ಮುಂಜಾಗ್ರತೆಯ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಜಲಾಶಯದಿಂದ 2.5 ಲಕ್ಷ ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಜಲಾಶಯ ವ್ಯಾಪ್ತಿಯಲ್ಲಿ ನೆರೆಯ ಸಂಕಷ್ಟ ಎದುರಾಗಿಲ್ಲ. ಸದ್ಯ ಜಲಾಶಯದಿಂದ 2.5 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದ್ದು, ಅದನ್ನು ಹೆಚ್ಚಿಸುವುದಿಲ್ಲ ಎಂದು ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಆರ್.ಪಿ. ಕುಲಕರ್ಣಿ ತಿಳಿಸಿದರು.