ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ,ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ಜುಲೈನಲ್ಲಿ 20 ದಿನ ಕೆಲಸ ಸ್ಥಗಿತಗೊಳಿಸಿ ಹೊರಾಟ ಮಾಡಲಾಗಿತ್ತು. ಅಂದು ಮುಖ್ಯಮಂತ್ರಿಗಳ ಭರವಸೆಯ ಮೇರೆಗೆ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿತ್ತು. ಆದರೆ, ಅವರು ಕೇಳಿರುವ ಕಾಲಾವಕಾಶ ಮೀರಿ ಹೋಗಿದ್ದು, ಮಾತು ಕೊಟ್ಟು ಮರೆತ ಸರ್ಕಾರದ ವಿರುದ್ಧ ಮತ್ತೆ ಹೋರಾಟ ಮಾಡುತ್ತಿದ್ದೇವೆ ಎಂದರು.