ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ಧಿ, ಸಾರ್ವಜನಿಕರಿಂದ ಹಲ್ಲೆಗೊಳಗಾದವರು ಮಕ್ಕಳ ಕಳ್ಳರಲ್ಲ. ಅವರು ದೆಹಲಿಯಿಂದ ವಿಜಯಪುರಕ್ಕೆ ಬಂದು ಬಾಡಿಗೆ ಮನೆ ಮಾಡಿಕೊಂಡು ಒಂದು ತಿಂಗಳಿಂದ ವಾಸವಾಗಿದ್ದಾರೆ. ಚಕ್ಕಲಿ ತಯಾರಿಸುವ ಒರಳು ಮಾರಾಟ ಮಾಡುವವರಾಗಿದ್ದಾರೆ. ಸದ್ಯ ಇರುವ ಮನೆಯನ್ನು ಬಿಟ್ಟು ಬೇರೊಂದು ಮನೆಯ ಹುಡುಕಾಟದಲ್ಲಿ ತೊಡಗಿದ್ದಾಗ ಜನ ತಪ್ಪಾಗಿ ಭಾವಿಸಿ ಹಲ್ಲೆ ಮಾಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.