<p><strong>ಆಲಮಟ್ಟಿ(ವಿಜಯಪುರ):</strong> ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರಿ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆಯಿದ್ದು, ಆಲಮಟ್ಟಿ ಜಲಾಶಯದ ಹೊರಹರಿವನ್ನು ಭಾನುವಾರ ಹೆಚ್ಚಿಸಲಾಗಿದೆ.</p>.<p>ಬೆಳಿಗ್ಗೆ 1.50 ಲಕ್ಷ ಕ್ಯುಸೆಕ್ ನೀರನ್ನು ಬಿಡಲಾಗುತ್ತಿತ್ತು, ಸಂಜೆಯ ವೇಳೆಗೆ ಅದು 2.20 ಲಕ್ಷ ಕ್ಯುಸೆಕ್ ಗೆ ಏರಿಸಲಾಗಿದೆ. ಮುಂದಿನ ಎರಡು ಮೂರು ದಿನದಲ್ಲಿ ಕೃಷ್ಣಾ ನದಿಗೆ ಅಂದಾಜು 25 ಟಿಎಂಸಿ ಅಡಿಯಷ್ಟು ನೀರು ಹರಿದು ಬರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.</p>.<p>‘ಭಾನುವಾರ ಬೆಳಿಗ್ಗೆ 519.20 ಮೀ. ಇದ್ದ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮಧ್ಯಾಹ್ನದ ವೇಳೆಗೆ 518.50 ಮೀ ಗೆ ಇಳಿಸಲಾಗುವುದು' ಎಂದು ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಆರ್.ಪಿ. ಕುಲಕರ್ಣಿ ತಿಳಿಸಿದರು.</p>.<p>ಜಲಾಶಯದ ಒಳಹರಿವು ಭಾನುವಾರ ಸಂಜೆಗೆ 1.35 ಲಕ್ಷ ಕ್ಯುಸೆಕ್ ತಲುಪಿದೆ. ಜಲಾಶಯದ ಮುಂಭಾಗದ ಕೂಡಲಸಂಗಮದ ಬಳಿಯೂ ಮಲಪ್ರಭಾ ನದಿಯ ಹರಿವು ಆರಂಭಗೊಂಡಿದೆ. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗ, ನಾರಾಯಣಪುರ ಜಲಾಶಯದ ಹಿನ್ನೀರಿನ ಕೃಷ್ಣಾ ತೀರದ ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗುವ ಸಾಧ್ಯತೆ ಇದೆ.</p>.<p>ಮುಂದಿನ ಮೂರು ದಿನಗಳ ಕಾಲ ಜಲಾಶಯದ ಮುಂಭಾಗದ ಕೃಷ್ಣಾ ತೀರದಲ್ಲಿ ನೆರೆಯ ಆತಂಕ ಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮಟ್ಟಿ(ವಿಜಯಪುರ):</strong> ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಭಾರಿ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆಯಿದ್ದು, ಆಲಮಟ್ಟಿ ಜಲಾಶಯದ ಹೊರಹರಿವನ್ನು ಭಾನುವಾರ ಹೆಚ್ಚಿಸಲಾಗಿದೆ.</p>.<p>ಬೆಳಿಗ್ಗೆ 1.50 ಲಕ್ಷ ಕ್ಯುಸೆಕ್ ನೀರನ್ನು ಬಿಡಲಾಗುತ್ತಿತ್ತು, ಸಂಜೆಯ ವೇಳೆಗೆ ಅದು 2.20 ಲಕ್ಷ ಕ್ಯುಸೆಕ್ ಗೆ ಏರಿಸಲಾಗಿದೆ. ಮುಂದಿನ ಎರಡು ಮೂರು ದಿನದಲ್ಲಿ ಕೃಷ್ಣಾ ನದಿಗೆ ಅಂದಾಜು 25 ಟಿಎಂಸಿ ಅಡಿಯಷ್ಟು ನೀರು ಹರಿದು ಬರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.</p>.<p>‘ಭಾನುವಾರ ಬೆಳಿಗ್ಗೆ 519.20 ಮೀ. ಇದ್ದ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ಮುಂಜಾಗ್ರತಾ ಕ್ರಮವಾಗಿ ಸೋಮವಾರ ಮಧ್ಯಾಹ್ನದ ವೇಳೆಗೆ 518.50 ಮೀ ಗೆ ಇಳಿಸಲಾಗುವುದು' ಎಂದು ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಆರ್.ಪಿ. ಕುಲಕರ್ಣಿ ತಿಳಿಸಿದರು.</p>.<p>ಜಲಾಶಯದ ಒಳಹರಿವು ಭಾನುವಾರ ಸಂಜೆಗೆ 1.35 ಲಕ್ಷ ಕ್ಯುಸೆಕ್ ತಲುಪಿದೆ. ಜಲಾಶಯದ ಮುಂಭಾಗದ ಕೂಡಲಸಂಗಮದ ಬಳಿಯೂ ಮಲಪ್ರಭಾ ನದಿಯ ಹರಿವು ಆರಂಭಗೊಂಡಿದೆ. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗ, ನಾರಾಯಣಪುರ ಜಲಾಶಯದ ಹಿನ್ನೀರಿನ ಕೃಷ್ಣಾ ತೀರದ ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗುವ ಸಾಧ್ಯತೆ ಇದೆ.</p>.<p>ಮುಂದಿನ ಮೂರು ದಿನಗಳ ಕಾಲ ಜಲಾಶಯದ ಮುಂಭಾಗದ ಕೃಷ್ಣಾ ತೀರದಲ್ಲಿ ನೆರೆಯ ಆತಂಕ ಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>