<p><strong>ವಿಜಯಪುರ</strong>: ಅಂಬೇಡ್ಕರ್ ಭಾರತದ ಭಾಗ್ಯವಿಧಾತ, ವಿಶ್ವ ಜ್ಞಾನಿ, ಬಡವ, ಬಲ್ಲಿದವರ ಧ್ವನಿಯಾಗಿ ಶಕ್ತಿ ತುಂಬಿದ ಮಹಾಚೇತನ. ಸಂವಿಧಾನದ ಮೂಲಕ ಭಾರತೀಯರಿಗೆ ಸಮಾನ ನ್ಯಾಯ ಕೊಡಿಸಿದ ಹರಿಕಾರ, ಮಹಿಳೆಯರಿಗೆ ಸ್ವಾತಂತ್ರ್ಯ ಬದುಕು ಕಟ್ಟಿಕೊಟ್ಟ ಮಹಾನ್ನಾಯಕ ಎಂದುಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತದ ಕೃಷಿ, ವಿದ್ಯುತ್, ನೀರಾವರಿ ಕ್ಷೇತ್ರಗಳಲ್ಲಿ ಹಾಗೂ ಅನೇಕ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆ ನೀಡಿದ್ದು ಭಾರತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಸ್ಥಾಪನೆ ಮಾಡಿ ಈ ದೇಶಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟಿದ್ದು ಅಂಬೇಡ್ಕರ್ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಿ.ಎಲ್. ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಮೀರ ಅಹ್ಮದ ಬಕ್ಷಿ, ಡಿ.ಎಚ್. ಕಲಾಲ, ಆರತಿ ಶಹಾಪೂರ, ವಸಂತ ಹೊನಮೊಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಅಂಬೇಡ್ಕರ್ ಭಾರತದ ಭಾಗ್ಯವಿಧಾತ, ವಿಶ್ವ ಜ್ಞಾನಿ, ಬಡವ, ಬಲ್ಲಿದವರ ಧ್ವನಿಯಾಗಿ ಶಕ್ತಿ ತುಂಬಿದ ಮಹಾಚೇತನ. ಸಂವಿಧಾನದ ಮೂಲಕ ಭಾರತೀಯರಿಗೆ ಸಮಾನ ನ್ಯಾಯ ಕೊಡಿಸಿದ ಹರಿಕಾರ, ಮಹಿಳೆಯರಿಗೆ ಸ್ವಾತಂತ್ರ್ಯ ಬದುಕು ಕಟ್ಟಿಕೊಟ್ಟ ಮಹಾನ್ನಾಯಕ ಎಂದುಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಹೇಳಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಭಾರತದ ಕೃಷಿ, ವಿದ್ಯುತ್, ನೀರಾವರಿ ಕ್ಷೇತ್ರಗಳಲ್ಲಿ ಹಾಗೂ ಅನೇಕ ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆ ನೀಡಿದ್ದು ಭಾರತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಸ್ಥಾಪನೆ ಮಾಡಿ ಈ ದೇಶಕ್ಕೆ ಭದ್ರ ಬುನಾದಿ ಹಾಕಿ ಕೊಟ್ಟಿದ್ದು ಅಂಬೇಡ್ಕರ್ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ ಮುಶ್ರೀಫ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಡಿ.ಎಲ್. ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಮೀರ ಅಹ್ಮದ ಬಕ್ಷಿ, ಡಿ.ಎಚ್. ಕಲಾಲ, ಆರತಿ ಶಹಾಪೂರ, ವಸಂತ ಹೊನಮೊಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>