ಹಾಲಿಹಾಳ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ವಿರೋಧ ಪಕ್ಷದವರೊಂದಿಗೆ ಸೇರಿಕೊಂಡು ಚುನಾವಣಾ ಪ್ರಚಾರ ನಡೆಸಿದ್ದರು.ಅಲ್ಲದೇ, ಬಿಜೆಪಿ ಪ್ರಮುಖರೊಂದಿಗೆ ಅಗೌರವವಾಗಿ ನಡೆದುಕೊಳ್ಳುತ್ತಿದ್ದರು. ಇದನ್ನೆಲ್ಲ ಪರಿಗಣಿಸಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇನ್ನು ಮುಂದೆ ನಮ್ಮ ಪಕ್ಷಕ್ಕೂ ಅವರಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.