಾಡುತ್ತಿದೆ. ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುತ್ತಿದೆ, ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿದೆ ಮತ್ತು ಬೀಜ ಕಾಯ್ದೆಯನ್ನು ತರುತ್ತಿದೆ ಎಂದು ಹೇಳಿದರು.</p>.<p>ಈ ಎಲ್ಲ ಕಾಯ್ದೆಗಳ ಜಾರಿಯಿಂದ ರೈತರು ಸಂಪೂರ್ಣವಾಗಿ ದಿವಾಳಿಯಾಗುತ್ತಾರೆ. ತಮ್ಮ ಮನೆ, ಮಠ, ಸಾಗುವಳಿ ಭೂಮಿಯನ್ನು ಕಳೆದುಕೊಂಡು ನಿರ್ಗತಿಕರಾಗುತ್ತಾರೆ. ಹೊಲ ಗದ್ದೆಗಳನ್ನು ಕಳೆದುಕೊಂಡು ತಮ್ಮ ಹೊಲಗದ್ದೆಗಳಲ್ಲಿ ತಾವೇ ಕೂಲಿಯವರಾಗಿ ಬದುಕಬೇಕಾಗುತ್ತದೆ ಎಂದು ಹೇಳಿದರು.</p>.<p>ರೈತ ವಿರೋಧಿ, ಜನದ್ರೋಹಿ ಕಾನೂನುಗಳನ್ನು ಕೈಬಿಡುವಂತೆ ಆಗ್ರಹಿಸಿ ಎಐಕೆಎಸ್ಸಿಸಿಯು ನವೆಂಬರ್ 26ರಂದು ದೆಹಲಿಯ ಜಂತರ್–ಮಂತರ್ ಮುತ್ತಿಗೆ ಹಾಕಲು ದೇಶದ ಎಲ್ಲ ರೈತರಿಗೆ, ಕೃಷಿಕಾರ್ಮಿಕರಿಗೆ ಕರೆ ನೀಡಿದೆ. ಜಿಲ್ಲೆಯ ರೈತರು, ಕೃಷಿಕಾರ್ಮಿಕರು ದೆಹಲಿಗೆ ಹೊರಡಲು ಸಜ್ಜಾಗಬೇಕು ಎಂದು ಹೇಳಿದರು.</p>.<p>ಸದಸ್ಯರಾದ ತಿಪರಾಯ ಹತ್ತರಕಿ, ಪ್ರಕಾಶ್ ಕಿಲಾರೆ, ವಿಶ್ವನಾಥ ನರಳೆ, ಮಾದಪ್ಪ ಕಠಾರೆ, ಬೀರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>