<p>ವಿಜಯಪುರ:ಬಂಡವಾಳಶಾಹಿಗಳ ಲಾಭಕ್ಕಾಗಿ ರೈಲ್ವೆ, ಮಿಲಿಟರಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯುವಜನ ವಿರೋಧಿ ನೀತಿಗಳ ವಿರುದ್ಧ ಹಾಗೂ ಕಾಯಂ ನೇಮಕಾತಿಗಾಗಿ ಯುವಜನರು ಒಗ್ಗಟ್ಟಾಗಿ ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.</p>.<p>ಎಐಡಿವೈಒ 56ನೇ ಸಂಸ್ಥಾಪನಾ ದಿನದ ಅಂಗವಾಗಿ ಭ್ರಷ್ಟಾಚಾರ ರಹಿತ, ಪಾರದರ್ಶಕ ನೇಮಕಾತಿಗಾಗಿ ಹಾಗೂ ಎಲ್ಲಾ ಖಾಲಿ ಹುದ್ದೆಗಳನ್ನು ಕಾಯಂ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ಜನಸಾಮಾನ್ಯರು ಪ್ರತಿದಿನವೂ ಬೆಲೆಯೇರಿಕೆ ಬಿಸಿಯನ್ನು ಅನುಭವಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಮುಂತಾದ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದರೆ, ಅವರ ಆದಾಯ ಪಾತಾಳ ಮುಟ್ಟಿದೆ. ನಿರುದ್ಯೋಗಿ ಯುವಕರ ಪಾಡು ಅಯೋಮಯವಾಗಿದೆ ಎಂದರು.</p>.<p>ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ ಎನ್ನುವುದು ಕೇವಲ ಉಳ್ಳವರ ಸಂಭ್ರಮವಾಗಿದೆ ಎಂದು ಹೇಳಿದರು.</p>.<p>ದೇಶದಲ್ಲಿ 45 ವರ್ಷಗಳಲ್ಲಿ ಅತ್ಯಂತ ಹೆಚ್ಚು ನಿರುದ್ಯೋಗದ ಪ್ರಮಾಣ ದಾಖಲಾಗಿದೆ. 2022 ಮಾರ್ಚ್ನಲ್ಲಿ ನಿರುದ್ಯೋಗದ ಪ್ರಮಾಣ ಶೇ 7.60 ಇದ್ದರೆ, ಏಪ್ರಿಲ್ನಲ್ಲಿ ಅದು ಶೇ 7.83ಕ್ಕೆ ಏರಿಕೆಯಾಗಿದೆ. ಈ ಅಂಕಿ ಅಂಶಗಳು ನಿರುದ್ಯೋಗವು ರಾಕೆಟ್ ವೇಗದಲ್ಲಿ ಬೆಳೆಯುತ್ತಲೇ ಸಾಗಿರುವುದನ್ನು ತೋರಿಸುತ್ತವೆ ಎಂದರು.</p>.<p>ಎಐಡಿವೈಓನ ಸೆಕ್ರೆಟರಿಯಟ್ ಸದಸ್ಯ ಶರಣು ಗಡ್ಡಿ ಮಾತನಾಡಿ, ಜನರ ನಡುವೆ ಜಾತಿ, ಧರ್ಮದ ಹೆಸರಿನಲ್ಲಿ ವಿವಿಧ ಕೋಮುಗಳ ನಡುವೆ ಉದ್ವಿಗ್ನತೆ ಹುಟ್ಟುಹಾಕಲಾಗುತ್ತಿದೆ. ಶಾಲಾ-ಕಾಲೇಜಿನ ಮಕ್ಕಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಎಐಡಿವೈಓ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ ಮಾತನಾಡಿ, ಸರ್ಕಾರವು ತನ್ನ ದುರಾಡಳಿತವನ್ನು ಪ್ರಶ್ನಿಸುವವರನ್ನು, ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಗುಜರಾತ್ ಸರ್ಕಾರವು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಸದಸ್ಯರಾದ ಅನುರಾಗ ಸಾಳುಂಕೆ, ಸೋಮು ಮಡ್ಡಿ, ಸಯ್ಯದ್, ಕಲ್ಮೇಶ, ಪ್ರದೀಪ್, ದೇವರಾಜ ಕೊಪ್ಪಳ, ಸಂದೀಪ ಜಾಧವ್ ಪ್ರತಿಭಟನೆಯಲ್ಲಿಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ:ಬಂಡವಾಳಶಾಹಿಗಳ ಲಾಭಕ್ಕಾಗಿ ರೈಲ್ವೆ, ಮಿಲಿಟರಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಯುವಜನ ವಿರೋಧಿ ನೀತಿಗಳ ವಿರುದ್ಧ ಹಾಗೂ ಕಾಯಂ ನೇಮಕಾತಿಗಾಗಿ ಯುವಜನರು ಒಗ್ಗಟ್ಟಾಗಿ ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.