<p><strong>ವಿಜಯಪುರ</strong>:ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿಪ್ರತಿ ಗ್ರಾಮ ಪಂಚಾಯ್ತಿಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದು ಸಂಘಟನೆಯ ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯ ವಿ.ವೈ.ಘೋರ್ಪಡೆ ಹೇಳಿದರು.</p>.<p>ನಗರದಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪ್ರತಿ ಬ್ಲಾಕ್ಗೆ ಇಬ್ಬರು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಒಬ್ಬರು ಹಾಗೂ ಜಿಲ್ಲೆಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದರು.</p>.<p>ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಂಘಟನೆ ಉದ್ದೇಶದಿಂದರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ (ಆರ್ಜಿಪಿಆರ್ಎಸ್) ಬಲ ಪಡಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಗ್ರಾಮ ಪಂಚಾಯತ್ ವ್ಯವಸ್ಥೆ ಬಲಪಡಿಸುವುದೇ ಸಂಘಟನೆಯ ಧ್ಯೇಯವಾಗಿದೆ ಎಂದರು.</p>.<p>ರಾಜ್ಯ ಹಾಗೂಜಿಲ್ಲಾ ಮಟ್ಟದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಬಲಪಡಿಸಲು ಅಕ್ಟೋಬರ್ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.</p>.<p>ಸಾಮಾಜಿಕ ನ್ಯಾಯದಡಿಯಲ್ಲಿ ಸರ್ಕಾರದ ಯೋಜನೆಗಳನ್ನು ತಳ ಹಂತದವರೆಗೂ ತಲುಪಿಸಲು ಸಂಘಟನೆ ಶ್ರಮಿಸಲಿದೆ ಅದಕ್ಕಾಗಿ ವಿಭಾಗ ಮಟ್ಟದಲ್ಲಿ ಸಹ ಸಂಚಾಲಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.</p>.<p>ಆರ್ಜಿಪಿಆರ್ಎಸ್ ರಾಜ್ಯ ಘಟಕದ ಸಮನ್ವಯಕರನ್ನಾಗಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್, ಸಹ ಸಂಚಾಲಕರಾಗಿ ಬೆಂಗಳೂರಿನ ಅಂಕಲಿ ನೇಮಕಗೊಂಡಿದ್ದಾರೆ. ಬೆಳಗಾವಿ ವಿಭಾಗಕ್ಕೆ ಉಮೇಶ ಎಸ್.ಬಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಎಐಸಿಸಿಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರನ್ನು ಆಡಳಿತದಲ್ಲಿ ತೊಡಗಿಸಿಕೊಳ್ಳುವಂತೆ ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತ ಈ ಸಂಘಟನೆ ಕಾರ್ಯನಿರ್ವಹಿಸಲಿದೆ ಎಂದರು.</p>.<p>ಸಂಘಟನೆಯ ರಾಜ್ಯ ಉಸ್ತುವಾರಿ ಬಿನಿತಾ ವೋರಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ, ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲನಗೌಡ ಬಿರಾದಾರ, ವಿಠಲ ಕಟಕದೊಂಡ, ಗಂಗಾಧರ ಸಂಬಣ್ಣಿ, ವಸಂತ ಹೊನಮೋಡೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿಪ್ರತಿ ಗ್ರಾಮ ಪಂಚಾಯ್ತಿಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದು ಸಂಘಟನೆಯ ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯ ವಿ.ವೈ.ಘೋರ್ಪಡೆ ಹೇಳಿದರು.</p>.<p>ನಗರದಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪ್ರತಿ ಬ್ಲಾಕ್ಗೆ ಇಬ್ಬರು ಹಾಗೂ ಜಿಲ್ಲಾ ಪಂಚಾಯ್ತಿ ಕ್ಷೇತ್ರಕ್ಕೆ ಒಬ್ಬರು ಹಾಗೂ ಜಿಲ್ಲೆಗೆ ಇಬ್ಬರು ಸಮನ್ವಯಕರನ್ನು ನೇಮಕ ಮಾಡಲಾಗುವುದು ಎಂದರು.</p>.<p>ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷ ಸಂಘಟನೆ ಉದ್ದೇಶದಿಂದರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ (ಆರ್ಜಿಪಿಆರ್ಎಸ್) ಬಲ ಪಡಿಸಲು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಗ್ರಾಮೀಣ ಪ್ರದೇಶದ ಅಭಿವೃದ್ಧಿ ಹಾಗೂ ಗ್ರಾಮ ಪಂಚಾಯತ್ ವ್ಯವಸ್ಥೆ ಬಲಪಡಿಸುವುದೇ ಸಂಘಟನೆಯ ಧ್ಯೇಯವಾಗಿದೆ ಎಂದರು.</p>.<p>ರಾಜ್ಯ ಹಾಗೂಜಿಲ್ಲಾ ಮಟ್ಟದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಬಲಪಡಿಸಲು ಅಕ್ಟೋಬರ್ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದರು.</p>.<p>ಸಾಮಾಜಿಕ ನ್ಯಾಯದಡಿಯಲ್ಲಿ ಸರ್ಕಾರದ ಯೋಜನೆಗಳನ್ನು ತಳ ಹಂತದವರೆಗೂ ತಲುಪಿಸಲು ಸಂಘಟನೆ ಶ್ರಮಿಸಲಿದೆ ಅದಕ್ಕಾಗಿ ವಿಭಾಗ ಮಟ್ಟದಲ್ಲಿ ಸಹ ಸಂಚಾಲಕರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.</p>.<p>ಆರ್ಜಿಪಿಆರ್ಎಸ್ ರಾಜ್ಯ ಘಟಕದ ಸಮನ್ವಯಕರನ್ನಾಗಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್, ಸಹ ಸಂಚಾಲಕರಾಗಿ ಬೆಂಗಳೂರಿನ ಅಂಕಲಿ ನೇಮಕಗೊಂಡಿದ್ದಾರೆ. ಬೆಳಗಾವಿ ವಿಭಾಗಕ್ಕೆ ಉಮೇಶ ಎಸ್.ಬಾಲಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.</p>.<p>ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಎಐಸಿಸಿಯ ಭಾಗವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಜನರನ್ನು ಆಡಳಿತದಲ್ಲಿ ತೊಡಗಿಸಿಕೊಳ್ಳುವಂತೆ ಸರ್ಕಾರ ಮತ್ತು ಜನರ ನಡುವೆ ಸೇತುವೆಯಂತ ಈ ಸಂಘಟನೆ ಕಾರ್ಯನಿರ್ವಹಿಸಲಿದೆ ಎಂದರು.</p>.<p>ಸಂಘಟನೆಯ ರಾಜ್ಯ ಉಸ್ತುವಾರಿ ಬಿನಿತಾ ವೋರಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ರಾಜು ಅಲಗೂರ, ಸಂಘಟನೆಯ ಜಿಲ್ಲಾ ಸಂಚಾಲಕ ಮಲ್ಲನಗೌಡ ಬಿರಾದಾರ, ವಿಠಲ ಕಟಕದೊಂಡ, ಗಂಗಾಧರ ಸಂಬಣ್ಣಿ, ವಸಂತ ಹೊನಮೋಡೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>