<p><strong>ವಿಜಯಪುರ: </strong>ಫ್ಲೋರೋಸಿಸ್ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.</p>.<p>ರಾಷ್ಟ್ರೀಯ ಫ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಫ್ಲೊರೋಸಿಸ್ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ. ಈ ಕುರಿತು ವಿಶೇಷವಾಗಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.</p>.<p>ಶಾಲೆ ಮತ್ತು ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಲಕ ಪಾಲಕರಲ್ಲಿಯೂ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.</p>.<p>ಮುದ್ದೇಬಿಹಾಳ ತಾಲ್ಲೂಕಿನ ಹೆಚ್ಚಿನ ಹಳ್ಳಿಗಳಲ್ಲಿ ಫ್ಲೋರೈಡ್ ಅಂಶವುಳ್ಳ ನೀರು ಹೆಚ್ಚಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬಸವನ ಬಾಗೇವಾಡಿ, ಸಿಂದಗಿ, ಚಡಚಣ ಕೆಲವು ಭಾಗಗಳಲ್ಲಿ ಈ ಅಂಶ ಕಂಡು ಬಂದಿದೆ. ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಿರುವ ಗ್ರಾಮಗಳ ಪಟ್ಟಿ ಮಾಡಿ ಶಿಕ್ಷಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಒದಗಿಸುವಂತೆ ಆರೋಗ್ಯ ಇಲಾಖೆಯ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರರಿಗೆ ಸೂಚಿಸಿದರು.</p>.<p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನೀರು ಬಳಸುವ ಬಗ್ಗೆ ಸೂಕ್ತ ಮನವರಿಕೆ ಮಾಡಿಸುವಂತೆ ಸಲಹೆ ನೀಡಿದರು.</p>.<p>ಫ್ಲೋರೈಡ್ ಅಂಶ ಪರೀಕ್ಷೆಗಾಗಿ ಗುರುತಿಸಿದ ಗ್ರಾಮಗಳ ನೀರಿನ ಮಾದರಿಯನ್ನು ಆಶಾಕಾರ್ಯಕರ್ತೆಯರ ಮೂಲಕ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು. ಹುಣಸೆ ಸಸಿ ಬೆಳೆಸಲು ಪ್ರೋತ್ಸಾಹಿಸಬೇಕು. ಫ್ಲೋರೈಡ್ ಅಂಶವುಳ್ಳ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದರು.</p>.<p>ಫ್ಲೋರೋಸಿಸ್ ರೋಗ ಹೆಚ್ಚಿರುವ ಕಡೆ ಜಾಗೃತಿ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.</p>.<p class="Subhead"><strong>ಜಲಧಾರೆ ಸಹಕಾರಿ:</strong></p>.<p>ಜಿಲ್ಲೆಯ ಗ್ರಾಮ ಮತ್ತು ಪಟ್ಟಣಗಳಿಗೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ನೀರು ಪೂರೈಸುವ ಯೋಜನೆ ಮೂರ್ನಾಲ್ಕು ವರ್ಷದಲ್ಲಿ ಜಾರಿಗೊಳ್ಳುವ ಸಾಧ್ಯತೆಯಿದ್ದು, ಈ ಯೋಜನೆ ಜಾರಿಯಿಂದ ಕೊಳವೆ ನೀರಿನ ಬಳಕೆ ಪ್ರಮಾಣ ಕಡಿಮೆಯಾಗಿ ಫ್ಲೋರೋಸಿಸ್ ನಿಯಂತ್ರಣಕ್ಕೂ ಹಾಗೂ ಬರ ಪರಿಸ್ಥಿತಿ ನಿವಾರಣೆಗೂ ನೆರವಾಗಲಿದೆ ಎಂದು ಅವರು ಹೇಳಿದರು.</p>.