ವಿಜಯಪುರ: 'ಗುಮ್ಮಟನಗರಿ' ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಸೋಮವಾರ ಅಚರಿಸಲಾಯಿತು.
ಜಿಟಿಜಿಟಿ ಮಳೆ, ದಟ್ಟ ಮೋಡ ಕವಿದ ವಾತಾವರಣದ ನಡುವೆಯೂ ಶಾಲೆ, ಕಾಲೇಜು, ಸರ್ಕಾರಿ ಕಚೇರಿ, ಕೋರ್ಟ್, ಸಂಘ, ಸಂಸ್ಥೆಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶಭಕ್ತಿ ಮೆರೆಯಲಾಯಿತು. ದೇಶಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು.
ಕತ್ತಿ ಧ್ವಜಾರೋಹಣ:ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.
ಸ್ವಾತಂತ್ರೋತ್ಸವ ಸಂದೇಶ ನೀಡಿದ ಸಚಿವ ಕತ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸಿದರು.
ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ಅಹಿಂಸೆ, ಸತ್ಯಾಗ್ರಹಗಳ ಮೂಲಕ ಬ್ರಿಟಿಷರನ್ನು ಮಣಿಸಿದ ಸ್ವಾತಂತ್ರ್ಯ ಸಂಗ್ರಾಮ ಅದ್ವಿತೀಯ ಎಂದರು.
ರಾಷ್ಟ್ರಗೀತೆ, ನಾಡಗೀತೆ ಬಳಿಕ ಆಕರ್ಷಕ ಪಥಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಹಾಗೂ
ಮಾಜಿ ಸೈನಿಕರಿಗೆ, ಜಿಲ್ಲೆಯ ವಿವಿಧ ಕ್ಷೇತ್ರದ ಸಾಧಕರಿಗೆ ಸಚಿವರು ಸನ್ಮಾನಿಸಿದರು.