<p><strong>ಆಲಮೇಲ:</strong> ‘ನೂತನ ತಾಲ್ಲೂಕು ಕೇಂದ್ರದಲ್ಲಿ ಅಭಿವೃದ್ದಿ ಪರ್ವ ಶುರುವಾಗಿದ್ದು, ಪ್ರಜಾಸೌಧ ಸೇರಿದಂತೆ ಹತ್ತಾರು ಕಾಮಗಾರಿಗಳು ಪಟ್ಟಣಕ್ಕೆ ಕಳೆ ತರಲಿವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಪಟ್ಟಣದ ಸಿಂದಗಿ ರಸ್ತೆಯ ಯುಕೆಪಿ ಆವರಣದಲ್ಲಿ ಕಂದಾಯ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಮ್ಮ ನಡೆ ಅಭಿವೃದ್ಧಿ ಕಡೆ’ ಎಂಬ ಘೋಷಣೆಯಂತೆ ಈಗಾಗಲೇ ನಾಲ್ಕು ಕೆಲಸಗಳು ಪ್ರಗತಿಯಲ್ಲಿವೆ. 3 ಎಕರೆ 3 ಗುಂಟೆಯಲ್ಲಿ ಪ್ರಜಾಸೌಧ ಕಟ್ಟಡವು ಸುಮಾರು ₹8.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 1 ಎಕರೆಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಹಾಗೂ 6 ಎಕರೆ 20 ಗುಂಟೆಯಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ತಲಾ ₹3 ಕೋಟಿ ಮಂಜೂರಾಗಿದೆ’ ಎಂದರು.</p>.<p>‘ಮತಕ್ಷೇತ್ರದಲ್ಲಿ 10 ಕಿ.ಮೀಯಷ್ಟೂ ಡಾಂಬರೀಕರಣ ಮಾಡಿಲ್ಲವೆಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದ್ದಾರೆ. ಅವರು ಎಲ್ಲೇ ಕರೆದರೂ, ಬಹಿರಂಗ ಚರ್ಚೆಗೆ ನಾನು ಸಿದ್ಧ. ಕೆಲಸ ಮಾಡಿದ್ದನ್ನು ತೋರಿಸುತ್ತೇನೆ’ ಎಂದು ತಿಳಿಸಿದರು.</p>.<p>ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ‘ಆಲಮೇಲವು ಅಭಿವೃದ್ಧಿ ಕಡೆಗೆ ದಾಪುಗಾಲು ಹಾಕುತ್ತಿರುವುದು ಸಂತೋಷದ ವಿಷಯ’ ಎಂದು ಹೇಳಿದರು.</p>.<p>ನಾಗರಿಕ ವೇದಿಕೆ ಅಧ್ಯಕ್ಷ ರಮೇಶ್ ಬಂಟನೂರು ಮಾತನಾಡಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ಅರಕೇರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ್ ಸುಂಬಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಕೊಳಾರಿ, ಎಪಿಎಂಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ಶ್ರೀಶೈಲ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ:</strong> ‘ನೂತನ ತಾಲ್ಲೂಕು ಕೇಂದ್ರದಲ್ಲಿ ಅಭಿವೃದ್ದಿ ಪರ್ವ ಶುರುವಾಗಿದ್ದು, ಪ್ರಜಾಸೌಧ ಸೇರಿದಂತೆ ಹತ್ತಾರು ಕಾಮಗಾರಿಗಳು ಪಟ್ಟಣಕ್ಕೆ ಕಳೆ ತರಲಿವೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಪಟ್ಟಣದ ಸಿಂದಗಿ ರಸ್ತೆಯ ಯುಕೆಪಿ ಆವರಣದಲ್ಲಿ ಕಂದಾಯ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಮ್ಮ ನಡೆ ಅಭಿವೃದ್ಧಿ ಕಡೆ’ ಎಂಬ ಘೋಷಣೆಯಂತೆ ಈಗಾಗಲೇ ನಾಲ್ಕು ಕೆಲಸಗಳು ಪ್ರಗತಿಯಲ್ಲಿವೆ. 3 ಎಕರೆ 3 ಗುಂಟೆಯಲ್ಲಿ ಪ್ರಜಾಸೌಧ ಕಟ್ಟಡವು ಸುಮಾರು ₹8.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 1 ಎಕರೆಯಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣ ಹಾಗೂ 6 ಎಕರೆ 20 ಗುಂಟೆಯಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಾಣಕ್ಕೆ ತಲಾ ₹3 ಕೋಟಿ ಮಂಜೂರಾಗಿದೆ’ ಎಂದರು.</p>.<p>‘ಮತಕ್ಷೇತ್ರದಲ್ಲಿ 10 ಕಿ.ಮೀಯಷ್ಟೂ ಡಾಂಬರೀಕರಣ ಮಾಡಿಲ್ಲವೆಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದ್ದಾರೆ. ಅವರು ಎಲ್ಲೇ ಕರೆದರೂ, ಬಹಿರಂಗ ಚರ್ಚೆಗೆ ನಾನು ಸಿದ್ಧ. ಕೆಲಸ ಮಾಡಿದ್ದನ್ನು ತೋರಿಸುತ್ತೇನೆ’ ಎಂದು ತಿಳಿಸಿದರು.</p>.<p>ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ‘ಆಲಮೇಲವು ಅಭಿವೃದ್ಧಿ ಕಡೆಗೆ ದಾಪುಗಾಲು ಹಾಕುತ್ತಿರುವುದು ಸಂತೋಷದ ವಿಷಯ’ ಎಂದು ಹೇಳಿದರು.</p>.<p>ನಾಗರಿಕ ವೇದಿಕೆ ಅಧ್ಯಕ್ಷ ರಮೇಶ್ ಬಂಟನೂರು ಮಾತನಾಡಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ಅರಕೇರಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ್ ಸುಂಬಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಕೊಳಾರಿ, ಎಪಿಎಂಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ಶ್ರೀಶೈಲ ಮಠಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>