<p>ವಿಜಯಪುರ, ರಾಯಚೂರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆ ಜಾರಿಗೊಳ್ಳಲಿದೆ. ವಿಜಯಪುರ ಜಿಲ್ಲೆಯಲ್ಲಿ ಎರಡು ವಿಭಾಗಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದ್ದು, ನಾರಾಯಣಪುರ ಹಿನ್ನೀರಿನಿಂದ ಮುದ್ದೇಬಿಹಾಳ ಮತ್ತು ಸಿಂದಗಿ ತಾಲ್ಲೂಕುಗಳಿಗೆ ಹಾಗೂ ಆಲಮಟ್ಟಿಯಿಂದ ಇತರೆ ತಾಲ್ಲೂಕುಗಳಿಗೆ ಕುಡಿಯುವ ನೀರು ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರ ವಿಜಯ ಮಹಾಂತೇಶ ಅವರು ಫ್ಲೋರೋಸಿಸ್ದಿಂದ ಮಾನವನ ಎಲುಬು, ಹಲ್ಲು ಹಾಗೂ ಇತರೆ ಅಂಗಾಂಗಳ ಮೇಲೆ ಆಗಬಹುದಾದ ದುಷ್ಪರಿಣಾಮಗಳ ಕುರಿತು ಸೂಕ್ತ ಮಾಹಿತಿ ನೀಡಿದರು.</p>.<p>* ಆಲಮಟ್ಟಿ, ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ಜಾಕ್ವೆಲ್ಗಳು ನಿರ್ಮಾಣಗೊಂಡು ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆಯು ಸಹ ಶೀಘ್ರ ನಿವಾರಣೆಯಾಗಲಿದೆ<br /><em>- ಗೋವಿಂದ ರೆಡ್ಡಿ, ಸಿಇಒ, ಜಿಲ್ಲಾ ಪಂಚಾಯ್ತಿ, ವಿಜಯಪುರ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಫ್ಲೋರೋಸಿಸ್ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಅರಿವು ಮೂಡಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.</p>.<p>ರಾಷ್ಟ್ರೀಯ ಫ್ಲೋರೋಸಿಸ್ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಫ್ಲೊರೋಸಿಸ್ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿದೆ. ಈ ಕುರಿತು ವಿಶೇಷವಾಗಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಅಂಶ ಹೆಚ್ಚಿರುವ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಬಳಕೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.</p>.<p>ಶಾಲೆ ಮತ್ತು ಅಂಗನವಾಡಿ ಮಕ್ಕಳಲ್ಲಿ ಜಾಗೃತಿ ಮೂಲಕ ಪಾಲಕರಲ್ಲಿಯೂ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.</p>.<p>ಮುದ್ದೇಬಿಹಾಳ ತಾಲ್ಲೂಕಿನ ಹೆಚ್ಚಿನ ಹಳ್ಳಿಗಳಲ್ಲಿ ಫ್ಲೋರೈಡ್ ಅಂಶವುಳ್ಳ ನೀರು ಹೆಚ್ಚಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬಸವನ ಬಾಗೇವಾಡಿ, ಸಿಂದಗಿ, ಚಡಚಣ ಕೆಲವು ಭಾಗಗಳಲ್ಲಿ ಈ ಅಂಶ ಕಂಡು ಬಂದಿದೆ. ಜಿಲ್ಲೆಯಲ್ಲಿ ಫ್ಲೋರೈಡ್ ಅಂಶ ಹೆಚ್ಚಿರುವ ಗ್ರಾಮಗಳ ಪಟ್ಟಿ ಮಾಡಿ ಶಿಕ್ಷಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಒದಗಿಸುವಂತೆ ಆರೋಗ್ಯ ಇಲಾಖೆಯ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರರಿಗೆ ಸೂಚಿಸಿದರು.