</p>.<p>ಎಐಡಿವೈಒ 56ನೇ ಸಂಸ್ಥಾಪನಾ ದಿನದ ಅಂಗವಾಗಿ ಭ್ರಷ್ಟಾಚಾರ ರಹಿತ, ಪಾರದರ್ಶಕ ನೇಮಕಾತಿಗಾಗಿ ಹಾಗೂ ಎಲ್ಲಾ ಖಾಲಿ ಹುದ್ದೆಗಳನ್ನು ಕಾಯಂ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.</p>.<p>ಜನಸಾಮಾನ್ಯರು ಪ್ರತಿದಿನವೂ ಬೆಲೆಯೇರಿಕೆ ಬಿಸಿಯನ್ನು ಅನುಭವಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಮುಂತಾದ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದರೆ, ಅವರ ಆದಾಯ ಪಾತಾಳ ಮುಟ್ಟಿದೆ. ನಿರುದ್ಯೋಗಿ ಯುವಕರ ಪಾಡು ಅಯೋಮಯವಾಗಿದೆ ಎಂದರು.</p>.<p>ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ ಎನ್ನುವುದು ಕೇವಲ ಉಳ್ಳವರ ಸಂಭ್ರಮವಾಗಿದೆ ಎಂದು ಹೇಳಿದರು.</p>.<p>ದೇಶದಲ್ಲಿ 45 ವರ್ಷಗಳಲ್ಲಿ ಅತ್ಯಂತ ಹೆಚ್ಚು ನಿರುದ್ಯೋಗದ ಪ್ರಮಾಣ ದಾಖಲಾಗಿದೆ. 2022 ಮಾರ್ಚ್ನಲ್ಲಿ ನಿರುದ್ಯೋಗದ ಪ್ರಮಾಣ ಶೇ 7.60 ಇದ್ದರೆ, ಏಪ್ರಿಲ್ನಲ್ಲಿ ಅದು ಶೇ 7.83ಕ್ಕೆ ಏರಿಕೆಯಾಗಿದೆ. ಈ ಅಂಕಿ ಅಂಶಗಳು ನಿರುದ್ಯೋಗವು ರಾಕೆಟ್ ವೇಗದಲ್ಲಿ ಬೆಳೆಯುತ್ತಲೇ ಸಾಗಿರುವುದನ್ನು ತೋರಿಸುತ್ತವೆ ಎಂದರು.</p>.<p>ಎಐಡಿವೈಓನ ಸೆಕ್ರೆಟರಿಯಟ್ ಸದಸ್ಯ ಶರಣು ಗಡ್ಡಿ ಮಾತನಾಡಿ, ಜನರ ನಡುವೆ ಜಾತಿ, ಧರ್ಮದ ಹೆಸರಿನಲ್ಲಿ ವಿವಿಧ ಕೋಮುಗಳ ನಡುವೆ ಉದ್ವಿಗ್ನತೆ ಹುಟ್ಟುಹಾಕಲಾಗುತ್ತಿದೆ. ಶಾಲಾ-ಕಾಲೇಜಿನ ಮಕ್ಕಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.</p>.<p>ಎಐಡಿವೈಓ ಜಿಲ್ಲಾಧ್ಯಕ್ಷ ಶ್ರೀಕಾಂತ ಕೊಂಡಗೂಳಿ ಮಾತನಾಡಿ, ಸರ್ಕಾರವು ತನ್ನ ದುರಾಡಳಿತವನ್ನು ಪ್ರಶ್ನಿಸುವವರನ್ನು, ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸುವ ಕೆಲಸ ಮಾಡುತ್ತಿದೆ. ಆ ನಿಟ್ಟಿನಲ್ಲಿ ಗುಜರಾತ್ ಸರ್ಕಾರವು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸಿರುವುದು ಖಂಡನೀಯ. ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಸದಸ್ಯರಾದ ಅನುರಾಗ ಸಾಳುಂಕೆ, ಸೋಮು ಮಡ್ಡಿ, ಸಯ್ಯದ್, ಕಲ್ಮೇಶ, ಪ್ರದೀಪ್, ದೇವರಾಜ ಕೊಪ್ಪಳ, ಸಂದೀಪ ಜಾಧವ್ ಪ್ರತಿಭಟನೆಯಲ್ಲಿಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>