<p><strong>ಆಲಮೇಲ:</strong> ನೂತನ ತಾಲ್ಲೂಕು ಕೇಂದ್ರಕ್ಕೆ ಸೌಲಭ್ಯಗಳನ್ನು ನೀಡಲು ಸರ್ಕಾರದ ಸ್ಪಂದಿಸಿದ್ದು, ₹ 8.60 ಕೋಟಿ ವೆಚ್ಚದಲ್ಲಿ ಶೀಘ್ರವೇ ಪ್ರಜಾಸೌಧ ಕಟ್ಟಡದ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಅವರು ಪಟ್ಟಣದ ಮಸಾಲಿ ಲೇಔಟ್ನಲ್ಲಿ ಶನಿವಾರ ಹಿಂದುಳಿದ ವರ್ಗಗಳ ಇಲಾಖೆ ಹಮ್ಮಿಕೊಂಡಿದ್ದ ₹4 ಕೋಟಿ ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಆಲಮೇಲ ತಾಲ್ಲುಕು ಕೇಂದ್ರ ಹೆಸರಿಗಷ್ಟೆ ಅಲ್ಲ, ₹20 ಕೋಟಿ ವೆಚ್ಚದಲ್ಲಿ ರಸ್ತೆ ವಿಸ್ತರಣೆ, ವಿದ್ಯುತ್ ದೀಪ ಅಳವಡಿಸುವ ಕಾರ್ಯ ಸೇರಿದಂತೆ, ತಾಲ್ಲೂಕು ಕ್ರೀಡಾಂಗಣ ಮೊದಲಾದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಪ್ರಗತಿಯ ದಿಕ್ಸೂಚಿ ತೋರಿಸುತ್ತವೆ ಎಂದರು.</p>.<p>ಪಟ್ಟಣ ಪಂಚಾಯತಿ ಅಧ್ಯಕ್ಷ ಸಾಧಿಕ ಸುಂಬಡ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ರವೀಂದ್ರ ಬಂಥನಾಳ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ಪ.ಪಂ.ಮುಖ್ಯಾಧಿಕಾರಿ ಸುರೇಶ ನಾಯಕ, ಪ.ಪಂ.ಸದಸ್ಯರಾದ ವೀರಭದ್ರ ಕತ್ತಿ, ಭೀಮು ಬೊಮ್ಮನಳ್ಳಿ, ಚಂದು ಹಳೆಮನಿ, ಭಾಗ್ಯವಂತ ಆಲಮೇಲಕರ ಭಾಗವಹಿಸಿದ್ದರು.</p>.<p>ಅಧಿಕಾರಿ ನಂದಪ್ಪ ಅನಗೊಂಡ ಸ್ವಾಗತಿಸಿದರು. ಗಂಗಪ್ಪ ತಾವರಖೇಡ ನಿರೂಪಿಸಿದರು. ನಾನಾಗೌಡ ಸಿದರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಮೇಲ:</strong> ನೂತನ ತಾಲ್ಲೂಕು ಕೇಂದ್ರಕ್ಕೆ ಸೌಲಭ್ಯಗಳನ್ನು ನೀಡಲು ಸರ್ಕಾರದ ಸ್ಪಂದಿಸಿದ್ದು, ₹ 8.60 ಕೋಟಿ ವೆಚ್ಚದಲ್ಲಿ ಶೀಘ್ರವೇ ಪ್ರಜಾಸೌಧ ಕಟ್ಟಡದ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಅವರು ಪಟ್ಟಣದ ಮಸಾಲಿ ಲೇಔಟ್ನಲ್ಲಿ ಶನಿವಾರ ಹಿಂದುಳಿದ ವರ್ಗಗಳ ಇಲಾಖೆ ಹಮ್ಮಿಕೊಂಡಿದ್ದ ₹4 ಕೋಟಿ ವೆಚ್ಚದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕಟ್ಟಡದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಆಲಮೇಲ ತಾಲ್ಲುಕು ಕೇಂದ್ರ ಹೆಸರಿಗಷ್ಟೆ ಅಲ್ಲ, ₹20 ಕೋಟಿ ವೆಚ್ಚದಲ್ಲಿ ರಸ್ತೆ ವಿಸ್ತರಣೆ, ವಿದ್ಯುತ್ ದೀಪ ಅಳವಡಿಸುವ ಕಾರ್ಯ ಸೇರಿದಂತೆ, ತಾಲ್ಲೂಕು ಕ್ರೀಡಾಂಗಣ ಮೊದಲಾದ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಪ್ರಗತಿಯ ದಿಕ್ಸೂಚಿ ತೋರಿಸುತ್ತವೆ ಎಂದರು.</p>.<p>ಪಟ್ಟಣ ಪಂಚಾಯತಿ ಅಧ್ಯಕ್ಷ ಸಾಧಿಕ ಸುಂಬಡ, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ರವೀಂದ್ರ ಬಂಥನಾಳ ಮಾತನಾಡಿದರು. ಎಪಿಎಂಸಿ ಅಧ್ಯಕ್ಷ ಬಸವರಾಜ ಬಾಗೇವಾಡಿ, ಪ.ಪಂ.ಮುಖ್ಯಾಧಿಕಾರಿ ಸುರೇಶ ನಾಯಕ, ಪ.ಪಂ.ಸದಸ್ಯರಾದ ವೀರಭದ್ರ ಕತ್ತಿ, ಭೀಮು ಬೊಮ್ಮನಳ್ಳಿ, ಚಂದು ಹಳೆಮನಿ, ಭಾಗ್ಯವಂತ ಆಲಮೇಲಕರ ಭಾಗವಹಿಸಿದ್ದರು.</p>.<p>ಅಧಿಕಾರಿ ನಂದಪ್ಪ ಅನಗೊಂಡ ಸ್ವಾಗತಿಸಿದರು. ಗಂಗಪ್ಪ ತಾವರಖೇಡ ನಿರೂಪಿಸಿದರು. ನಾನಾಗೌಡ ಸಿದರೆಡ್ಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>