</p>.<p>ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನೀರು ಬಳಸುವ ಬಗ್ಗೆ ಸೂಕ್ತ ಮನವರಿಕೆ ಮಾಡಿಸುವಂತೆ ಸಲಹೆ ನೀಡಿದರು.</p>.<p>ಫ್ಲೋರೈಡ್ ಅಂಶ ಪರೀಕ್ಷೆಗಾಗಿ ಗುರುತಿಸಿದ ಗ್ರಾಮಗಳ ನೀರಿನ ಮಾದರಿಯನ್ನು ಆಶಾಕಾರ್ಯಕರ್ತೆಯರ ಮೂಲಕ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು. ಹುಣಸೆ ಸಸಿ ಬೆಳೆಸಲು ಪ್ರೋತ್ಸಾಹಿಸಬೇಕು. ಫ್ಲೋರೈಡ್ ಅಂಶವುಳ್ಳ ಆಹಾರ ಪದಾರ್ಥಗಳನ್ನು ಸೇವಿಸದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದರು.</p>.<p>ಫ್ಲೋರೋಸಿಸ್ ರೋಗ ಹೆಚ್ಚಿರುವ ಕಡೆ ಜಾಗೃತಿ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.</p>.<p class="Subhead"><strong>ಜಲಧಾರೆ ಸಹಕಾರಿ:</strong></p>.<p>ಜಿಲ್ಲೆಯ ಗ್ರಾಮ ಮತ್ತು ಪಟ್ಟಣಗಳಿಗೆ ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ನೀರು ಪೂರೈಸುವ ಯೋಜನೆ ಮೂರ್ನಾಲ್ಕು ವರ್ಷದಲ್ಲಿ ಜಾರಿಗೊಳ್ಳುವ ಸಾಧ್ಯತೆಯಿದ್ದು, ಈ ಯೋಜನೆ ಜಾರಿಯಿಂದ ಕೊಳವೆ ನೀರಿನ ಬಳಕೆ ಪ್ರಮಾಣ ಕಡಿಮೆಯಾಗಿ ಫ್ಲೋರೋಸಿಸ್ ನಿಯಂತ್ರಣಕ್ಕೂ ಹಾಗೂ ಬರ ಪರಿಸ್ಥಿತಿ ನಿವಾರಣೆಗೂ ನೆರವಾಗಲಿದೆ ಎಂದು ಅವರು ಹೇಳಿದರು.</p>.<p>ವಿಜಯಪುರ, ರಾಯಚೂರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಈ ಯೋಜನೆ ಜಾರಿಗೊಳ್ಳಲಿದೆ. ವಿಜಯಪುರ ಜಿಲ್ಲೆಯಲ್ಲಿ ಎರಡು ವಿಭಾಗಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದ್ದು, ನಾರಾಯಣಪುರ ಹಿನ್ನೀರಿನಿಂದ ಮುದ್ದೇಬಿಹಾಳ ಮತ್ತು ಸಿಂದಗಿ ತಾಲ್ಲೂಕುಗಳಿಗೆ ಹಾಗೂ ಆಲಮಟ್ಟಿಯಿಂದ ಇತರೆ ತಾಲ್ಲೂಕುಗಳಿಗೆ ಕುಡಿಯುವ ನೀರು ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಫ್ಲೋರೋಸಿಸ್ ನಿಯಂತ್ರಣ ಸಲಹೆಗಾರ ವಿಜಯ ಮಹಾಂತೇಶ ಅವರು ಫ್ಲೋರೋಸಿಸ್ದಿಂದ ಮಾನವನ ಎಲುಬು, ಹಲ್ಲು ಹಾಗೂ ಇತರೆ ಅಂಗಾಂಗಳ ಮೇಲೆ ಆಗಬಹುದಾದ ದುಷ್ಪರಿಣಾಮಗಳ ಕುರಿತು ಸೂಕ್ತ ಮಾಹಿತಿ ನೀಡಿದರು.</p>.<p>* ಆಲಮಟ್ಟಿ, ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ ಜಾಕ್ವೆಲ್ಗಳು ನಿರ್ಮಾಣಗೊಂಡು ಶುದ್ಧ ಕುಡಿಯುವ ನೀರಿನ ಘಟಕಗಳ ಸಮಸ್ಯೆಯು ಸಹ ಶೀಘ್ರ ನಿವಾರಣೆಯಾಗಲಿದೆ<br /><em>- ಗೋವಿಂದ ರೆಡ್ಡಿ, ಸಿಇಒ, ಜಿಲ್ಲಾ ಪಂಚಾಯ್ತಿ, ವಿಜಯಪುರ</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>