‘ಈ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಹುಟ್ಟುವ ಮಗುವನ್ನು ರಾಮ ಮತ್ತು ಸೀತಾದೇವಿ ಪ್ರತಿರೂಪವೆಂದು ಪರಿಗಣಿಸಿ ಹೆರಿಗೆ ಸಂಪೂರ್ಣ ಉಚಿತವಾಗಿ ನೆರವೇರಿಸುವಂತೆ ಆಸ್ಪತ್ರೆ ಮಾಲೀಕ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಪೇಕ್ಷೆಯಾಗಿದೆ. ಅಯೋಧ್ಯೆಯಲ್ಲಿ ಜರುಗುವ ರಾಮ ಮಂದಿರದ ಉದ್ಘಾಟನೆಯ ಸಮಯವನ್ನು ಸಾರ್ಥಕಗೊಳಿಸುವ ಉದ್ದೇಶದಿಂದ ಉಚಿತ ಕೊಡುಗೆ ನೀಡಲಾಗುತ್ತಿದೆ’ ಎಂದು ಜೆಎಸ್ಎಸ್ ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಶರಣ ಮಳಖೇಡ್ಕರ್ ತಿಳಿಸಿದ್ದಾರೆ.