<p><strong>ನಿಡಗುಂದಿ:</strong> ‘ತೊಗರಿ, ಮೆಕ್ಕೆಜೋಳ, ಈರುಳ್ಳಿ ಮತ್ತಿತರ ಬೆಳೆಗಳಿಗೆ ಯೂರಿಯಾ ಗೊಬ್ಬರ ನೀಡಬೇಕು. ಇಲ್ಲದಿದ್ದರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುವ ಆತಂಕವಿದೆ. ಕೂಡಲೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಸಂಘಟನೆ ಜಿಲ್ಲಾ ಅಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ‘ರೈತರು ಯೂರಿಯಾ ಗೊಬ್ಬರಕ್ಕಾಗಿ ನಿತ್ಯ ಅಲೆದಾಡುತ್ತಿದ್ದರೂ ಗೊಬ್ಬರ ಸಿಗುತ್ತಿಲ್ಲ. ಗುರಿಗಿಂತ ಹೆಚ್ಚು ಬಿತ್ತನೆ ಆಗಿದ್ದು, ಅದಕ್ಕೆ ತಕ್ಕಂತೆ ಗೊಬ್ಬರ ವಿತರಿಸುವಲ್ಲಿ ಕೃಷಿ ಸಚಿವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.</p>.<p>ಗ್ರೇಡ್-2 ತಹಶೀಲ್ದಾರ್ ಎಸ್.ಎಸ್.ಭಾವಿಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ಮಹಾಂತಪ್ಪ ವಾಲೀಕಾರ, ಶಶಿಕಾಂತ ದೇಸಾಯಿ, ಸಂಜೀವ ಚನಗೊಂಡ, ರಾಮಣ್ಣ ಸೀತಿಮನಿ, ಲಕ್ಷ್ಮಣಗೌಡ ಬಿರಾದಾರ, ಶಿವಪ್ಪ ಪಾಟೀಲ, ಶೇಖಪ್ಪ ಕೋಳೂರ, ಶಿವಪ್ಪ ಹೆಬ್ಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಡಗುಂದಿ:</strong> ‘ತೊಗರಿ, ಮೆಕ್ಕೆಜೋಳ, ಈರುಳ್ಳಿ ಮತ್ತಿತರ ಬೆಳೆಗಳಿಗೆ ಯೂರಿಯಾ ಗೊಬ್ಬರ ನೀಡಬೇಕು. ಇಲ್ಲದಿದ್ದರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿ ನಾಶವಾಗುವ ಆತಂಕವಿದೆ. ಕೂಡಲೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಿದರು.</p>.<p>ಸಂಘಟನೆ ಜಿಲ್ಲಾ ಅಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ‘ರೈತರು ಯೂರಿಯಾ ಗೊಬ್ಬರಕ್ಕಾಗಿ ನಿತ್ಯ ಅಲೆದಾಡುತ್ತಿದ್ದರೂ ಗೊಬ್ಬರ ಸಿಗುತ್ತಿಲ್ಲ. ಗುರಿಗಿಂತ ಹೆಚ್ಚು ಬಿತ್ತನೆ ಆಗಿದ್ದು, ಅದಕ್ಕೆ ತಕ್ಕಂತೆ ಗೊಬ್ಬರ ವಿತರಿಸುವಲ್ಲಿ ಕೃಷಿ ಸಚಿವರು ವಿಫಲರಾಗಿದ್ದಾರೆ’ ಎಂದು ಆರೋಪಿಸಿದರು.</p>.<p>ಗ್ರೇಡ್-2 ತಹಶೀಲ್ದಾರ್ ಎಸ್.ಎಸ್.ಭಾವಿಕಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಮುಖಂಡರಾದ ಮಹಾಂತಪ್ಪ ವಾಲೀಕಾರ, ಶಶಿಕಾಂತ ದೇಸಾಯಿ, ಸಂಜೀವ ಚನಗೊಂಡ, ರಾಮಣ್ಣ ಸೀತಿಮನಿ, ಲಕ್ಷ್ಮಣಗೌಡ ಬಿರಾದಾರ, ಶಿವಪ್ಪ ಪಾಟೀಲ, ಶೇಖಪ್ಪ ಕೋಳೂರ, ಶಿವಪ್ಪ ಹೆಬ್ಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>