<p><strong>ವಿಜಯಪುರ:</strong> ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ ಅವರಿಂದ ₹17.50 ಲಕ್ಷ ಮೌಲ್ಯದ ನಗ, ನಗದು ವಶಪಡಿಸಿಕೊಂಡಿದ್ದಾರೆ.</p>.<p>ವಿಜಯಪುರ ನಗರದ ರೈಲು ನಿಲ್ದಾಣ ಸಮೀಪದ ಚೌಗಲೆ ಕಂಪೌಂಡ್ನ ಭರತ್ ಅಗರವಾಲ್(43), ಪೇಟೆ ಬಾವಡಿಯ ವಾಸಿಂ ಶೇಖ್(35) ಮತ್ತು ಮಹಾರಾಷ್ಟ್ರ ರಾಜ್ಯದ ಪುಣಿ ಜಿಲ್ಲೆಯ ಕಲವಾಡಿಯ ಅಕ್ಬರ್ ಶೇಖ್(32) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆರೋಪಿಗಳಿಂದ 70 ಗ್ರಾಂ ಬಂಗಾರದ ಆಭರಣ, 20 ಕೆ.ಜಿ.ಬೆಳ್ಳಿ ಆಭರಣ ಹಾಗೂ ₹ 5 ಲಕ್ಷ ನಗದು ಸೇರಿದಂತೆ ಒಟ್ಟು ₹17.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿಎಸ್ ಪಿ ಕೆ.ಸಿ.ಲಕ್ಷ್ಮೀನಾರಾಯಣ, ಸಿಪಿಐ ರಮೇಶ ಅವಜಿ, ಗೋಳಗುಮ್ಮಟ ಪಿಎಸ್ ಐ ಸೀತಾರಾಮ ಲಮಾಣಿ, ಜಲನಗರ ಠಾಣೆ ಪಿಎಸ್ ಐ ಎಸ್.ಎಂ.ಶಿರಗುಪ್ಪಿ, ಸೋಮೇಶ ಗೆಜ್ಜೆ, ಪ್ರೇಮಾ ಕುಚಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆ ಪೊಲೀಸರು ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ ಅವರಿಂದ ₹17.50 ಲಕ್ಷ ಮೌಲ್ಯದ ನಗ, ನಗದು ವಶಪಡಿಸಿಕೊಂಡಿದ್ದಾರೆ.</p>.<p>ವಿಜಯಪುರ ನಗರದ ರೈಲು ನಿಲ್ದಾಣ ಸಮೀಪದ ಚೌಗಲೆ ಕಂಪೌಂಡ್ನ ಭರತ್ ಅಗರವಾಲ್(43), ಪೇಟೆ ಬಾವಡಿಯ ವಾಸಿಂ ಶೇಖ್(35) ಮತ್ತು ಮಹಾರಾಷ್ಟ್ರ ರಾಜ್ಯದ ಪುಣಿ ಜಿಲ್ಲೆಯ ಕಲವಾಡಿಯ ಅಕ್ಬರ್ ಶೇಖ್(32) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಆರೋಪಿಗಳಿಂದ 70 ಗ್ರಾಂ ಬಂಗಾರದ ಆಭರಣ, 20 ಕೆ.ಜಿ.ಬೆಳ್ಳಿ ಆಭರಣ ಹಾಗೂ ₹ 5 ಲಕ್ಷ ನಗದು ಸೇರಿದಂತೆ ಒಟ್ಟು ₹17.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ, ಡಿಎಸ್ ಪಿ ಕೆ.ಸಿ.ಲಕ್ಷ್ಮೀನಾರಾಯಣ, ಸಿಪಿಐ ರಮೇಶ ಅವಜಿ, ಗೋಳಗುಮ್ಮಟ ಪಿಎಸ್ ಐ ಸೀತಾರಾಮ ಲಮಾಣಿ, ಜಲನಗರ ಠಾಣೆ ಪಿಎಸ್ ಐ ಎಸ್.ಎಂ.ಶಿರಗುಪ್ಪಿ, ಸೋಮೇಶ ಗೆಜ್ಜೆ, ಪ್ರೇಮಾ ಕುಚಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>