<p>ವಿಜಯಪುರ: ಮುಂದಿನ ದಿನಗಳಲ್ಲಿ ತೃತೀಯ ಲಿಂಗಿಗಳ ಕುಂದು–ಕೊರತೆಗಳ ನಿವಾರಣೆಗೆ ವಿಶೇಷ ಗಮನ ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ತಿಳಿಸಿದರು.</p>.<p>ನಗರದ ಕಾಕಾ ಕಾರ್ಖಾನಿಸ್ ಮಂಗಲ ಕಾರ್ಯಾಲಯದಲ್ಲಿ ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣೆ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೃತೀಯ ಲಿಂಗಿಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕೂಡ ದೊರಕಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಈ ಸಮುದಾಯದವರಿಗೆ ಕಾನೂನಿನ ರೀತಿಯಲ್ಲಿ ದೊರೆಯಬೇಕಾದ ಎಲ್ಲ ತರಹದ ಸಹಾಯವನ್ನು ಮಾಡಲಾಗುವುದು ಹಾಗೂ ನ್ಯಾಯಾಂಗದ ವ್ಯವಸ್ಥೆ ಬಗ್ಗೆ ವಿಶ್ವಾಸ ಮೂಡುವಂತೆ ಸಹಾಯ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ನವ ಸ್ಪೂರ್ತಿ ಲೈಂಗಿಕ, ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆಯ ಮಲ್ಲು ಕಂಬಾರ, ನಮ್ಮ ಸಮುದಾಯದ ಜನರಿಗೆ ಮನೆಗಳನ್ನು ಹಾಗೂ ಸರ್ಕಾರದಿಂದ ಕೊಡಲಾಗುವ ಎಲ್ಲ ರೀತಿಯ ಯೋಜನೆಗಳನ್ನು ನೀಡಬೇಕು ಎಂದು ತಿಳಿಸಿದರು.</p>.<p>ತೃತೀಯಲಿಂಗಿಗಳನ್ನು ಕೂಡ ಮಾನವೀಯತೆಯ ದೃಷ್ಟಿಯಲ್ಲಿ ಕಾಣಬೇಕು ಹಾಗೂ ಸರ್ಕಾರಿ ಕೆಲಸಗಳನ್ನು ನೀಡಬೇಕು ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ವಿಜಯ್ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಜಿಲ್ಲಾ ಸಮಾಲೋಚಕಿ ಭಾರತಿ ಪಾಟೀಲ್, ಆರೋಗ್ಯ ಇಲಾಖೆಯ ಅಧಿಕಾರಿ ಧಾರವಾಡಕರ್, ಪ್ರೇಮ ಕುಚಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಮುಂದಿನ ದಿನಗಳಲ್ಲಿ ತೃತೀಯ ಲಿಂಗಿಗಳ ಕುಂದು–ಕೊರತೆಗಳ ನಿವಾರಣೆಗೆ ವಿಶೇಷ ಗಮನ ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಹೊಸಮನಿ ತಿಳಿಸಿದರು.</p>.<p>ನಗರದ ಕಾಕಾ ಕಾರ್ಖಾನಿಸ್ ಮಂಗಲ ಕಾರ್ಯಾಲಯದಲ್ಲಿ ತೃತೀಯ ಲಿಂಗಿಗಳ ಹಕ್ಕುಗಳ ರಕ್ಷಣೆ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತೃತೀಯ ಲಿಂಗಿಗಳಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕೂಡ ದೊರಕಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅವರು ತಿಳಿಸಿದರು.</p>.<p>ಈ ಸಮುದಾಯದವರಿಗೆ ಕಾನೂನಿನ ರೀತಿಯಲ್ಲಿ ದೊರೆಯಬೇಕಾದ ಎಲ್ಲ ತರಹದ ಸಹಾಯವನ್ನು ಮಾಡಲಾಗುವುದು ಹಾಗೂ ನ್ಯಾಯಾಂಗದ ವ್ಯವಸ್ಥೆ ಬಗ್ಗೆ ವಿಶ್ವಾಸ ಮೂಡುವಂತೆ ಸಹಾಯ ಮಾಡಲಾಗುವುದು ಎಂದು ಅವರು ತಿಳಿಸಿದರು.</p>.<p>ನವ ಸ್ಪೂರ್ತಿ ಲೈಂಗಿಕ, ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆಯ ಮಲ್ಲು ಕಂಬಾರ, ನಮ್ಮ ಸಮುದಾಯದ ಜನರಿಗೆ ಮನೆಗಳನ್ನು ಹಾಗೂ ಸರ್ಕಾರದಿಂದ ಕೊಡಲಾಗುವ ಎಲ್ಲ ರೀತಿಯ ಯೋಜನೆಗಳನ್ನು ನೀಡಬೇಕು ಎಂದು ತಿಳಿಸಿದರು.</p>.<p>ತೃತೀಯಲಿಂಗಿಗಳನ್ನು ಕೂಡ ಮಾನವೀಯತೆಯ ದೃಷ್ಟಿಯಲ್ಲಿ ಕಾಣಬೇಕು ಹಾಗೂ ಸರ್ಕಾರಿ ಕೆಲಸಗಳನ್ನು ನೀಡಬೇಕು ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆಯ ಆಯುಕ್ತ ವಿಜಯ್ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಜಿಲ್ಲಾ ಸಮಾಲೋಚಕಿ ಭಾರತಿ ಪಾಟೀಲ್, ಆರೋಗ್ಯ ಇಲಾಖೆಯ ಅಧಿಕಾರಿ ಧಾರವಾಡಕರ್, ಪ್ರೇಮ ಕುಚಬಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>