ಶನಿವಾರ, ಏಪ್ರಿಲ್ 1, 2023
23 °C

ವಿಜಯಪುರ ನೂತನ ಎಸ್‌ಪಿಯಾಗಿ ಆನಂದಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದ ಅನುಪಮ್‌ ಅಗರವಾಲ್‌ ಅವರನ್ನು ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕಕ್ಕೆ ಎಚ್‌.ಡಿ.ಆನಂದಕುಮಾರ್‌ ಅವರನ್ನು ನಿಯೋಜನೆ ಮಾಡಿದೆ.

2012ನೇ ಸಾಲಿನ ಐಪಿಎಸ್‌ ಅಧಿಕಾರಿಯಾಗಿರುವ ಎಚ್‌.ಡಿ.ಆನಂದಕುಮಾರ್ ಅವರು, ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿ ಸದ್ಯ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಚಾಮರಾಜನಗರ ಎಸ್‌ಪಿಯಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.

ಖುಷಿ ನೀಡಿದೆ: ‘ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ವರ್ಷ ಕಾರ್ಯನಿರ್ವಹಿಸಿರುವುದು ತುಂಬಾ ಖುಷಿ ನೀಡಿದೆ. ಜಿಲ್ಲೆಯ ಬಗ್ಗೆ ಹೊರಗಿನಿಂದ ಕೇಳಿಬರುವ ಅಭಿಪ್ರಾಯಕ್ಕೂ ಇಲ್ಲಿಯ ವಾತಾವರಣಕ್ಕೂ ಬಹಳ ವ್ಯತ್ಯಾಸವಿದೆ. ಇಲ್ಲಿಯ ಜನ ಒಳ್ಳೆಯವರಿದ್ದಾರೆ. ಇಲಾಖೆ ಕೆಲಸ ಕಾರ್ಯಗಳಿಗೆ ಬೆಂಬಲ ನೀಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು’ ಎಂದು ನಿರ್ಗಮಿತ ಎಸ್‌.ಪಿ. ಅನುಪಮ್‌ ಅಗರವಾಲ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು. ಅಗರವಾಲ್‌ ಅವರಿಗೆ ಇನ್ನೂ ಸ್ಥಳ ನಿಯುಕ್ತಿಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು